ಮುಚಖಂಡಿ ಕೆರೆ ಕಂಡವರ ಪಾಲು!


Team Udayavani, Feb 8, 2019, 9:23 AM IST

8-february-18.jpg

ಬಾಗಲಕೋಟೆ: ಬ್ರಿಟಿಷರ ಕಾಲದಲ್ಲಿ ಅದ್ಬುತ ನಿರ್ಮಾಣದ ಮೂಲಕ ಗಮನ ಸೆಳೆಯುವ ಇಲ್ಲಿನ ಮುಚಖಂಡಿ ಕೆರೆಯ ಫಲವತ್ತಾದ ಮಣ್ಣು ಕಂಡವರ ಪಾಲಾಗುತ್ತಿದೆ. ಸರ್ಕಾರಿ ಕೆರೆಯ ಮಣ್ಣನ್ನು ಕೆಲವರು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡುತ್ತಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂಬ ಅಸಮಾಧಾನ ರೈತ ವಲಯದಿಂದ ಕೇಳಿ ಬಂದಿದೆ.

ಹೌದು, ಬ್ರಿಟಿಷರು 1888ರಲ್ಲಿ ನಿರ್ಮಿಸಿದ ಈ ಕೆರೆ ಇಂದಿಗೂ ಭದ್ರವಾಗಿದೆ. ಸುಮಾರು 782 ಎಕರೆ ವಿಸ್ತಾರದ ಈ ಕೆರೆ ಸಾಕಷ್ಟು ಒತ್ತುವರಿಯಾಗಿದೆ ಎಂಬ ಆರೋಪವೂ ಒಂದೆಡೆ ಇದೆ. ಈ ಕೆರೆಗೆ ಆಲಮಟ್ಟಿ ಹಿನ್ನೀರು ತುಂಬಿಸಲು 12.50 ಕೋಟಿ ಅನುದಾನ ಸಣ್ಣ ನೀರಾವರಿ ಇಲಾಖೆ ಖರ್ಚು ಮಾಡಿದೆ. ಆದರೆ, ಈ ಕೆರೆಯಂಗಳ ಸಂರಕ್ಷಣೆ ಮಾಡಬೇಕಾದ ಜಿಲ್ಲಾ ಮಟ್ಟದ ಕೆರೆಗಳ ಸಂರಕ್ಷಣೆ-ಅಭಿವೃದ್ಧಿ ಮತ್ತು ನಿರ್ವಹಣೆ ಸಮಿತಿ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಸಾಮಾನ್ಯವಾಗಿದೆ.

ಕೆರೆಯ ಮಣ್ಣಿಗೆ ಭಾರಿ ಬೇಡಿಕೆ: ಮುಚಖಂಡಿ ಕೆರೆಯಲ್ಲಿ ಫಲವತ್ತಾದ ಮಣ್ಣಿದೆ. ಈ ಮಣ್ಣಿಗೆ ರೈತರಿಂದ ಹಿಡಿದು, ಉದ್ಯಮಿಗಳ ಬೇಡಿಕೆಯೂ ಹೆಚ್ಚಿದೆ. ರೈತರು, ತಮ್ಮ ಸ್ವಂತ ಟ್ರ್ಯಾಕ್ಟರ್‌ನೊಂದಿಗೆ ಮಣ್ಣು ತೆಗೆದುಕೊಂಡು ಹೋಗಲು ಬಂದರೆ ಅವಕಾಶ ಸಿಗುತ್ತಿಲ್ಲ. ಅದೇ ಪ್ರಭಾವಿಗಳು ಹಗಲು-ರಾತ್ರಿ ಎನ್ನದೇ ಸಾವಿರಾರು ಲೋಡ್‌ ಮಣ್ಣನ್ನು ತೆಗೆದು, ಲಕ್ಷಾಂತರ ಮೊತ್ತಕ್ಕೆ ಮಾರಾಟ ಮಾಡಿದರೂ ಕೇಳುವವರಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಮುಚಖಂಡಿ ಕೆರೆಯ ಸರ್ವೇ ನಂ. 202/3, 202/6 ಮತ್ತು 202/7ರ ಪ್ರದೇಶದಲ್ಲಿ ನಿತ್ಯವೂ ನೂರಾರು ಟಿಪ್ಪರ್‌, ಟ್ರ್ಯಾಕ್ಟರ್‌ ಮೂಲಕ ಮಣ್ಣು ಸಾಗಿಸಲಾಗುತ್ತಿದೆ. ಈ ಮಣ್ಣು ಸಾಗಿಸುವುದರಿಂದ ಕೆರೆಯ ಹೂಳು ಕಡಿಮೆಯಾಗುತ್ತದೆ ಎಂಬ ವಾದವೂ ಒಂದೆಡೆ ಕೇಳಿ ಬರುತ್ತದೆ. ಆದರೆ, ಇಲ್ಲಿ ಸಮಸ್ಯೆ ಬಂದಿರೋದು ಅಲ್ಲದಲ್ಲ. ಕೆರೆಯ ಮಣ್ಣು, ರೈತರ ಹೊಲ ಸೇರುತ್ತಿಲ್ಲ. ಬದಲಾಗಿ ಇಟ್ಟಿಗೆ ಬಟ್ಟಿ ತಯಾರಿಕೆ ಕೇಂದ್ರಗಳ ಪಾಲಾಗುತ್ತಿದೆ.

ಪಕ್ಕದಲ್ಲೇ ಇದ್ರೂ ಕೇಳ್ಳೋರಿಲ್ಲ: ವಿಶೇಷ ಅಂದರೆ, ಈ ಮುಚಖಂಡಿ ಕೆರೆಯ ಪ್ರದೇಶ ಜಿಲ್ಲಾಡಳಿತ ಭವನದ ಅಣತಿ ದೂರದಲ್ಲಿದೆ. ಪೊಲೀಸ್‌ ವಸತಿ ಗೃಹ, ಪೊಲೀಸ್‌ ಕ್ರೀಡಾಂಗಣ ಹೊಂದಿಕೊಂಡೇ ಕೆರೆಯ ಪ್ರದೇಶವಿದ್ದು, ನಿತ್ಯ ಟ್ರ್ಯಾಕ್ಟರ್‌, ಟಿಪ್ಪರ್‌, ಜೆಸಿಬಿಗಳ ಸದ್ದು ಪೊಲೀಸರ ಕಿವಿಗೆ ಬಿದ್ದರೂ ಕೇಳಿಯೂ ಕೇಳಿಸದಂತೆ ವರ್ತಿಸುತ್ತಾರೆ. ತಮ್ಮ ಕೆರೆಯ ಮಣ್ಣು, ಬೇರೆ ವ್ಯಕ್ತಿಗಳು, ಮಾರಾಟ ಮಾಡುತ್ತಿರುವುದು ಸಣ್ಣ ನೀರಾವರಿ ಇಲಾಖೆಯ ಗಮನಕ್ಕಿದ್ದರೂ, ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ, ಅಕ್ಕ-ಪಕ್ಕದ ರೈತರ ಆರೋಪ.

ಮಣ್ಣು ಮಾರಾಟ ಮಾಫಿಯಾ: ಸರ್ಕಾರಿ (ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿದೆ) ಕೆರೆಯ ಮಣ್ಣು ಮಾರಾಟ ಮಾಡಿ, ಲಕ್ಷಾಂತರ ದುಡ್ಡು ಮಾಡಿಕೊಳ್ಳುವ ಮಾಫಿಯಾ ಕಾರ್ಯ ನಿರ್ವಹಿಸುತ್ತಿದೆ. ಇದರಲ್ಲಿ ಪ್ರಭಾವಿಗಳೇ ಹೆಚ್ಚಿದ್ದಾರೆ ಎಂಬ ಆರೋಪವೂ ಇದೆ. ಆದರೆ, ಅದನ್ನು ನಿಯಂತ್ರಣದಲ್ಲಿಡುವ ದಕ್ಷತೆ ಯಾರೂ ತೋರಿಸುತ್ತಿಲ್ಲ. ಒಂದು ಲೋಡ್‌ ಮಣ್ಣನ್ನು 2ರಿಂದ 3 ಸಾವಿರ ಮೊತ್ತಕ್ಕೆ ಮಾರಾಟ ಮಾಡಲಾಗುತ್ತಿದೆ. ಅದು ಗದ್ದನಕೇರಿ ಕ್ರಾಸ್‌ ಸುತ್ತ-ಮುತ್ತ ಇರುವ ಇಟ್ಟಿಗೆ ಬಟ್ಟಿಗಳಿಗೆ ಈ ಕೆರೆಯ ಮಣ್ಣನ್ನೇ ಸಾಗಿಸಲಾಗುತ್ತಿದೆ. ಹಗಲು-ರಾತ್ರಿ ನಿತ್ಯ ಜೆಸಿಬಿ ಮೂಲಕ ಮಣ್ಣು ಎತ್ತಿಹಾಕಿ, ಟಿಪ್ಪರ್‌- ಟ್ರ್ಯಾಕ್ಟರ್‌ ವಾಹನಗಳು ಮಣ್ಣು ಸಾಗಿಸುತ್ತವೆ. ಇಟ್ಟಿಗೆ ಮಾಡಲು ಅತ್ಯಂತ ಫಲವತ್ತಾದ ಮಣ್ಣು ಇದಾಗಿದ್ದು, ಬೇಡಿಕೆಯೂ ಹೆಚ್ಚುತ್ತಿದೆ. ಹೀಗಾಗಿ ಮುಚಖಂಡಿ ಕೆರೆಯ ಮಣ್ಣು ಮಾರಾಟ ಮಾಡುವವರ ಜಾಲವೂ ಬೆಳೆಯುತ್ತಿದೆ. ಒಂದು ಅಂದಾಜಿನ ಪ್ರಕಾರ ಒಂದು ತಿಂಗಳಿಗೆ ಕನಿಷ್ಠ 10ರಿಂದ 12 ಲಕ್ಷ ಮೊತ್ತದ ಮಣ್ಣು ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ.

ರೈತರ ವಾದವೇನು?: ಕೆರೆಯ ಮಣ್ಣು ರೈತರಾಗಲಿ, ಪ್ರಭಾವಿಗಳಾಗಲಿ ಅಥವಾ ಇನ್ಯಾರೇ ತುಂಬಿಕೊಂಡು ಹೋಗಲಿ. ಆದರೆ, ಕೆರೆಯಲ್ಲಿ ನಿರ್ದಿಷ್ಟು ವ್ಯಕ್ತಿಗಳು, ತಮ್ಮ ಜೆಸಿಬಿ, ಟಿಪ್ಪರ್‌, ಟ್ರ್ಯಾಕ್ಟರ್‌ನೊಂದಿಗೆ ಇರುತ್ತಾರೆ. ನಾವು ಯಾರೇ ನಮ್ಮ ಸ್ವಂತ ಟ್ರ್ಯಾಕ್ಟರ್‌ ತೆಗೆದುಕೊಂಡು ಹೋದರೆ, ಮಣ್ಣು ಸಾಗಿಸಲು ಬಿಡುವುದಿಲ್ಲ. ಕೆಲವರಂತೂ ತಮ್ಮ ಸ್ವಂತ ಹೊಲದಲ್ಲಿನ ಮಣ್ಣು ಕೊಟ್ಟಂತೆ ದೌರ್ಜನ್ಯ ನಡೆಸುತ್ತಾರೆ. ಈ ಕುರಿತು ಹಲವು ಬಾರಿ ಸಂಬಂಧಿಸಿದವರ ಗಮನಕ್ಕೆ ತಂದಿದ್ದೇವೆ. ಕೆಲವರ ದಬ್ಟಾಳಿಕೆ ತಡೆಯಲು ಯಾರೂ ಮುಂದಾಗುತ್ತಿಲ್ಲ ಎಂಬುದು ರೈತರ ಆಕ್ರೋಶವಾಗಿದೆ.

ಗುತ್ತಿಗೆದಾರರಿಗೂ ಆಸರೆ !
ಈ ಕೆರೆಯಂಗಳ ಹಲವು ಗುತ್ತಿಗೆದಾರರಿಗೂ ಆಸರೆಯಾಗಿದೆ. ನವನಗರ ಯೂನಿಟ್-2ರಲ್ಲಿನ ವಿವಿಧ ರಸ್ತೆ ಕಾಮಗಾರಿ, ಹೆದ್ದಾರಿ ಸಹಿತ ಹಲವು ಕಾಮಗಾರಿಗಳಿಗೆ ಈ ಕೆರೆಯ ಸುತ್ತಲಿನ ಸರ್ಕಾರಿ ಜಾಗೆಯ ಗರಸು ಸಾಗಿಸುತ್ತಾರೆ. ಇದರಿಂದ ಕೆರೆಯಂಗಳದ ಅಂದ ಹದಗೆಡುವ ಜತೆಗೆ ದೊಡ್ಡ ದೊಡ್ಡ ತಗ್ಗು ಬಿದ್ದಿವೆ. ಲಕ್ಷಾಂತರ ಲೋಡ ಗರಸು-ಮಣ್ಣು ಇಲ್ಲಿ ನಿತ್ಯ ಲೂಟಿಯಾಗುತ್ತಿದೆ ಎನ್ನಲಾಗಿದೆ.

ರೈತರಿಗೆ ಕೆರೆಯ ಮಣ್ಣು ತುಂಬಿಕೊಂಡು ಹೋಗಲು ಈ ಹಿಂದೆ ಅವಕಾಶ ಕೊಡಲಾಗಿತ್ತು. ಆದರೆ, ಯಾರೋ ಬಂದು, ಅಕ್ರಮವಾಗಿ ಮಣ್ಣು ತುಂಬಿಕೊಂಡು, ಬೇರೆಡೆ ಮಾರಾಟ ಮಾಡಲು ಅವಕಾಶವಿಲ್ಲ. ಮುಚಖಂಡಿ ಕೆರೆಯ ಮಣ್ಣು ಮಾರಾಟ ಮಾಡುತ್ತಿರುವ ಕುರಿತು ನನ್ನ ಗಮನಕ್ಕೆ ಬಂದಿರಲಿಲ್ಲ. ನಾನು ಈಚೆಗಷ್ಟೇ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಕೆರೆಗೆ ಭೇಟಿ ನೀಡಿ, ಅಕ್ರಮವಾಗಿ ಮಣ್ಣು ಮಾರಾಟ ನಡೆದಿದ್ದರೆ ಕ್ರಮ ಕೈಗೊಳ್ಳಲಾಗುವುದು.
•ಶಂಭುಲಿಂಗ ಹೆರಲಗಿ,
 ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ, ಸಣ್ಣ ನೀರಾವರಿ ಇಲಾಖೆ

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.