ಎಚ್‌ಡಿಕೆ ಮೈಸೂರಿಗೆ ಏನು ಕೊಡ್ತಾರೆ?


Team Udayavani, Feb 8, 2019, 7:09 AM IST

m2-hmysori.jpg

ಮೈಸೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಮಂಡಿಸಲಿರುವ ಸಮ್ಮಿಶ್ರ ಸರ್ಕಾರದ 2ನೇ ಮುಂಗಡಪತ್ರದಲ್ಲಿ ಮೈಸೂರು ಜಿಲ್ಲೆಗೆ ಯಾವ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಹಿಂದಿನ ಐದು ವರ್ಷಗಳ ಕಾಲ ಮೈಸೂರಿನವರೇ ಆದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರಿಂದ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಾಗಿದೆ. ಜೊತೆಗೆ ವಿಧಾನಸಭೆ ಚುನಾವಣೆಗೆ ಮುನ್ನ ಸಿದ್ದರಾಮಯ್ಯ ಅವರು ಮಂಡಿಸಿದ್ದ 2018-19ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದ ಸಾಕಷ್ಟು ಯೋಜನೆಗಳು ಇನ್ನೂ ಕಾರ್ಯಗತ ವಾಗಬೇಕಿದೆ.

ನೀರು ತುಂಬಿಸುವ ಯೋಜನೆ: ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಕರೆದಿದ್ದ ಬಜೆಟ್ ಪೂರ್ವ ಸಭೆಯಿಂದ ಹೊರಗುಳಿದಿದ್ದ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿರುವ ತಾರಕ ಜಲಾಶಯಕ್ಕೆ ಸಮರ್ಪಕವಾಗಿ ನೀರು ತುಂಬಿಸುವ ದೃಷ್ಟಿಯಿಂದ ಈಗ ಕಬಿನಿ ಹಿನ್ನೀರಿಗೆ ಅಳವಡಿಸಿರುವ ಪೈಪ್‌ಲೈನ್‌ ವಿಸ್ತರಿಸಬೇಕು.

ಮೈಸೂರು ವಿಶ್ವವಿದ್ಯಾಲಯದಲ್ಲಿ ನಾಡು ಕಂಡ ಅಪ್ರತಿಮ ರೈತ ಹೋರಾಟಗಾರ ದಿ.ಕೆ.ಎಸ್‌.ಪುಟ್ಟಣ್ಣಯ್ಯ ನವರ ಹೋರಾಟ, ಚಿಂತನೆ, ದೂರದೃಷ್ಟಿತ್ವದ ಬಗ್ಗೆ ಅಧ್ಯಯನ ನಡೆಸಲು ಅಧ್ಯ ಯನ ಪೀಠ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ಪತ್ರ ಬರೆದು ಸಲಹೆ ನೀಡಲಾಗಿದೆ.

ರೈತರ ಬೇಡಿಕೆ: ರಾಜ್ಯಕಬ್ಬು ಬೆಳೆಗಾರರ ಸಂಘದಿಂದ ಸರ್ಕಾರ ಸಾಲಮನ್ನಾ ಘೋಷನೆ ಮಾಡಿ ಹಲವು ಷರತ್ತು ಗಳನ್ನು ವಿಧಿಸಿರುವುದರಿಂದ ರೈತರಿಗೆ ಅನುಕೂಲವಾಗುತ್ತಿಲ್ಲ. ಜೊತೆಗೆ ಸರ್ಕಾರ ಬ್ಯಾಂಕ್‌ಗಳಿಗೆ ಸಾಲಮನ್ನಾದ ಹಣ ಪಾವತಿಸಬೇಕು. ಇಲ್ಲವಾದಲ್ಲಿ ರೈತರಿಗೆ ಹೊಸ ಸಾಲ ದೊರೆಯುವುದಿಲ್ಲ. ಬೆಳೆವಿಮೆಯನ್ನು ಆಯಾ ಪ್ರದೇಶಕ್ಕೆ ಅನುಗುಣವಾಗಿ ಮಾಡದೆ ಪ್ರತಿ ರೈತನ ಹೊಲದಲ್ಲಿ ಆದ ನಷ್ಟಕ್ಕೆ ಸಂಬಂಧಿಸಿದಂತೆ ವಿಮೆ ಪಾವತಿಸುವ ಕೆಲಸವಾಗಬೇಕು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿ ಸುವುದು ಮಾತ್ರವಲ್ಲ. ಖರೀದಿ ಭದ್ರತೆ ಯನ್ನೂ ನೀಡಬೇಕು. ಜೊತೆಗೆ ಹಣ್ಣು- ತರಕಾರಿ ಸೇರಿದಂತೆ ರೈತ ಬೆಳೆದ ಎಲ್ಲ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು. ಕಬ್ಬು ಬೆಳೆಗಾರರ ಅನುಕೂಲಕ್ಕಾಗಿ ಕಾನೂನು ತಿದ್ದುಪಡಿತಂದು ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ತರಬೇಕು ಎಂದು ಮನವಿ ಮಾಡಲಾಗಿದೆ.

ದಸರಾ ಪ್ರಾಧಿಕಾರ: ರಾಜ್ಯದ ಪ್ರಮುಖ ಪ್ರವಾಸಿ ತಾಣ ವಾದ ಮೈಸೂರು ನಗರಕ್ಕೆ ನಿಯಮಿತವಾಗಿ ಪ್ರವಾಸಿಗರನ್ನು ಆಕರ್ಷಿಸಲು ಪೂರಕ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ತರಾತುರಿಯಲ್ಲಿ ದಸರಾ ಸಿದ್ಧತೆ ಮಾಡುವ ಬದಲು ದಸರಾ ಪ್ರಾಧಿಕಾರ ರಚಿಸುವಂತೆ ಬಹು ವರ್ಷಗಳ ಬೇಡಿಕೆ ಇದೆ.

ನಿವೇಶನಗಳ ಕೊರತೆಯಿಂದ ಬಡ ವರ್ಗದವರಿಗೆ ವಸತಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲಾಗು ತ್ತಿಲ್ಲ. ಸಮ್ಮಿಶ್ರ ಸರ್ಕಾರ ದಸರಾ ಪ್ರಾಧಿಕಾರ ರಚನೆ ಮಾಡ ಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಜೊತೆಗೆ ಜಿಲ್ಲೆಯವರೇ ಪ್ರವಾಸೋದ್ಯಮ ಸಚಿವರಾಗಿರುವುದರಿಂದ ಜಿಲ್ಲೆಗೆ ಯಾವ ಹೊಸ ಪ್ರವಾಸಿ ಯೋಜನೆಗಳನ್ನು ತರಲಿ ದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಆದಿವಾಸಿಗಳಿಗೆ ಸೌಲಭ್ಯ: ಜಿಲ್ಲೆಯಲ್ಲಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿರುವ ಆದಿವಾಸಿಗಳ ಕುಟುಂಬ ಗಳಿಗಾಗಿ ಹೊಸ ಹಾಡಿಗಳ ನಿರ್ಮಾಣ, ಕೃಷಿಭೂಮಿ, ಮನೆ ಒದಗಿಸುವುದು, ಆದಿವಾಸಿಗಳು ಹೆಚ್ಚಿರುವ ಹುಣಸೂರು, ಎಚ್.ಡಿ.ಕೋಟೆ, ಪಿರಿಯಾಪಟ್ಟಣ ತಾಲೂಕುಗಳಲ್ಲಿ ಬಿರ್ಸಾ ಮುಂಡಾ ಭವನ ನಿರ್ಮಾಣ,

ಆದಿವಾಸಿಗಳ ಹಾಡಿಗಳಲ್ಲಿ ಶಿಶುಪಾಲನ ಕೇಂದ್ರಗಳನ್ನು ತೆರೆಯುವುದು, ಅರಣ್ಯ ಹಕ್ಕು ಸಮಿತಿಗಳ ಬಲವರ್ಧನೆ, ಮೊರ,ಕುಕ್ಕೆ, ಲಾಂಟನ ಕಡ್ಡಿಯಲ್ಲಿ ಪೀಠೊಪಕರಣ ಮಾಡುವ ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಆದಿವಾಸಿ ಕುಟುಂಬಗಳಿಗೆ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.