ಬಿಜೆಪಿಗೆ ಅಧಿಕಾರದ ಭ್ರಮೆ
Team Udayavani, Feb 10, 2019, 7:20 AM IST
ಭಾರತೀನಗರ: ಬಿಜೆಪಿ ಅಧಿಕಾರದ ಭ್ರಮೆಯಲ್ಲಿದೆ. ಮೈತ್ರಿ ಸರ್ಕಾರ 5 ವರ್ಷ ಆಡಳಿತ ನಡೆಸುವುದರಲ್ಲಿ ಯಾವುದೇ ಸಂಶಯವಿಲ್ಲ. ಕೆಲವು ಗೊಂದಲಗಳು ಸರ್ವೆ ಸಾಮಾನ್ಯ. ಅವುಗಳನ್ನು ನಿಭಾ ಯಿಸುವ ಸಾಮರ್ಥ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ವರಿಷ್ಠರಲ್ಲಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.
ಸಮೀಪದ ಯಡಗನಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 50 ಲಕ್ಷ ರೂ.ನಲ್ಲಿ ಕಾಲೋನಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಬಿಜೆಪಿ ಅಧಿಕಾರ ಪಡೆ ಯಲು ಹಲವು ರೀತಿಯಲ್ಲಿ ಗೊಂದಲ ಸೃಷ್ಟಿಮಾಡುತ್ತಿದೆ. ಅದರಲ್ಲಿ ಸಿಲುಕಿ ಕೊಂಡು ಜನಾಕ್ರೋಶಕ್ಕೆ ಗುರಿಯಾಗುತ್ತಿದೆ ಎಂದು ಹೇಳಿದರು.
ತಮ್ಮ ಅಧಿಕಾರ ಅವಧಿಯಲ್ಲಿ ದ್ವೇಷ ಅಸೂಯೇ ಇಲ್ಲದೆ, ಕ್ಷೇತ್ರದ ಪ್ರತಿ ಗ್ರಾಮಕ್ಕೂ ತೆರಳಿ ಸಮಸ್ಯೆ ಆಲಿಸಿದ್ದೇನೆ. ಯಾವುದೇ ಚ್ಯುತಿಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಪಕ್ಷಗಳು ಯಾವುದೇ ಇರಲಿ ಜನಪ್ರತಿನಿಧಿಗಳು ಜನರ ಹಿತಕಾಪಾಡಲು ಮುಂದಾಗಬೇಕು ಎಂದು ಹೇಳಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿ ಮ್ಮೇಗೌಡ, ಕರಡಕೆರೆ ಹನುಮಂತೇಗೌಡ, ತಾಪಂ ಸದಸ್ಯ ನಂಜುಂಡೇಗೌಡ, ಎಇಇ ಪುಟ್ಟರಾಜು, ಎಇ ಹನುಮಂತು, ಗುತ್ತಿಗೆದಾರ ಕೆ.ರವೀಂದ್ರ, ಮುಖಂಡ ರಾದ ರೈಸ್ಮಿಲ್ ಪುಟ್ಟೇಗೌಡ, ನಂದೀಶ್, ಕೃಷ್ಣ, ಬಸವರಾಜು, ಎಪಿಎಂಸಿ ನಿರ್ದೇಶಕ ಬೋರೇಗೌಡ, ಪುಟ್ಟಲಿಂಗಾಚಾರಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸುಧಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು