ಮಹಿಳೆಯರಿಗೆ ಸೋಲು


Team Udayavani, Feb 9, 2019, 12:30 AM IST

w-5.jpg

ಆಕ್ಲೆಂಡ್‌: ಆತಿಥೇಯ ನ್ಯೂಜಿಲೆಂಡ್‌ ಎದುರಿನ 2ನೇ ಟಿ20 ಪಂದ್ಯವನ್ನೂ ಕಳೆದುಕೊಂಡ ಭಾರತದ ವನಿತೆಯರು ಸರಣಿ ಸೋಲಿನ ಆಘಾತಕ್ಕೆ ಸಿಲುಕಿದ್ದಾರೆ. ಶುಕ್ರವಾರ ಆಕ್ಲೆಂಡ್‌ನ‌ಲ್ಲಿ ನಡೆದ ಜಿದ್ದಾಜಿದ್ದಿ ಮುಖಾಮುಖೀಯಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ 4 ವಿಕೆಟ್‌ಗಳಿಂದ ಎಡವಿತು.

ಗೆದ್ದು ಸರಣಿಯನ್ನು ಜೀವಂತವಾಗಿ ಉಳಿಸಿಕೊಳ್ಳಬೇಕಿದ್ದ ಒತ್ತಡದಲ್ಲಿದ್ದ ಭಾರತ ಮೊದಲು ಬ್ಯಾಟಿಂಗ್‌ ನಡೆಸಿ 6 ವಿಕೆಟಿಗೆ 135 ರನ್ನುಗಳ ಸಾಮಾನ್ಯ ಮೊತ್ತ ದಾಖಲಿಸಿತು. ಜವಾಬಿತ್ತ ನ್ಯೂಜಿಲೆಂಡ್‌ ಪಂದ್ಯದ ಅಂತಿಮ ಎಸೆತದಲ್ಲಿ ಗೆಲುವಿನ ರನ್‌ ಬಾರಿಸಿತು. ಆಗ 6 ವಿಕೆಟ್ ಉರುಳಿತ್ತು. ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ 23 ರನ್ನುಗಳಿಂದ ಕಳೆದುಕೊಂಡಿತ್ತು. ಸರಣಿಯ ಅಂತಿಮ ಪಂದ್ಯ ಭಾನುವಾರ ಹ್ಯಾಮಿಲ್ಟನ್‌ನಲ್ಲಿ ನಡೆಯಲಿದೆ.

ಅಂತಿಮ ಓವರ್‌, 9 ರನ್‌: ನ್ಯೂಜಿಲ್ಯಾಂಡ್‌ ಗೆಲುವಿಗೆ ಅಂತಿಮ ಓವರಿನಲ್ಲಿ 9 ರನ್‌ ಅಗತ್ಯವಿತ್ತು. ಮಾನ್ಸಿ ಜೋಶಿ ಪಾಲಾದ ಈ ಓವರಿನ ಮೊದಲ ಎಸೆತದಲ್ಲೇ ಕ್ಯಾಟಿ ಮಾರ್ಟಿನ್‌ ಬೌಂಡರಿ ಹೊಡೆದು ಲೆಕ್ಕಾಚಾರವನ್ನು ಸರಳಗೊಳಿಸಿದರು. ಮುಂದಿನ ಎಸೆತದಲ್ಲೇ ಮಾರ್ಟಿನ್‌ ಬೌಲ್ಡ್‌ ಆದಾಗ ಭಾರತದ ಆಸೆ ಪುನಃ ಚಿಗುರಿತು. ಆದರೆ ಹನ್ನಾ ರೋವ್‌ ಮತ್ತು ಲೀಗ್‌ ಕ್ಯಾಸ್ಪರೆಕ್‌ ಸೇರಿಕೊಂಡು ಮುಂದಿನ 4 ಎಸೆತಗಳಲ್ಲಿ ಕ್ರಮವಾಗಿ 2, 1, 1, 1 ರನ್‌ ಬಾರಿಸಿ ತಂಡಕ್ಕೆ ರೋಚಕ ಜಯ ತಂದಿತ್ತರು. 52 ಎಸೆತಗಳಿಂದ 62 ರನ್‌ ಬಾರಿಸಿ (5 ಬೌಂಡರಿ) ತಂಡಕ್ಕೆ ಆಸರೆಯಾದ ಓಪನರ್‌ ಸುಝೀ ಬೇಟ್ಸ್‌ ಅವರಿಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು. ನಾಯಕಿ ಆ್ಯಮಿ ಸ್ಯಾಟರ್‌ವೇಟ್ 23, ಓಪನರ್‌ ಸೋಫಿ ಡಿವೈನ್‌ 19 ರನ್‌ ಮಾಡಿದರು. ಭಾರತದ ಬೌಲಿಂಗ್‌ ಸರದಿಯಲ್ಲಿ ರಾಧಾ ಯಾದವ್‌ ಮತ್ತು ಅರುಂಧತಿ ರೆಡ್ಡಿ ಯಶಸ್ವೀ ದಾಳಿ ಸಂಘಟಿಸಿದರು (ತಲಾ 2 ವಿಕೆಟ್).

ಮಂಧನಾ, ಜೆಮಿಮಾ ಹೋರಾಟ: ಪ್ರವಾಸಿಗರ ಬ್ಯಾಟಿಂಗ್‌ ಸರದಿಯಲ್ಲಿ ಮಿಂಚಿದ್ದು ಜೆಮಿಮಾ ರೋಡ್ರಿಗಸ್‌ ಮತ್ತು ಸ್ಮತಿ ಮಂಧನಾ ಮಾತ್ರ. ಇವರಿಬ್ಬರಿಂದ 2ನೇ ವಿಕೆಟಿಗೆ 70 ರನ್‌ ಒಟ್ಟುಗೂಡಿತು. ಜೆಮಿಮಾ 53 ಎಸೆತ ಎದುರಿಸಿ ಸರ್ವಾಧಿಕ 72 ರನ್‌ ಹೊಡೆದರೆ (6 ಬೌಂಡರಿ, 1 ಸಿಕ್ಸರ್‌), ಮಂಧನಾ 27 ಎಸೆತಗಳಿಂದ 36 ರನ್‌ ಮಾಡಿದರು (3 ಬೌಂಡರಿ, 1 ಸಿಕ್ಸರ್‌). ಉಳಿದವರ್ಯಾರೂ ಎರಡಂಕೆಯ ಗಡಿ ದಾಟಲಿಲ್ಲ.

ಸಂಕ್ಷಿಪ್ತ ಸ್ಕೋರ್‌
ಭಾರತ-20 ಓವರ್‌ಗೆ 135/6 (ಜೆಮಿಮಾ 72, ಮಂಧನಾ 36, ರೋಸ್‌ಮೇರಿ 17ಕ್ಕೆ 2). ನ್ಯೂಜಿಲೆಂಡ್‌ 20 ಓವರ್‌ಗೆ 6 136/6 (ಬೇಟ್ಸ್‌ 62, ಸ್ಯಾಟರ್‌ವೇಟ್ 23, ಅರುಂಧತಿ 22ಕ್ಕೆ 2).

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.