ಸಾಗುವಳಿ ಸಕ್ರಮ:ಅರ್ಜಿ ಸಲ್ಲಿಸಲು ಜನಸ್ನೇಹಿ ಕೇಂದ್ರದ ಮುಂದೆ ಜನಜಂಗುಳಿ
Team Udayavani, Feb 9, 2019, 12:30 AM IST
ಕೋಟ: ಸರಕಾರಿ ಭೂಮಿಯಲ್ಲಿ ಅನಧಿಕೃತ ಸಾಗುವಳಿ ಮಾಡಿರುವ ಜಾಗವನ್ನು ಸಕ್ರಮ ಗೊಳಿಸಿಕೊಳ್ಳುವುದಕ್ಕಾಗಿ ನಮೂನೆ 57ರಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅರ್ಜಿ ಸಲ್ಲಿಸಲು ಆಗಮಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದಾಗಿ ಕೋಟ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.ಈ ಮೊದಲು ಕೈಬರಹದ ಮೂಲಕ ತಾಲೂಕು ಕಚೇರಿಗಳಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇದ್ದು, ಇದೀಗ ಅದನ್ನು ರದ್ದುಪಡಿಸಿ ತಂತ್ರಾಂಶದ ಮೂಲಕ ಜನಸ್ನೇಹಿ ಕೇಂದ್ರದಲ್ಲಿ ನಮೂದಿಸಲು ಸೂಚಿಸಲಾಗಿದೆ. ಹೀಗಾಗಿ ಏಕಾಏಕಿ ಜನರು ಅರ್ಜಿಸಲ್ಲಿಸಲು ಮುಗಿಬೀಳುತ್ತಿದ್ದಾರೆ.
ಇತರ ಕೆಲಸಗಳಿಗೆ ಹಿನ್ನಡೆ
ಪ್ರತಿದಿನ ನೂರಾರು ಮಂದಿ ಸರತಿಯ ಸಾಲಿನಲ್ಲಿ ನಿಲ್ಲುತ್ತಿರುವುದರಿಂದ ಜನಸ್ನೇಹಿ ಕೇಂದ್ರದ ಇತರ ಕೆಲಸ-ಕಾರ್ಯಗಳಿಗೆ ಹಿನ್ನಡೆ ಯಾಗಿದೆ, ಕೆಲವೊಂದು ತುರ್ತು ದಾಖಲೆಗಳನ್ನು ಪಡೆಯಲು ಸಮಸ್ಯೆಯಾಗುತ್ತಿದೆ.
ಕಾಲಾವಕಾಶವಿದ್ದರೂ ಕೇಳುತ್ತಿಲ್ಲ
ಅರ್ಜಿ ಸಲ್ಲಿಕೆಗೆ 16-3-2019ರ ವರೆಗೆ ಕಾಲಾವಕಾಶವಿದೆ. ಹೀಗಾಗಿ ಅವಸರ ಮಾಡುವ ಅಗತ್ಯವಿಲ್ಲ. ಎಂದು ಮನವಿ ಮಾಡಿದರೂ ಜನರು ಕೇಳುತ್ತಿಲ್ಲ ಹಾಗೂ ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಪ್ರತ್ಯೇಕ ಕೌಂಟರ್ಗೆ ಆಗ್ರಹ
ಕೋಟದಲ್ಲಿ ಕೇವಲ ಒಂದೇ ಕಂಪ್ಯೂಟರ್ ಹಾಗೂ ಸಿಬಂದಿ ಇದ್ದು ಎಲ್ಲ ಕೆಲಸಗಳನ್ನು ಒಟ್ಟಿಗೆ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ನಮೂನೆ 57ರ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಬೇಕು, ಇತರ ಕೆಲಸಗಳು ಸಾಂಗವಾಗಿ ನಡೆಯುವಂತೆ ಮಾಡಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
3 ದಿನಗಳಿಂದ ಬರುತ್ತಿದ್ದೇನೆ
ನಮೂನೆ 57ರ ಅರ್ಜಿ ಸಲ್ಲಿಸಲು ಮೂರು ದಿನದಿಂದ ಈ ಕೇಂದ್ರಕ್ಕೆ ಬರುತ್ತಿದ್ದೇನೆ. ಆದರೆ ಜನದಟ್ಟಣೆಯ ಕಾರಣದಿಂದ ಸಾಧ್ಯವಾಗುತ್ತಿಲ್ಲ. ಮುಂದಿನ ಒಂದು ತಿಂಗಳು ಕೂಡ ಸಾರ್ವಜನಿಕರಿಗೆ ಇದೇ ರೀತಿ ಸಮಸ್ಯೆಯಾಗಲಿದೆ. ಆದ್ದರಿಂದ ಇಲ್ಲಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಬೇಕು.
– ಶಕೀಲಾ ಹೆಗ್ಡೆ,
ಅರ್ಜಿ ಸಲ್ಲಿಸಲು ಬಂದವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!