ದೇಶದ ಆರ್ಥಿಕ ಭದ್ರತೆಯಲ್ಲಿ ಎಲ್‌ಐಸಿ ಪಾತ್ರ ಅಪಾರ


Team Udayavani, Feb 8, 2019, 9:13 AM IST

bid-2.jpg

ಬೀದರ: ದೇಶದ ಆರ್ಥಿಕ ಭದ್ರತೆಯಲ್ಲಿ ಎಲ್‌ ಐಸಿ ಪ್ರತಿನಿಧಿಗಳ ಪಾತ್ರ ಅಪಾರವಾಗಿದೆ ಎಂದು ದಕ್ಷಿಣ ಮಧ್ಯ ವಲಯದ ಅಧ್ಯಕ್ಷ ಮಲ್ಲಿಕಾರ್ಜುನ್‌ ನಾಡಗೌಡ ಅಭಿಪ್ರಾಯಪಟ್ಟರು.

ನಗರದ ಶಿವನಗರದ ಪಾಪನಾಶ ಕಲ್ಯಾಣ ಮಂಟಪದಲ್ಲಿ ಗುರುವಾರ ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ರಾಯಚೂರು ವಿಭಾಗ ಮಟ್ಟದ ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳ ವೃತ್ತಿ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪಂಚವಾರ್ಷಿಕ ಯೋಜನೆಗಳಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಕೋಟಿಗಟ್ಟಲೆ ಹಣ ಹೂಡಲಾಗುತ್ತದೆ. ಇದು ನಿಜಕ್ಕೂ ನಮ್ಮ ಪ್ರತಿನಿಧಿಗಳ ಶ್ರಮದ ಫಲವಾಗಿರುವುದು ಹೆಮ್ಮೆಯ ಸಂಕೇತ ಎಂದರು. 

1956ರಲ್ಲಿ ಭಾರತೀಯ ಜೀವ ವಿಮಾ ನಿಗಮ ಆರಂಭವಾಯಿತು. 2000 ಇಸವಿ ವರೆಗೆ ಇದೊಂದೇ ಏಕಸ್ವಾಮ್ಯ ವಿಮಾ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಿರುವ ಹೆಗ್ಗಳಿಕೆ ಇದೆ. 1956ಕ್ಕೂ ಮುನ್ನ 244 ವಿಮಾ ಕಂಪನಿಗಳು ಕಾರ್ಯ ನಿರ್ವಹಿಸುತ್ತಿದ್ದವು. 1944ರಲ್ಲಿ ಎಸ್‌. ಎಸ್‌. ಅಲಿ ಅವರು ಐಎಲ್‌ಯು ಸಂಘಟನೆ ಹುಟ್ಟು ಹಾಕಿದರು. 1956ರಲ್ಲಿ ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳಿಗೆ ಕೊಡಲಾಗುವ ಕಮಿಷನ್‌ ರದ್ದುಪಡಿಸಲು ಆಗಿನ ಸರ್ಕಾರ ಮುಂದಾದಾಗ ಅಲಿ ಅವರು ದೇಶಾದ್ಯಂತ ಹೋರಾಟ ಮಾಡಿ ಕಮಿಷನ್‌ ರದ್ದತಿ ಬಿಲ್‌ಅನ್ನು ನಿಲ್ಲಿಸುವಲ್ಲಿ ಯಶಸ್ಸು ಕಂಡರು. ಆದ್ದರಿಂದ ಅಲಿ ಅವರನ್ನು ಎಲ್‌ ಐಸಿ ಪಾಲಿನ ಭೀಷ್ಮ ಎಂದು ಕರೆಯಲಾಗುತ್ತದೆ ಎಂದು ವಿವರಿಸಿದರು.

2000ರ ನಂತರ ದೇಶದಲ್ಲಿ ಎಲ್‌ಐಸಿಗೆ ಪ್ರತಿಸ್ಪರ್ಧಿಗಳಾಗಿ 25 ವಿಮಾ ಕಂಪನಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ನಾವಿಂದು ಸ್ಪರ್ಧೆಗಿಳಿಯಬೇಕಿದೆ. ಸಂಘಟನೆಯಲ್ಲಿ ಶಕ್ತಿಯಿದೆ ಎಂಬುದನ್ನು ತೋರಿಸಬೇಕಿದೆ. ವಿದ್ಯೆ ಹಾಗೂ ವಿನಯವನ್ನು
ಮೈಗೂಡಿಸಿಕೊಂಡು ನಮ್ಮ ಪ್ರಾಣ, ಮಾನ ಕಾಪಾಡಿಕೊಳ್ಳಲು ವೃತ್ತಿಪರ ಪ್ರತಿನಿಧಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಹೇಳಿದರು.

ಎಲ್‌ಐಸಿ ರಾಯಚೂರು ಹಿರಿಯ ವಿಭಾಗಾಧಿಕಾರಿ ಕೆ.ಆರ್‌. ವೆಂಕಟೇಶ ಪ್ರಸಾದ ಮುಖ್ಯ ಅತಿಥಿಗಳಾಗಿ ಮಾತನಾಡಿ, ದೇಶಾದ್ಯಂತ ಒಟ್ಟು 113 ವಿಭಾಗೀಯ ಶಾಖೆಗಳು ಕಾರ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ರಾಯಚೂರು ವಿಭಾಗ ಈ ಬಾರಿ ಮೂರನೇ ಸ್ಥಾನಕ್ಕೆ ತಲುಪಿರುವುದು ಹೆಮ್ಮೆಯ ಸಂಗತಿಯಾಗಿದೆ. 

ಇದಕ್ಕೆಲ್ಲ ನಮ್ಮ ಜೀವ ವಿಮಾ ನಿಗಮದ ಅಧಿಕಾರಿಗಳು ಹಾಗೂ ವೃತ್ತಿಪರ ಪ್ರತಿನಿಧಿಗಳಾದ ತಮ್ಮ ಸಮನ್ವಯತೆ ಪ್ರಮುಖ ಕಾರಣವಾಗಿದೆ. ಮುಂದಿನ ಎರಡು ತಿಂಗಳಲ್ಲಿ ಉಳಿದ ಕಾರ್ಯ ಪೂರ್ಣಗೊಳಿಸಿ ಸಶಕ್ತ ಎಲ್‌ಐಸಿ ಕಂಪನಿಯಾಗಿ ನಿಲ್ಲಲು ಕೈ ಜೋಡಿಸಬೇಕೆಂದು ಕರೆ ನೀಡಿದರು. ಜೀವನದಲ್ಲಿ ಮೂರು ಪ್ರಮುಖ ಆಯ್ಕೆಗಳಿವೆ. ಕೇವಲ ಪ್ರತಿನಿಧಿಯಾಗಿ ಕೆಲಸ ಮಾಡುವುದು, ವೃತ್ತಿಪರರತೆಯಾಗಿ ಎದ್ದು ನಿಲ್ಲವುದು. ಇದನ್ನು ಸಂರಕ್ಷಿಸಿಕೊಳ್ಳಲು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕಾಗುತ್ತದೆ ಎಂದರು.

ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ಜಿಲ್ಲಾ ಅಧ್ಯಕ್ಷ ಮಂಜುನಾಥ ಬಿರಾದಾರ, ಎಲ್‌ಐಸಿ ರಾಯಚೂರು ವಿಭಾಗದ ಮಾರುಕಟ್ಟೆ ಪ್ರಬಂಧಕ ಸುಬ್ರಮಣಿಯನ್‌, ಲಿಯಾಫಿ (ಲೈಫ್‌ ಇನ್‌ಶೂರೆನ್ಸ್‌ ಏಜೆಂಟ್ಸ್‌ ಫೆಡರೆಷನ್‌ ಆಫ್‌ ಇಂಡಿಯಾ) ರಾಯಚೂರು ವಿಭಾಗದ ಕಾರ್ಯದರ್ಶಿ ಕೆ.ಮಲ್ಕಾಜಯ್ನಾ, ಕೆ.ತಿರುಮಲರೆಡ್ಡಿ, ಬೀದರ್‌ ಎಲ್‌ಐಸಿ ಶಾಖಾಧಿಕಾರಿ ರಮೇಶ ಗಾಯಬಾ, ಉಪ ಶಾಖಾಧಿಕಾರಿ ಆರ್‌.ಬಸನಗೌಡ, ಎಲ್‌ಐಸಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಎಸ್‌.ಡಿ.ಎಚ್‌. ಬಾಬಾ, ಬಿ.ಈಶ್ವರ, ಬಿ.ನಾಗರಾಜ, ಎಂ.ಕಂದಕೂರ, ರಾಜಶೇಖರ ಲಾಡಿ, ಎಂ.ನಾಗಪ್ಪ , ವೆಂಕಟೇಶ ಉದಬಾಳ, ರಮೇಶ ದಳವಾಯಿ, ಸುಧಿಧೀರ, ಗಣಪತಿ ಸೋಲಪುರೆ ವೇದಿಕೆಯಲ್ಲಿದ್ದರು. ಶಿವಶರಣಪ್ಪ ಹಣಮಶೆಟ್ಟಿ, ವೀರಣ್ಣ ಬ್ಯಾಗೋಟ್ಟಿ, ಧನರಾಜ ಸ್ವಾಮಿ, ಪ್ರಭು ಹಾವಶೆಟ್ಟಿ ಹಾಗೂ ಎಲ್‌ಐಸಿ ಪ್ರತಿನಿಧಿಗಳು ಇದ್ದರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.