ಕೆಎಸ್ಸಾರ್ಟಿಸಿ ಸಿಬ್ಬಂದಿ ಶಿಸ್ತು ಮೈಗೂಡಿಸಿಕೊಳ್ಳಲಿ


Team Udayavani, Feb 8, 2019, 11:19 AM IST

chikk-2.jpg

ಚಿಕ್ಕಮಗಳೂರು: ಕೆಎಸ್ಸಾರ್ಟಿಸಿ ನಿಗಮದ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಾಗ ಶಿಸ್ತು ಮೈಗೊಡಿಸಿಕೊಳ್ಳಬೇಕು ಎಂದು ಹಿರಿಯ ನ್ಯಾಯಾಧೀಶರಾದ ಬಸವರಾಜ್‌ ಚೆಂಗಟ್ಟಿ ಹೇಳಿದರು.

ನಗರದ ಹೊರವಲಯದಲ್ಲಿರುವ ಕೆಎಸ್ಸಾರ್ಟಿಸಿ ತಾಲೂಕು ಘಟಕದ ಡಿಪೋದಲ್ಲಿ ಆಯೋಜಿಸಿದ್ದ ಅಪಘಾತ ರಹಿತ ಚಾಲಕರಿಗೆ ಪುರಸ್ಕಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸನ್ಮಾನ ಸಮಾರಂಭ ಸನ್ಮಾನಿತರ ಕುಟುಂಬಕ್ಕೆ ಸಂತೋಷ ನೀಡುವುದಲ್ಲದೇ ಇಡೀ ಘಟಕಕ್ಕೆ ಸ್ಫೂರ್ತಿದಾಯಕ ಎಂದರು.

ಚಾಲಕರಿಗೆ ಕಾನೂನಿನ ಅರಿವುವಿರಬೇಕು. ವಾಹನ ಚಾಲನೆ ಮಾಡುವಾಗ ಸಹನೆ, ಶಿಸ್ತು ಅಳವಡಿಸಿಕೊಳ್ಳಬೇಕು. ಇದರಿಂದ ಸುರಕ್ಷತಾ ಚಾಲನೆ ಸಾಧ್ಯವಾಗುತ್ತದೆ. ಕಾನೂನಿನ ಅರಿವಿಲ್ಲದಿರುವುದು ಅಕ್ಷಮ್ಯ ಅಪರಾಧ. ಜನಸಾಮಾನ್ಯರು ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳುವ ಅವಶ್ಯವಿಲ್ಲ. ಜೀವನಕ್ಕೆ ಅವಶ್ಯವಿರುವ ಪ್ರಾಥಮಿಕ ಕಾನೂನುಗಳ ಅರಿವಿರಬೇಕು ಎಂದು ಹೇಳಿದರು.

ಹಿಂದಿನ ಕಾಲದಲ್ಲಿ ಧರ್ಮ ಎಂಬುದನ್ನೇ ಆಧುನಿಕ ದಿನಮಾನಗಳಲ್ಲಿ ಕಾನೂನಾಗಿ ಮಾರ್ಪಾಡಿಸಲಾಗಿದೆ. ಬಸವಣ್ಣನವರ ಕಳಬೇಡ, ಕೊಲ್ಲಬೇಡ ವಚನ ಭಾರತ ದಂಡಸಂಹಿತೆಯ ಹಲವು ಕಲಂಗಳನ್ನು ಸೂಚಿಸುತ್ತದೆ ಎಂದರು.

ಸಹಾಯಕ ಅಭಿಯೋಜಕ ರಾಘವೇಂದ್ರರಾಯಕರ್‌ ಮಾತನಾಡಿ, ಸಾರಿಗೆ ಸಿಬ್ಬಂದಿ ಬಹು ಒತ್ತಡದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಅಪಘಾತಗಳನ್ನು ಯಾರೆ ಚಾಲಕರಾದರೂ ಬೇಕೆಂದು ಮಾಡುವುದಿಲ್ಲ. ಆದರೆ, ಕೆಲವು ಪ್ರಕರಣಗಳಲ್ಲಿ ತಮ್ಮದಲ್ಲ ತಪ್ಪಿಗೆ ಕೆಎಸ್‌ಆರ್‌ಟಿಸಿಯ ಚಾಲಕ ಸಿಬ್ಬಂದಿ ಶಿಕ್ಷೆ ಅನುಭವಿಸಬೇಕಾದುದು ವಿಷಾದನೀಯ ಎಂದು ವಿಷಾದ ವ್ಯಕ್ತಪಡಿಸಿದರು.

ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎಸ್‌. ವೆಂಕಟೇಶ್‌ ಮಾತನಾಡಿ, ಚಾಲಕ ಎಂಬುದು ಕೇವಲ ಹುದ್ದೆಯಲ್ಲ. ಅದು ಹಲವು ಜನರ ಕನಸು, ಭವಿಷ್ಯ, ಬದುಕುಗಳನ್ನು ಸುರಕ್ಷತೆಯಿಂದ ಸಾಗಿಸುವ ಮಹೋನ್ನತ ಜವಾಬ್ದಾರಿ. ಅದನ್ನು ನಿರ್ಲಕ್ಷ ್ಯತೆಯಿಂದ ಕಾರ್ಯನಿರ್ವಹಿಸಿದ್ದಲ್ಲಿ ಹಲವು ಮಂದಿಯ ಭವಿಷ್ಯ, ಕನಸು ಆಶೋತ್ತರಗಳು ಮಣ್ಣುಪಾಲಾಗುವ ಸಂಭವವಿದ್ದು, ಚಾಲಕರು ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಜಾಗೃತಿ ವಹಿಸಬೇಕು ಎಂದರು.

ಕೆಎಸ್ಸಾರ್ಟಿಸಿ ಅಧಿಕಾರಿ ನಾಗರಾಜು ಮೂರ್ತಿ ಮಾತನಾಡಿ, ಚಿಕ್ಕಮಗಳೂರು ಘಟಕ ಆರಂಭವಾಗಿಂದಲೂ ಅಪಘಾತ ರಹಿತ ಚಾಲನೆ, ತಾಂತ್ರಿಕ ಪರಿಣಿತಿ, ವೈಜ್ಞಾನಿಕ ಯೋಜನೆಗಳ ಅನುಷ್ಠಾನ ಸೇರಿದಂತೆ ಹಲವು ವಿಭಾಗಗಳಲ್ಲಿ ಅತ್ಯುತ್ನತ ಸೇವೆ ಸಲ್ಲಿಸಿದ್ದಕ್ಕಾಗಿ ರಾಜ್ಯ ಮಟ್ಟದ 8 ಚಿನ್ನದ ಪದಕ ಮತ್ತು 131 ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಜಿಲ್ಲಾ ಘಟಕ ಪ್ರತಿಷ್ಠಿತ ರಾಷ್ಟ್ರಪತಿ ಪದಕಗಳನ್ನು ಸತತವಾಗಿ ತನ್ನ ಮಡಿಲಿಗೆ ಹಾಕಿಕೊಂಡಿದೆ ಎಂದರು.

ಇಲಾಖೆಯ ವಾಹನಗಳ ಅಪಘಾತಗಳ ಸಂಖ್ಯೆ ಇಳಿಮುಖಗೊಳಿಸಲು ಪ್ರತಿವರ್ಷ ರಸ್ತೆ ಸುರಕ್ಷತಾ ದಿನ ಆಚರಿಸಿ ಅಪಘಾತ ತಡೆಗಟ್ಟಲು ಜಾಗೃತಿ ಮೂಡಿಸುವುದು ಮತ್ತು ವೈಜ್ಞಾನಿಕ ಯೋಜನೆಗಳನ್ನು ಜಾರಿಗೊಳಿಸುವುದು, ಚಾಲಕರಿಗೆ ವೈದ್ಯಕೀಯ ತಪಾಸಣೆ, ವಾಹನಗಳ ತಾಂತ್ರಿಕ ದೋಷ ನಿವಾರಣೆ ಸೇರಿದಂತೆ ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು.

ವಿಭಾಗೀಯ ನಿಯಂತ್ರಣಾಧಿಕಾರಿ ಅನಿಲ್‌ಕುಮಾರ್‌, ಅಧಿಕಾರಿಗಳಾದ ಅರುಣ್‌, ಸುಮಾ ಇತರರಿದ್ದರು.

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.