ಕಿವೀಸ್ ನೆಲದಲ್ಲಿ ಟೀಂ ಇಂಡಿಯಾಕ್ಕೆ ಒಲಿಯದ T20 ಸರಣಿ


Team Udayavani, Feb 10, 2019, 10:37 AM IST

kiwis-10-2.jpg

ಹ್ಯಾಮಿಲ್ಟನ್ : ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತ ಬಳಿಕ ನ್ಯೂಝಿಲ್ಯಾಂಡ್ ನೆಲದಲ್ಲೂ ಏಕದಿನ ಸರಣಿ ಗೆಲ್ಲುವ ಮೂಲಕ ತನ್ನ ಪರಾಕ್ರಮವನ್ನು ಮೆರೆದಿತ್ತು. ಆದರೆ ಚುಟುಕು ಕ್ರಿಕೆಟ್ ಸರಣಿಯಲ್ಲಿ ಮಾತ್ರ ಟ್ರೋಫಿ ಗೆಲ್ಲುವ ಬ್ಲೂ ಬಾಯ್ಸ್ ಕನಸು ನನಸಾಗಲೇ ಇಲ್ಲ. ಹ್ಯಾಮಿಲ್ಟನ್ ನಲ್ಲಿ ಇಂದು ನಡೆದ ಮೂರನೇ ಮತ್ತು ಅಂತಿಮ ಟಿ20 ಪಂದ್ಯಾಟದಲ್ಲಿ ಸರ್ವಾಂಗೀಣ ಆಟದ ಪ್ರದರ್ಶನ ನೀಡಿದ ನ್ಯೂಝಿಲ್ಯಾಂಡ್ 2-1ರಿಂದ ಟಿ20 ಸರಣಿ ಗೆದ್ದು ಬೀಗಿತು. ಆ ಮೂಲಕ ಬಹುದೀರ್ಘ ಆಸೀಸ್ – ಕಿವೀಸ್ ಪ್ರವಾಸವನ್ನು ಭಾರತವು ಸೋಲಿನೊಂದಿಗೆ ಕೊನೆಗೊಳಿಸುವಂತಾಯಿತು.

ನ್ಯೂಝಿಲ್ಯಾಂಡ್ ನೀಡಿದ 213 ರನ್ನುಗಳ ಬೃಹತ್ ಗುರಿಯನ್ನು ಬೆನ್ನತ್ತಲಾರಂಭಿಸಿದ ಭಾರತದ ಆರಂಭ ಅಷ್ಟೇನೂ ಆಶಾದಾಯಕವಾಗಿರಲಿಲ್ಲ. ಅನುಭವಿ ಬ್ಯಾಟ್ಸ್ ಮನ್ ಶಿಖರ್ ಧವನ್ (5) ಸಿಡಿಯಲು ವಿಫಲರಾದರು. ನಾಯಕ ರೋಹಿತ್ ಶರ್ಮಾ (38) ಮತ್ತು ವಿಜಯ ಶಂಕರ್ (43) ಸೇರಿಕೊಂಡು ಬಿರುಸಿನ ಆಟಕ್ಕೆ ಮುಂದಾದರು. ಈ ಹಂತದಲ್ಲಿ 43 ರನ್ನುಗಳನ್ನು ಗಳಿಸಿದ್ದ ವಿಜಯ ಶಂಕರ್ ಔಟಾದರು. ಬಳಿಕ ಬಂದ ರಿಷಭ್ ಪಂತ್ ಹೊಡೆಬಡಿಯ ಆಟಕ್ಕೆ ಮುಂದಾದರು. ಆದರೆ 12 ಎಸೆತಗಳಲ್ಲಿ 28 ರನ್ನು ಗಳಿಸಿ ಅವರೂ ಔಟಾದರು. ಬೆನ್ನು ಬೆನ್ನಿಗೆ ರೋಹಿತ್ ಶರ್ಮಾ, ಹಾರ್ಧಿಕ್ ಪಾಂಡ್ಯ (11 ಎಸೆತಗಳಲ್ಲಿ 21 ರನ್) ಮತ್ತು ಧೋನಿ (2) ವಿಕೆಟ್ ಬಿತ್ತು. ಆಗ ಭಾರತದ ಗೆಲುವಿಗೆ 28 ಎಸೆತಗಳಲ್ಲಿ ಇನ್ನೂ 67 ರನ್ನುಗಳ ಅಗತ್ಯವಿತ್ತು.

ಈ ಹಂತದಲ್ಲಿ ದಿನೇಶ್ ಕಾರ್ತಿಕ್ ಅವರಿಗೆ ಜೊತೆಯಾದ ಕುನಾಲ್ ಪಾಂಡ್ಯ ಬಿರುಸಿನ ಆಟವಾಡಲಾರಂಭಿಸಿದರು. ಕಾರ್ತಿಕ್ ಮತ್ತು ಕುನಾಲ್ ಪಾಂಡ್ಯ ಸೇರಿಕೊಂಡು ತಂಡದ ಗೆಲುವಿನ ಹೋರಾಟ ಮುಂದುವರೆಸಿದರಾದರೂ ಫೈನಲ್ ಓವರ್ ಟೆನ್ಷನ್ ಅನ್ನು ಗೆಲ್ಲಲು ಮಾತ್ರ ಅವರಿಬ್ಬರಿಗೂ ಸಾಧ್ಯವಾಗಲಿಲ್ಲ. ದಿನೇಶ್ ಕಾರ್ತಿಕ್ 16 ಎಸೆತಗಳಲ್ಲಿ 33 ರನ್ನುಗಳನ್ನು ಗಳಿಸಿದರೆ, ಪಾಂಡ್ಯ 13 ಎಸೆತಗಳಲ್ಲಿ 26 ರನ್ನುಗಳನ್ನು ಗಳಿಸಿದರು. ಇವರಿಬ್ಬರೂ ಅಜೇಯರಾಗಿ ಉಳಿದರು.


ಫೈನಲ್ ಓವರ್ ಟೆನ್ಷನ್
ಅಂತಿಮವಾಗಿ ಟೀಂ ಇಂಡಿಯಾ ಗೆಲುವಿಗೆ 6 ಎಸೆತಗಳಲ್ಲಿ 16 ರನ್ನುಗಳ ಅಗತ್ಯವಿತ್ತು. ಮೊದಲ ಎಸೆತದಲ್ಲಿ 2 ರನ್ ಬಂತು. ಎರಡನೇ ಎಸೆತ ಡಾಟ್ ಬಾಲ್, ಮೂರನೇ ಎಸೆತ ಮತ್ತೆ ಡಾಟ್ ಬಾಲ್ ಆಯಿತು. ನಾಲ್ಕನೇ ಎಸೆತದಲ್ಲಿ 1 ರನ್ ಬಂತು. ಐದನೇ ಎಸೆತವನ್ನು ಎದುರಿಸಿದ ಪಾಂಡ್ಯ 1 ರನ್ ಮಾತ್ರ ಗಳಿಸಿದರು. ಅಂತಿಮ ಎಸೆತದಲ್ಲಿ 12 ರನ್ನುಗಳ ಅಗತ್ಯವಿತ್ತು ಆದರೆ ಆ ಚೆಂಡನ್ನು ಅಂಪೈರ್ ವೈಡ್ ಎಂದು ಘೋಷಿಸಿದರು, ಅಂತಿಮ ಎಸೆತವನ್ನು ಕಾರ್ತಿಕ್ ಸಿಕ್ಸರ್ ಗೆ ತಳ್ಳಿದರಾದರೂ ಆ ಹೊತ್ತಿಗಾಗಲೇ ಭಾರತದ ಜಯದ ಕನಸು ಕಮರಿ ಹೋಗಿತ್ತು. ಅಂತಿಮವಾಗಿ 4 ರನ್ನುಗಳಿಂದ ಸೋಲುವ ಮೂಲಕ ಕಿವೀಸ್ ನೆಲದಲ್ಲಿ ಟಿ20 ಸರಣಿ ಗೆಲ್ಲುವ ಕನಸು ನನಸಾಗಲಿಲ್ಲ.

►1st Innings News►ಅಂತಿಮ T20 : ಮನ್ರೋ ಮಿಂಚು ; Team India ಟಾರ್ಗೆಟ್ 213: https://bit.ly/2MWv5mh​​​​​​​

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.