ಚಿತ್ರಾವತಿ ಸುಬ್ರಹ್ಮಣ್ಯೇಶ್ವರಸ್ವಾಮಿ ಬ್ರಹ್ಮರಥೋತ್ಸವ ಇಂದು


Team Udayavani, Feb 10, 2019, 7:21 AM IST

chitrava.jpg

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪುರಾಣ ಪ್ರಸಿದ್ಧ ಹಾಗೂ 3 ಶತಮಾನಗಳ ಐತಿಹಾಸಿಕ ಹಿನ್ನೆಲೆ ಇರುವ ಚಿಕ್ಕಬಳ್ಳಾಪುರ ನಗರದ ಹೊರ ವಲಯದಲ್ಲಿರುವ ಚಿತ್ರಾವತಿಯ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿಯ ವಾರ್ಷಿಕ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಚಿತ್ರಾವತಿ ದೇವಾಲಯ ನವ ವಧುವಿನಂತೆ ಸಿಂಗಾರಗೊಂಡಿದ್ದು, ದೇವಾಲಯ ಟ್ರಸ್ಟ್‌ ಜಾತ್ರೆ ಭಾಗವಾಗಿ ಇಡೀ ದೇವಾಲಯಗಳನ್ನು ಸುಣ್ಣ, ಬಣ್ಣಗಳಿಂದ ಅಲಂಕರಿಸುವ ಕಾರ್ಯವನ್ನು ಪೂರ್ಣಗೊಳಿಸಿದೆ. ಕಳೆದ ಶುಕ್ರವಾರದಿಂದಲೇ ಜಾತ್ರೆ ಮಹೋತ್ಸವದ ಪ್ರಯುಕ್ತ ಸುಬ್ರಹ್ಮಣ್ಯೇಶ್ವರ ದೇವರಿಗೆ ವಿವಿಧ ಧಾರ್ಮಿಕ ಕೈಂಕಾರ್ಯಗಳನ್ನು ನೆರವೇರಿಸಲಾಗಿದ್ದು, ಭಾನುವಾರ ಮಧ್ಯಾಹ್ನ 1 ರಿಂದ 2ಗಂಟೆಯವರೆಗೂ ಮಾಘ ಶುದ್ಧ ಷಷ್ಠಿಯಂದು ರಥೋತ್ಸವಕ್ಕೆ ಚಾಲನೆ ದೊರೆಯಲಿದೆ.

ಪೊಲೀಸ್‌ ಇಲಾಖೆ ನಿಗಾ: ಚಿತ್ರಾವತಿ ಜಾತ್ರೆ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾಲಯಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಜಾತ್ರೆಗೆ ಬರುವ ಭಕ್ತರಿಗೆ ವಿವಿಧ ಮೂಲ ಸೌಕರ್ಯಗಳನ್ನು ಕಲ್ಪಿಸಲು ತಾಲೂಕು ಆಡಳಿತ ಅದರಲ್ಲೂ ವಿಶೇಷವಾಗಿ ತಾಪಂ, ಗ್ರಾಪಂಗಳು ಮುತುವರ್ಜಿ ವಹಿಸಿವೆ. ಪೊಲೀಸ್‌ ಇಲಾಖೆ ಹೆಚ್ಚಿನ ನಿಗಾ ವಹಿಸಿದ್ದು, ಹಲವು ಭದ್ರತಾ ಕಾರ್ಯಗಳನ್ನು ಕೈಗೊಂಡಿದೆ.

ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಮಠಮುದ್ರೆ ಎಸ್‌.ಕೃಷ್ಣಮೂರ್ತಿ ಹಾಗೂ ಸಹೋದರರು ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಕೊಡುತ್ತಿದ್ದು, ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ಕೈಗೊಳ್ಳಬೇಕಾದ ಧಾರ್ಮಿಕ ಕಾರ್ಯಕ್ರಮಗಳಿಗೆ ದೇವಾಲಯ ಟ್ರಸ್ಟಿಗಳು ಸಕಲ ಸಿದ್ಧತೆ ಕೈಗೊಂಡಿದ್ದಾರೆ.

ಗಮನ ಸೆಳೆಯುತ್ತಿದೆ ಮಕ್ಕಳ ಆಟಿಕೆ: ಚಿತ್ರಾವತಿ ಜಾತ್ರೆ ಹಿನ್ನಲೆಯಲ್ಲಿ ಆರ್‌ಟಿಒ ಕಚೇರಿ ಪಕ್ಕದಲ್ಲಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿದ್ದು, ವಿಶೇಷವಾಗಿ ಮಕ್ಕಳ ಆಟಿಕೆ ವಸ್ತುಗಳ ಮಾರಾಟ, ಭಕ್ತರಿಗೆ ಬರಗು, ಬತ್ತಾಸು ಮತ್ತಿತರ ಸಿಹಿ ಪದಾರ್ಥಗಳನ್ನು ಮಾರಾಟ ಮಾಡುವ ಮಳಿಗೆಗಳು ತಲೆ ಎತ್ತಿವೆ.

ಮಕ್ಕಳಿಗೆ ತೂಗೂಯ್ನಾಲೆ, ಪುಟಾಣಿ ರೈಲು ಮತ್ತಿತರ ಆಟಗಳನ್ನು ಏರ್ಪಡಿಸಲಾಗಿದೆ. ಚಿತ್ರಾವತಿ ಈಗ ಜಾತ್ರೆಯಿಂದ ಕಂಗೊಳಿಸುತ್ತಿದ್ದು, ವಿವಿಧ ಅಲಂಕಾರಿಕ ಹಾಗೂ ಗೃಹಪಯೋಗಿ ವಸ್ತುಗಳು, ಮಕ್ಕಳ ಆಟದ ಸಾಮಾನುಗಳ ಮಾರಾಟ ಭರದಿಂದ ಸಾಗಿದೆ.

ಕಲ್ಯಾಣಿಗೆ ನೀರು: ಚಿತ್ರಾವತಿ ದೇವಾಲಯದ ಆವರಣದಲ್ಲಿರುವ ಚಕ್ರ ಆಕಾರದ ಕಲ್ಯಾಣಿ ನೋಡಲು ಸುಂದರವಾಗಿದ್ದು, ಜಾತ್ರೆಯ ವೇಳೆ ಭಕ್ತರು ಸ್ನಾನ ಮಾಡಲೆಂದು ಈಗ ಕಲ್ಯಾಣಿಯನ್ನು ನೆರೆಹೊರೆಯ ರೈತರ ಸಹಕಾರದಿಂದ ಕೊಳವೆ ಬಾವಿಗಳ ಮೂಲಕ ಪುಷ್ಕರಣಿಗೆ ನೀರು ತುಂಬಿಸಲಾಗಿದೆ.

ದೇವರ ವಾರ್ಷಿಕ ಬ್ರಹ್ಮರಥೋತ್ಸವದ ವೇಳೆ ಸಹಸ್ರಾರು ಭಕ್ತರು ಈ ಕಲ್ಯಾಣಿಯಲ್ಲಿ ಸ್ನಾನ ಮಾಡುವುದರಿಂದ ದೇವಾಲಯ ಸಮಿತಿ ಈಗಾಗಲೇ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ ನೀರು ಹಾಯಿಸುತ್ತಿದೆ. ಜಾತ್ರೆಗೆ ಬರುವ ಸಹಸ್ರಾರು ಮುಖಂಡರು ದೇವರಿಗೆ ಹರಕೆ ಹೊತ್ತು ಬಂದು ಇಲ್ಲಿ ಕೇಶ ಮುಂಡನ ಮಾಡಿಸುವುದರಿಂದ ಕಲ್ಯಾಣಿಯಲ್ಲಿ ಪುಣ್ಯ ಸ್ನಾನ ಮಾಡಿ ತೆರಳುತ್ತಾರೆ.

ಚಿತ್ರಾವತಿ ಜಾತ್ರೆಗೆ 3 ಶತಮಾನಗಳ ಇತಿಹಾಸ: ಐತಿಹಾಸಿಕ ಚಿತ್ರಾವತಿ ಜಾತ್ರೆ ವೀಕ್ಷಣೆಗೆ ನೆರೆಯ ಆಂಧ್ರ ಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಸಹಸ್ರಾರು ಸಂಖ್ಯೆಯ್ಲಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ವಿಶೇಷವಾಗಿ 3 ಶತಮಾನಗಳ ಇತಿಹಾಸ ಇರುವ ಚಿತ್ರಾ ವತಿಯ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ಈ ಭಾಗದ ಸಹಸ್ರಾರು ಭಕ್ತರ ಆರಾಧ್ಯ ದೈವ.

ವಿಶೇಷವಾಗಿ ಕಿವಿ ಹಾಗೂ ಚರ್ಮ ಕಾಯಿಲೆಯಿಂದ ಬಳಲುವ ರೋಗಿಗಳು ಇಲ್ಲಿ ಹರಕೆ ಮಾಡಿಕೊಂಡರೆ ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ಹೀಗಾಗಿ ಜಾತ್ರೆ ವೇಳೆ ಸಾವಿರಾರು ಜನ ಪಾಲ್ಗೊಳ್ಳುತ್ತಾರೆ. ದೂರದ ಊರುಗಳಿಂದ ಬರುವ ಭಕ್ತರಿಗೆ ಪ್ರಸಾದ ವಿತರಣೆ, ದಾಸೋಹ ಕಾರ್ಯ ನಡೆಯಲಿದೆ. ವಿಧೆವೆಯೊಬ್ಬರು ತಮ್ಮ ಚಿನ್ನಾಭರಣಗಳನ್ನು ಮಾರಾಟ ಮಾಡಿ ಪುಷ್ಕರಣಿಯೊಂದನ್ನು ದೇವಾಲಯದ ಮುಂದೆ ಕಟ್ಟಿಸಿದ್ದು, ಇದು ಹಲಸೂರಮ್ಮ ಕಲ್ಯಾಣಿ ಎಂದು ಪ್ರಸಿದ್ಧವಾಗಿದೆ.

ಟಾಪ್ ನ್ಯೂಸ್

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.