ಬಾದಾಮಿಗೆ ಅಲ್ಪ; ತೇರದಾಳಕ್ಕೆ ಬಂಪರ್‌


Team Udayavani, Feb 9, 2019, 10:08 AM IST

9-february-15.jpg

ಬಾಗಲಕೋಟೆ: ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಮುಳುಗಡೆ ಜಿಲ್ಲೆ ಬಾಗಲಕೋಟೆಗೆ ಒಂದಷ್ಟು ಯೋಜನೆ ಘೋಷಿಸಿದ್ದಾರೆ. ಆದರೆ, ಬಜೆಟ್‌ಗೂ ಮುನ್ನ ಜಿಲ್ಲೆಯ ಜನರು ಇರಿಸಿದ್ದ ಬಹುಪಾಲು ನಿರೀಕ್ಷೆಗಳು ಹುಸಿಯಾಗಿದ್ದು, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ಪತ್ರಗಳಿಗೂ ಪೂರ್ಣ ಪ್ರಮಾಣದ ಆದ್ಯತೆ ಸಿಕ್ಕಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.

ಹೌದು, ಸಿಎಂ ಕುಮಾರಸ್ವಾಮಿ ಅವರು, ಕಳೆದ ಬಾರಿ ಮಂಡಿಸಿದ ಬಜೆಟ್‌ಗೆ ಹೋಲಿಸಿದರೆ, ಈ ಬಾರಿ ಜಿಲ್ಲೆಗೆ ಒಂದಷ್ಟು ಯೋಜನೆ ಸಿಕ್ಕಿವೆ. ಬಹು ನಿರೀಕ್ಷಿತ ಕೆರೂರ ಏತ ನೀರಾವರಿಗೆ ಸೂಕ್ತ ಅನುದಾನ ನೀಡಲು ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ 550 ಕೋಟಿ ಕೇಳಿದ್ದರು. 16 ಸಾವಿರ ಹೆಕ್ಟೇರ್‌ಗೆ ನೀರಾವರಿ ಕಲ್ಪಿಸುವ ಈ ಯೋಜನೆಗೆ 300 ಕೋಟಿ ಸಿಕ್ಕಿದೆ. ಇನ್ನು ಬಾದಾಮಿ ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ 800 ಕೋಟಿ ಮೀಸಲಿಡಲು ಸಿದ್ದರಾಮಯ್ಯ ಕೇಳಿದ್ದರೆ, 25 ಕೋಟಿ ಅನುದಾನ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಸಿದ್ದು ಪತ್ರಕ್ಕಿಲ್ಲ ಪೂರ್ಣ ಆದ್ಯತೆ: ಮುಖ್ಯವಾಗಿ ಗುಳೇದಗುಡ್ಡ, ಬಾದಾಮಿಗೆ ಪಾಲಿಟೆಕ್ನಿಕ್‌ ಕಾಲೇಜು, ಬಾದಾಮಿಗೆ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು, ಘಟಪ್ರಭಾ ಬಲದಂಡೆ ಯೋಜನೆಯಡಿ ನೀರು ಬಾರದ 20 ಸಾವಿರ ಹೆಕ್ಟೇರ್‌ಗೆ ನೀರಾವರಿ ಕಲ್ಪಿಸಲು 500 ಕೋಟಿ, ಕೆರೆ ತುಂಬುವ ಯೋಜನೆ ಹೀಗೆ ಹಲವು ಯೋಜನೆಗೆ ಅನುದಾನ ಮೀಸಲಿಡುವ ಸಿದ್ದರಾಮಯ್ಯ ಅವರು, ಸ್ವತಃ ಸಿಎಂ ಕುಮಾರಸ್ವಾಮಿ ಹಾಗೂ ಸಂಬಂಧಿತ ಸಚಿವರಿಗೆ ಸರಣಿ ಪತ್ರ ಬರೆದಿದ್ದರೂ, ಸೂಕ್ತ ಮಾನ್ಯತೆ ದೊರೆತಿಲ್ಲ.

ಜಿಲ್ಲೆಯ ಆರು ತಾಲೂಕು (ಹೊಸ ತಾಲೂಕು ಪರಿಗಣಿಸಿದರೆ 9)ಗಳ ಪೈಕಿ ಬಾದಾಮಿ ತಾಲೂಕಿಗೆ ಒಂದಷ್ಟು ಯೋಜನೆ ದೊರೆತಿವೆ. ಹುನಗುಂದ ಕ್ಷೇತ್ರದಲ್ಲೇ ಹಾದು ಹೋದರೂ, ರಾಯಚೂರು ಜಿಲ್ಲೆಗೆ ನೀರಾವರಿ ಕಲ್ಪಿಸುವ ನಂದವಾಡಗಿ ಏತ ನೀರಾವರಿ 2ನೇ ಹಂತಕ್ಕೆ 200 ಕೋಟಿ ದೊರೆತಿದೆ. ಆದರೆ, ಜಿಲ್ಲೆಯ ಮಟ್ಟಿಗೆ ದೊಡ್ಡ ಭರವಸೆಯ ಅನುದಾನ ಬಜೆಟ್‌ನಲ್ಲಿ ಸಿಕ್ಕಿಲ್ಲ.

ವಿಶೇಷ ಪ್ಯಾಕೇಜ್‌ ಇಲ್ಲ: ಜಿಲ್ಲೆಯ ಮುಳುಗಡೆ ಸಮಸ್ಯೆ, ರೈತರಿಗೆ ಸೂಕ್ತ ಭೂ ಪರಿಹಾರ, ನೇಕಾರರ ಸಮಸ್ಯೆ ಪರಿಹಾರ ಹಾಗೂ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿ ಸೇರಿದಂತೆ ಒಟ್ಟು ಮೂರು ಪ್ರತ್ಯೇಕ ವಿಶೇಷ ಪ್ಯಾಕೇಜ್‌ಗಳು ಘೋಷಣೆ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಮುಖ್ಯವಾಗಿ 1 ಲಕ್ಷ ಕೋಟಿ ವೆಚ್ಚದ ಯುಕೆಪಿ ಯೋಜನೆಗೆ ಕನಿಷ್ಠ 10 ಸಾವಿರ ಕೋಟಿ ಸಿಗಬಹುದು ಎಂಬ ಆಶಾ ಭಾವನೆಯೂ ಈ ಭಾಗದ ಜನರಲ್ಲಿತ್ತು. ಆದರೆ, ಯುಕೆಪಿಗೆ ಸಿಕ್ಕಿದ್ದು ಕೇವಲ 1050 ಕೋಟಿ ಎನ್ನಲಾಗಿದೆ.

ತಾಲೂಕು ಘೋಷಣೆ; ಅನುಷ್ಠಾನದ್ದೇ ಚಿಂತೆ: ಹಿಂದೆ ಜಮಖಂಡಿ ತಾಲೂಕು ವ್ಯಾಪ್ತಿಯಲ್ಲಿದ್ದ ರಬಕವಿ-ಬನಹಟ್ಟಿಯನ್ನು ಹೊಸ ತಾಲೂಕನ್ನಾಗಿ ಕಳೆದ ಎರಡು ವರ್ಷಗಳ ಹಿಂದೆ ಘೋಷಿಸಲಾಗಿದೆ. ಅದುವೇ ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬಂದಿಲ್ಲ. ಈಗ ಅದೇ ರಬಕವಿ-ಬನಹಟ್ಟಿ ತಾಲೂಕಿನಲ್ಲಿದ್ದ ತೇರದಾಳ ಪಟ್ಟಣವನ್ನು ಹೊಸದಾಗಿ ತಾಲೂಕು ಘೋಷಣೆ ಮಾಡಲಾಗಿದೆ. ಭೌಗೋಳಿಕ ವಿಸ್ತೀರ್ಣ, ಹಳ್ಳಿಗಳ ವ್ಯಾಪ್ತಿ ಎಲ್ಲವನ್ನೂ ಸರಿದೂಗಿಸಿ, ತೇರದಾಳ ಹೊಸ ತಾಲೂಕು ಘೋಷಣೆ, ವಾಸ್ತವದಲ್ಲಿ ಕಾರ್ಯರೂಪಕ್ಕೆ ಬರಬೇಕು. ಇದು ಕೇವಲ ಘೋಷಣೆಯಾಗಬಾರದು ಎಂಬುದು ಈ ಪಟ್ಟಣದ ಜನರ ಒತ್ತಾಯ.

ಯುಕೆಪಿ ನಿರ್ಲಕ್ಷ್ಯ: ನೀರಿನಲ್ಲೇ ಮುಳುಗಿದರೂ ನೀರಾವರಿ, ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಬಾಗಲಕೋಟೆ ಜಿಲ್ಲೆಯ ಸಮಗ್ರ ನೀರಾವರಿ ಕಲ್ಪಿಸುವ ದಿಟ್ಟ ಕ್ರಮ ಕೈಗೊಳ್ಳುತ್ತಿಲ್ಲ. 1 ಲಕ್ಷ ಕೋಟಿ ಅನುದಾನದ ಅಗತ್ಯತೆ ಇರುವ ಯುಕೆಪಿ ಯೋಜನೆಗೆ ಬಜೆಟ್‌ನಲ್ಲಿ 1,050 ಕೋಟಿ ನೀಡಲಾಗಿದೆ. ಇದು ರೈತರಿಗೆ ಪರಿಹಾರ ಕೊಡಲೂ ಸಾಲಲ್ಲ. 3ನೇ ಹಂತದಲ್ಲಿ 130 ಟಿಎಂಸಿ ಅಡಿ ನೀರು ಬಳಕೆ, 22 ಗ್ರಾಮಗಳ ಸ್ಥಳಾಂತರ, ಪುನರ್ವಸತಿ ಕೇಂದ್ರಗಳ ಸ್ಥಾಪನೆ, ಆಲಮಟ್ಟಿ ಜಲಾಶಯವನ್ನು 524.256 ಮೀಟರ್‌ಗೆ ಎತ್ತರಿಸುವ ಮಹತ್ವದ ಯೋಜನೆಗೆ ಸರ್ಕಾರ, ಗಂಭೀರ ಪ್ರಯತ್ನ ಮಾಡುತ್ತಿಲ್ಲ ಎಂಬ ಆಕ್ರೋಶ ಕೇಳಿ ಬರುತ್ತಿದೆ.

ಒಟ್ಟಾರೆ, ಸಮ್ಮಿಶ್ರ ಸರ್ಕಾರದ 2ನೇ ಬಜೆಟ್‌ನಲ್ಲಿ ಯೋಜನೆ, ಧಾರ್ಮಿಕ ಸಂಸ್ಥೆ ಸಹಿತ 9 ವಿಷಯಗಳಿಗೆ ಒಟ್ಟು 624 ಕೋಟಿ ಅನುದಾನ ಕೊಡುವ ಭರವಸೆ ನೀಡಿದೆ. ಇದು ಕೇವಲ ಘೋಷಣೆಗೆ ಸೀಮಿತವಾಗದೇ, ಕಾರ್ಯರೂಪಕ್ಕೆ ಬರಬೇಕು ಎಂಬುದು ಎಲ್ಲರ ಆಶಯ.

ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?
• ತೇರದಾಳ ನೂತನ ತಾಲೂಕು ಘೋಷಣೆ •    ಆರೋಗ್ಯ ಇಲಾಖೆಯಡಿ ಡಿಜಿಟಲ್‌ ಸ್ತನರೇಖನ ವ್ಯವಸ್ಥೆಗೆ 1 ಕೋಟಿ • ಬಯಲುಸೀಮೆ ಅಭಿವೃದ್ಧಿ ಮಂಡಳಿಗೆ 95 ಕೋಟಿ •    ಬಾದಾಮಿ ವಿಶ್ವವಿಖ್ಯಾತ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಮತ್ತು ಕರಕುಶಲ ಮಾರುಕಟ್ಟೆಯನ್ನಾಗಿ ಅಭಿವೃದ್ಧಿ ಮಾಡಲು 25 ಕೋಟಿ •    ಬಹು ನಿರೀಕ್ಷಿತ ಕೆರೂರ ಏತ ನೀರಾವರಿ ಯೋಜನೆಗೆ 300 ಕೋಟಿ •    ನಂದವಾಡಗಿ 2ನೇ ಹಂತದ ಕಾಮಗಾರಿಗೆ 200 ಕೋಟಿ •    ನೀರಲಕೇರಿಯ ಸಿದ್ಧಾರೂಢ ಜೀರ್ಣೋದ್ಧಾರ ಸಮಿತಿ, ಮಹಾಲಿಂಗಪುರ-ಶಿರೋಳದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮ ಟ್ರಸ್ಟ್‌ ಕಮಿಟಿ, ಮತ್ತು ಉಮಾತಾಯಿ ಟ್ರಸ್ಟ್‌ ಹಾಗೂ ಬಾದಾಮಿ ತಾಲೂಕು ಸೋಮನಕೊಪ್ಪದ ಪೂರ್ಣಾನಂದಸ್ವಾಮಿ ಸೋಲ್‌ ಟ್ರಸ್ಟ್‌ಗೆ ತಲಾ 1 ಕೋಟಿಯಂತೆ ಒಟ್ಟು 3 ಕೋಟಿ ಅನುದಾನ • ಪ್ರಸಕ್ತ ಬಜೆಟ್‌ನಲ್ಲಿ ಒಟ್ಟು 624 ಕೋಟಿ ವಿವಿಧ ಇಲಾಖೆಗಳಡಿ ಘೋಷಣೆ.

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.