ಈಡೇರದ ಸಿಎಂ ತವರಿನ ಜನರ ನಿರೀಕ್ಷೆ


Team Udayavani, Feb 9, 2019, 6:56 AM IST

ederrada.jpg

ರಾಮನಗರ: ಶುಕ್ರವಾರ ಸಿಎಂ ಕುಮಾರಸ್ವಾಮಿ ಮಂಡಿಸಿದ ಬಜೆಟ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಬಾರಿ ಅವರು ಬಜೆಟ್ ಮೂಲಕ ಕೊಟ್ಟ ಯಾವ ಯೋಜನೆಗಳು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಆದರೂ ಈ ಬಾರಿಯ ಬಜೆಟ್ ಬಗ್ಗೆ ಬೆಟ್ಟದಷ್ಟು ನಿರೀಕ್ಷೆಗಳು ಇದ್ದವು. ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡುವ ಯಾವ ಕಾರ್ಯಕ್ರಮವನ್ನು ಬಜೆಟ್ ಮೂಲಕ ಕೊಟ್ಟಿಲ್ಲ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

2018-19ನೇ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಗೆ ಕೊಟ್ಟಿದ್ದು ಅಲ್ಪವಾಗಿದ್ದರು, ಅನ್ಯ ಪಕ್ಷಗಳ ರಾಜ್ಯ ನಾಯಕರು ರಾಮನಗರಕ್ಕೆ ಬರಪೂರ ಕೊಡುಗೆ ಎಂದೆಲ್ಲ ಹೇಳಿದ್ದರು. ಘೋಷಿಸಿದ್ದ ಯೋಜನೆಗಳು ಪೈಕಿ ಯಾವ ಯೋಜನೆಯೂ ಜಾರಿಯಾಗಿಲ್ಲ. ಇನ್ನೂ ಈ ಬಜೆಟ್‌ನಲ್ಲಿ ಕೊಟ್ಟಿರುವ ಕೆಲವು ಯೋಜನೆಗಳು ತಕ್ಷಣದಲ್ಲೇ ಆರಂಭವಾಗುವುದು ಅನುಮಾನ ಎಂದು ವಿರೋಧ ಪಕ್ಷಗಳ ನಾಯಕರು ಲೇವಡಿಯಾಡಿದ್ದಾರೆ.

ಮಾವು ಸಂಸ್ಕರಣ ಘಟಕ ಸ್ಥಾಪನೆಗೆ ಸ್ವಾಗತ: ಮಾವು ಸಂಸ್ಕರಣ ಘಟಕ ಸ್ಥಾಪನೆಗೆ ಇದ್ದ ಬಹುದಿನಗಳ ಬೇಡಿಕೆಗೆ ಸಿಎಂ ಅವರು ಸ್ಪಂದಿಸಿರುವುದನ್ನು ಜಿಲ್ಲೆಯ ಜನತೆ ಸ್ವಾಗತಿಸಿದ್ದಾರೆ. ರಾಮನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಮಾವು ಉತ್ಪನ್ನಗಳ ಸಂಸ್ಕರಣಾ ಘಟಕ ಹಾಗೂ ಕೋಲಾರದಲ್ಲಿ ಟೊಮೆಟೋ ಉತ್ಪನ್ನಗಳ ಸಂಸ್ಕರಣಾ ಘಟಕ ಸ್ಥಾಪನೆಗೆ 20 ಕೋಟಿ ಅಂದರೆ ಬಹುಶಃ ಮೂರು ಯೋಜನೆಗಳಿಗೆ 20 ಕೋಟಿ ಅನುದಾನ ಬಳಕೆಯಾಗುವುದರ ಬಗ್ಗೆ ಮಾವು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಇಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಈ ಇಷ್ಟು ಅನುದಾನ ಮೀಸಲಿಡಬೇಕಿತ್ತು ಎಂದು ಮಾವು ಬೆಳೆಗಾರರು ಆಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರೇಷ್ಮೆ ಮಾರುಕಟ್ಟೆಗೆ 10 ಕೋಟಿ: ವಿಶ್ವ ದರ್ಜೆಯ ರೇಷ್ಮೆ ಗೂಡು ಮಾರುಕಟ್ಟೆ ಬೇಡಿಕೆಗೆ ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಆದರೆ, ಹಾಲಿ ಇರುವ ರೇಷ್ಮೆ ಗೂಡಿನ ಮಾರುಕಟ್ಟೆಯ ಆಧುನೀಕರಣ ಮತ್ತು ಬಲವರ್ಧನೆಗೆ 10 ಕೋಟಿ ಕೊಟ್ಟಿದ್ದಾರೆ ಎನ್ನುವುದೇ ಸಮಾಧಾನಕರ ವಿಚಾರ. ರೇಷ್ಮೆ ಕೃಷಿ ಮತ್ತು ಉದ್ಯಮದ ಅಭಿವೃದ್ಧಿಗೆ ಸಿಎಂ ಯಾವ ನಿರ್ಧಾರವನ್ನು ಕೈಗೊಂಡಿಲ್ಲ. ರೇಷ್ಮೆ ಗೂಡಿಗೆ ನೀಡುತ್ತಿರುವ ಗುಣಮಟ್ಟದ ರೇಷ್ಮೆ ಗೂಡು ಬೆಳೆಯಲು ಹಾಗೂ ನೂಲು ತೆಗೆಯುವ ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸಬೇಕಿತ್ತು ಎಂದು ರೀಲರ್‌ಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈನೋದ್ಯಮಿಗಳಿಗೆ ಸಂತಸ: ಹೈನೋದ್ಯಮಿಗಳಿಗೆ ಲೀಟರ್‌ ಹಾಲಿಗೆ ನೀಡುವ 5 ರೂ. ಪ್ರೋತ್ಸಾಹ ಧನವನ್ನು 6 ರೂ.ಗೆ ಹೆಚ್ಚಿಸಿರುವುದನ್ನು ಜಿಲ್ಲೆಯ ಹೈನೋದ್ಯಮಿಗಳಿಗೆ ಸಂತಸವಾಗಿದೆ. ಕೆಲವು ಹೈನೋದ್ಯಮಿಗಳು ಫೀಡ್ಸ್‌ ಬೆಲೆಯಲ್ಲಿ ನಿರಂತರ ಹೆಚ್ಚಳವಾಗುತ್ತಿರುವುದರಿಂದ ಪ್ರೋತ್ಸಾಹಧನವನ್ನು 10 ರೂ.ಗೆ ಏರಿಸಿದ್ದರೆ ಇನ್ನೂ ಚೆನ್ನಾಗಿತ್ತು.

ಜಿಲ್ಲೆಯನ್ನು ನಿರಂತರ ಬರಗಾಲ ಕಾಡುತ್ತಿರುವುದರಿಂದ ಕೃಷಿ ಚಟುವಟಿಕೆಗಲು ಕುಂಠಿತವಾಗಿದ್ದು, ಹೈನೋದ್ಯಮ ರೈತರ ಆರ್ಥಿಕ ಪರಿಸ್ಥಿತಿಯನ್ನು ತಕ್ಕ ಮಟ್ಟಿಗೆ ಸುಧಾರಿಸುತ್ತಿದೆ. ಹೀಗಾಗಿ ಪ್ರೋತ್ಸಾಹ ಧನ ಹೆಚ್ಚಳ ಸಂತಸವುಂಟು ಮಾಡಿದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ 500 ಸ್ವಯಂಚಾಲಿತ ಹಾಲು ಶೇಖರಣೆ ಯಂತ್ರ ಖರೀದಿಗೆ 5 ಕೋಟಿ ರೂ. ಅನುದಾನ ಮೀಸಲಿರಿಸಿರುವ ಬಗ್ಗೆಯೂ ರೈತರು ಸ್ವಾಗತಿಸಿದ್ದಾರೆ.

ವೀರಾಪುರ, ಬಾನಂದೂರು ಪ್ರಗತಿಗೆ ಸ್ವಾಗತ: ನಡೆದಾಡುವ ದೇವರು ಶ್ರೀಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು ರಾಮನಗರ ಜಿಲ್ಲೆ ಮಾಗಡಿ ತಾಲೂಕು ವೀರಾಪುರ ಗ್ರಾಮದಲ್ಲಿ ವಿಶ್ವದರ್ಜೆಯ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರ ಸ್ಥಾಪನೆಗೆ 25 ಕೋಟಿ ರೂ. ಹಾಗೂ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜನ್ಮಸ್ಥಳ ಬಿಡದಿ ಬಳಿಯ ಬಾಣಂದೂರು ಗ್ರಾಮದ ಅಭಿವೃದ್ಧಿಗೆ 25 ಕೋಟಿ ರೂ. ಮೀಸಲಿಟ್ಟಿರುವ ಮೈತ್ರಿ ಸರ್ಕಾರದ ಕ್ರಮಕ್ಕೆ ಜಿಲ್ಲೆಯ ಜನತೆ ಸ್ವಾಗತಿಸಿದ್ದಾರೆ.

ಮೇಕೆದಾಟು ಯೋಜನೆಗೇಕೆ ವಿಳಂಬ: ಮೇಕೆದಾಟು ಯೋಜನೆಯಿಂದಾಗುವ ಲಾಭಗಳು ಮತ್ತು ಯೋಜನೆಯ ಡಿಪಿಆರ್‌ ಸಿದ್ಧವಾಗಿರುವ ಬಗ್ಗೆ ಸಿಎಂ ಮಾತನಾಡಿದ್ದಾರೆ. ಆದರೆ, ಈ ಯೋಜನೆಗೆ ಹಣ ಮೀಸಲಿಡದಿರುವುದು ಜಿಲ್ಲೆಯ ಜನರಲ್ಲಿ ಅಸಮಾಧಾನವಿದೆ. ಮೇಕೆದಾಟು ಯೋಜನೆಯ ಹೆಜ್ಜೆಗಳು ಮಂದಗತಿಯಲ್ಲೇ ಸಾಗಲಿವೆ. ಇನ್ನೂ ಉದ್ಯೋಗ ಸೃಷಿ, ಜನ ಸಾಮಾನ್ಯರ ಆರ್ಥಿಕ ಬಲವರ್ಧನೆಗೆ ಬಜೆಟ್‌ನಲ್ಲಿ ಯಾವ ಕ್ರಮಗಳನ್ನು ಕೈಗೊಂಡಿಲ್ಲ. ರಾಮನಗರದ ಕೆರೆಗಳನ್ನು ತುಂಬಿಸುವ ಯೋಜನೆಯ ನಿರೀಕ್ಷೆ ಹುಸಿಯಾಗಿದೆ ಎಂಬ ಬೇಸರವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

* ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.