ಆಂಧ್ರಪ್ರದೇಶದಲ್ಲಿ ಮೋದಿಗೆ ಕಾದಿದೆ ಪ್ರತಿಭಟನೆಯ ಸ್ವಾಗತ
Team Udayavani, Feb 10, 2019, 7:58 AM IST
ಹೈದ್ರಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆದಿತ್ಯವಾರದಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಈ ಸಂದರ್ಭದಲ್ಲಿ ಪ್ರಧಾನಿಯವರಿಗೆ ಆಂಧ್ರಪ್ರದೇಶದ ಜನತೆಯಿಂದ ಪ್ರತಿಭಟನೆಯ ಬಿಸಿ ಎದುರಾಗಿದೆ. ‘ನೋ ಮೋರ್ ಮೋದಿ’, ‘ಮೋದಿ ಇಸ್ ಎ ಮಿಸ್ಟೇಕ್’, ‘ಮೋದಿ ನೆವರ್ ಅಗೈನ್’ ಮುಂತಾದ ಸ್ಲೋಗನ್ ಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರು ಮೋದಿ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.
ಇತ್ತ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪ್ರಧಾನಿ ಮೋದಿ ಅವರ ಆಂಧ್ರ ಭೇಟಿಯನ್ನು ‘ಕರಾಳ ದಿನ’ ಎಂದು ಕರೆದಿದ್ದಾರೆ. ಮತ್ತು ಈ ಸಂದರ್ಭದಲ್ಲಿ ತೆಲುಗುದೇಶಂ ಪಕ್ಷದ ಕಾರ್ಯಕರ್ತರು ಗಾಂಧಿ ಮಾದರಿಯ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ನಾಯ್ಡು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ತೆಲುಗುದೇಶಂ ಪಕ್ಷವು ಎನ್.ಡಿ.ಎ. ಮೈತ್ರಿಕೂಟದಿಂದ ಹೊರಬಿದ್ದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.
ಆದಿತ್ಯವಾರದಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ಅಲ್ಲಿ ‘ಪ್ರಜಾ ಚೈತನ್ಯ ಸಭಾ’ ಹೆಸರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ 1.33 ಎಂ.ಎಂ.ಟಿ. ವಿಶಾಖಪಟ್ಟಣಂ ಸ್ಟ್ರೆಟಜಿಕ್ ಪೆಟ್ರೋಲಿಯಂ ರಿಸರ್ವ್ ಅನ್ನು ರಾಷ್ಟ್ರಕ್ಕೆ ಪ್ರಧಾನಮಂತ್ರಿಯವರು ಸಮರ್ಪಿಸಲಿದ್ದಾರೆ. ಇನ್ನು ಕೃಷ್ಣ-ಗೋದಾವರಿ ತೀರದಲ್ಲಿರುವ ಒ.ಎನ್.ಜಿ.ಸಿ.ಯ ವಶಿಷ್ಠ ಮತ್ತು ಎಸ್.1 ಅಭಿವೃದ್ಧಿ ಯೋಜನೆಗಳಿಗೆ ಸಹ ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ