ಬಾರದ ಮಳೆ: ಜಾನುವಾರಿಗಿಲ್ಲ ಮೇವು


Team Udayavani, Feb 8, 2019, 6:55 AM IST

gul-2.jpg

ಚಿಂಚೋಳಿ: ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ವಾಡಿಕೆಗೆ ತಕ್ಕಂತೆ ಮಳೆ ಆಗದೇ ಇರುವುದರಿಂದ ರೈತರು ಬೆಳೆದ ಬೆಳೆಗಳು ತೇವಾಂಶ ಕೊರತೆಯಿಂದಾಗಿ ಹಾನಿಯಾಗಿವೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆಯದೇ ಭೂಮಿಯಲ್ಲಿಯೇ ಕಮರಿಹೋಗಿವೆ. ಹೀಗಾಗಿ ಮೇವು ಮತ್ತು ನೀರಿಲ್ಲದ ಕಾರಣ ಹಿಂದುಳಿದ ಪ್ರದೇಶದ ತಾಲೂಕು ಈಗ ಬರ ಛಾಯೆ ಎದುರಿಸುವಂತಾಗಿದೆ.

ತಾಲೂಕಿನ ಕರಿಕಲ್ಲಿನ ಪ್ರದೇಶ ಎಂದು ಮತ್ತು ಪ್ರತಿ ವರ್ಷ ನೀರು ಹಾಗೂ ಮೇವಿನ ಸಮಸ್ಯೆ ಎದುರಿಸುತ್ತಿರುವ ಮೋಘಾ, ರುಮ್ಮನಗೂಡ, ಸಾಸರಗಾಂವ, ರಾಣಾಪೂರ, ಗಡಿಲಿಂಗದಳ್ಳಿ, ಕೊಟಗಾ, ಚೆಂಗಟಾ, ಚಂದನಕೇರಾ, ಪಸ್ತಪುರ, ವಜೀರಗಾಂವ, ಗಂಜಗಿರಿ, ತಾಡಪಳ್ಳಿ, ಹೂವಿನಬಾವಿ, ರುಸ್ತಂಪುರ, ಸೇರಿ ಬಡಾ ತಾಂಡಾ, ಸೇರಿ ಸಣ್ಣ ತಾಂಡಾಗಳಲ್ಲಿ ಮಳೆ ಇಲ್ಲದ ಕಾರಣ ಹಳ್ಳಕೊಳ್ಳಗಳಲ್ಲಿ ನೀರಿಲ್ಲದೇ ಬಣಗುಡುತ್ತಿವೆ. ಹೀಗಾಗಿ ದನಕರುಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಹೊಲದಲ್ಲಿ ಬೆಳೆದಿರುವ ಬೆಳೆಗಳಾದ ತೊಗರಿ, ಜೋಳ, ಕಡಲೇ ಸೂರ್ಯಕಾಂತಿ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಇದರಿಂದಾಗಿ ಮುಂಗಾರು ಮತ್ತು ಹಿಂಗಾರಿನಲ್ಲಿ ಬೆಳೆಗಳು ಬಿಸಿಲಿನ ತಾಪ ಮತ್ತು ಮಣ್ಣಿನಲ್ಲಿ ತೇವಾಂಶ ಇಲ್ಲದ ಕಾರಣ ತೊಗರಿ ಹೂವುಗಳು ಉದುರಿ ಹೋಗಿವೆ. ಜೋಳ ಬೆಳವಣಿಗೆ ಹಂತದಲ್ಲಿಯೇ ಮುಟುರಿ ಹೋಗಿದೆ. ಬೆಳೆಗಳು ಸಂಪೂರ್ಣ ಕೈಕೊಟ್ಟಿದ್ದರಿಂದ ಬಿತ್ತನೆ ಮಾಡಿದ ರೈತರು ಸಾಲದ ಸುಳಿಯಲ್ಲಿ ಸಿಕ್ಕು ಒದ್ದಾಡುವಂತಾಗಿದೆ. ತಾಲೂಕಿನ ಚಿಂದಾನೂರ, ಚಿಕ್ಕನಿಂಗದಳ್ಳಿ, ಚಿಂಚೋಳಿ, ಗಂಜಗಿರಿ, ಹೊಡೆಬೀರನಳ್ಳಿ ಗ್ರಾಮಗಳಲ್ಲಿ ರೈತರು ಸಾಲ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ನಡೆದಿವೆ.
 
ಗೊಣಗಿ, ಧುತ್ತರಗಾ, ಮುಕರಂಬಾ, ಕಂಚನಾಳ, ಹುಲಸಗೂಡ, ರಟಕಲ್‌ ಗ್ರಾಮಗಳಲ್ಲಿ ಬರದ ಛಾಯೆ ಕಂಡು ಬರುತ್ತಿದೆ .ಅಡವಿಯಲ್ಲಿ ಮೇವು ಇಲ್ಲದ ಕಾರಣ ಚಿಮ್ಮಾಇದಲಾಯಿ, ದಸ್ತಾಪುರ, ಇಂದ್ರಪಾಡ ಹೊಸಳ್ಳಿ ಗ್ರಾಮದ ದನಕರುಗಳನ್ನು ಚಿಂಚೋಳಿ ಪಟ್ಟಣದ ಹತ್ತಿರ ಹರಿಯುವ ಮುಲ್ಲಾಮಾರಿ ನದಿಗೆ ಕರೆ ತಂದು ನೀರು ಕುಡಿಸಿಕೊಂಡು ಹೋಗುತ್ತಿದ್ದಾರೆ. ತಾಲೂಕಿನಲ್ಲಿ ಒಂದು ಮಳೆ ಇಲ್ಲದಿದ್ದರು ಸಹ ಕೆಳದಂಡೆ ಮುಲ್ಲಾಮಾರಿ ಮತ್ತು ಚಂದ್ರಂಪಳ್ಳಿ ಜಲಾಶಯಗಳಿಂದ ಮುಖ್ಯ ಕಾಲುವೆಗೆ ಹರಿದು ಬಿಟ್ಟ ನೀರು ಉಪಯೋಗಿಸಿಕೊಂಡು ಬೆಳೆ ಬೆಳೆಯುತ್ತಿದ್ದ ರೈತರು ಈ ವರ್ಷ ಭಾರಿ ನಿರಾಶೆ ಪಡಬೇಕಾಗಿದೆ. ಏಕೆಂದರೆ ಕೆಳದಂಡೆ ಮುಲ್ಲಾಮಾರಿ ಬಲದಂಡೆ ಮುಖ್ಯಕಾಲುವೆ 80 ಕಿಮೀ ಅಧುನೀಕರಣ ಕಾಮಗಾರಿ ನಡೆಯುತ್ತಿದೆ. ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚು ಇದ್ದರು ಸಹ ಕಾಲುವೆಗಳಿಗೆ ಬಿಡುವಂತಿಲ್ಲ.

ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಳೆದ ನಾಲ್ಕು ತಿಂಗಳ ಹಿಂದೆಯೇ ಇದೆ. ಆದರು ಸಹ ಅರಣ್ಯ ಇಲಾಖೆ ಕಾಡು ಪ್ರಾಣಿಗಳಿಗೆ ನೀರಿನ ತೊಟ್ಟಿ ಇಟ್ಟು ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ. 

ತಾಲೂಕನ್ನು ಸರಕಾರ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದರು ಸಹ ಇಲ್ಲಿ ಯಾವುದೇ ಬರ ಪರಿಹಾರ ಕಾಮಗಾರಿಗಳು ನಡೆಯುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸಗಳು ನಡೆಯುತ್ತಿಲ್ಲ. ತಾಲೂಕಿನಲ್ಲಿ ಜನರು ಬರ ಪರಿಸ್ಥಿತಿ ಎದುರಿಸುತ್ತಿದ್ದರೂ ಜನಪ್ರತಿನಿಧಿಗಳು ಯಾವುದೇ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಡು ಪ್ರಾಣಿಗಳ ಸಂಕಟ ಕೇಳುವರಿಲ್ಲ ಗಡಿಭಾಗದ ಕುಂಚಾವರಂ ವನ್ಯಜೀವಿ ಪ್ರದೇಶದಲ್ಲಿ ಈ ವರ್ಷ ಹೆಚ್ಚು ಮಳೆ
ಆಗದಿರುವ ಕಾರಣ ಅರಣ್ಯದಲ್ಲಿ ನದಿ ಹಳ್ಳ ಕೊಳ್ಳದಲ್ಲಿ ನೀರಿನ ಕೊರತೆಯಿಂದಾಗಿ ಕಾಡುಪ್ರಾಣಿಗಳು ಸಂಕಟಪಡುವಂತಾಗಿದೆ. ಕುಂಚಾವರಂ, ವೆಂಕಟಾಪುರ, ಶಾದೀಪುರ ಗ್ರಾಪಂ ವ್ಯಾಪ್ತಿಯಲ್ಲಿ 17 ಗ್ರಾಮ ಮತ್ತು ತಾಂಡಾಗಳಲ್ಲಿ ಅಂತರ್ಜಲ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಹಾಗಾಗಿ ಕೊಳವೆಬಾವಿಗಳಲ್ಲಿ ನೀರಿಲ್ಲದ ಕಾರಣ ಬೆಳೆಗಳಿಗೆ ಹಾಯಿಸಲು ಆಗುತ್ತಿಲ್ಲ. ಇದರಿಂದಾಗಿ ಕಬ್ಬು, ಅರಶಿಣ,
ಉಳ್ಳಾಗಡಿ ಮತ್ತು ಹಣ್ಣಿನ ಗಿಡಗಳಿಗೆ ನೀರಿಲ್ಲದೆ ಒಣಗಿ ಹೋಗುತ್ತಿವೆ. ಇದರಿಂದ ರೈತರು ಆತಂಕ ಪಡುವಂತಾಗಿದೆ. ಶಿವರೆಡ್ಡಿಪಳ್ಳಿ, ಶಿವರಾಮಪುರ, ಲಚಮಾಸಾಗರ, ಪೋಚಾವರಂ, ಜಿಲವರ್ಷ ರೈತರು ನೀರಿನ ಸಮಸ್ಯೆಯಿಂದಾಗಿ ಬೆಳೆ ಕಟಾವು ಮಾಡದೇ ಹಾಗೆ ಬಿಟ್ಟಿದ್ದಾರೆ.

ಟಾಪ್ ನ್ಯೂಸ್

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.