ಜನನ-ಮರಣ ನೋಂದಣಿ ಅತ್ಯವಶ್ಯ


Team Udayavani, Feb 10, 2019, 11:37 AM IST

yad-3.jpg

ಯಾದಗಿರಿ: ಸರ್ಕಾರಿ ಸೌಲಭ್ಯಗಳು ಪಡೆಯಲು ಜನನ-ಮರಣ ನೋಂದಣಿ ಮಾಡಿಸುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಹೇಳಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶುಕ್ರವಾರ ಆರ್ಥಿಕ ಮತ್ತು ಸಾಂಖ್ಯೀಕ ನಿರ್ದೇಶನಾಲಯ ಆಶ್ರಯದಲ್ಲಿ ಜನನ-ಮರಣ ನೋಂದಣಿ ನಿಯಮಗಳು ಮತ್ತು ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತ ಆಯೋಜಿಸಿದ್ದ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಹಾಗೂ ವಿವಿಧ ಸಂದರ್ಭಗಳಲ್ಲಿ ಜನನ ಪ್ರಮಾಣ ಪತ್ರ ಬೇಕಾಗುತ್ತದೆ. ಪ್ರಸ್ತುತ ರೈತರ ಸಾಲ ಮನ್ನಾ ಪ್ರಕ್ರಿಯೆ ನಡೆಯುತ್ತಿದ್ದು, ಸಾಲ ಹೊಂದಿದ ರೈತರು ಮರಣ ಹೊಂದಿದಲ್ಲಿ ಸಾಲ ಮನ್ನಾಕ್ಕಾಗಿ ಅವರ ಮರಣ ಪ್ರಮಾಣ ಪತ್ರ ಕಡ್ಡಾಯವಾಗಿ ಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಜನನ ಮತ್ತು ಮರಣ ಪ್ರಮಾಣ ಪತ್ರಗಳ ಉಪಯೋಗಗಳನ್ನು ಅರಿತು ಜನನ ಮತ್ತು ಮರಣ ಸಂಭವಿಸಿದ 21 ದಿನಗಳೊಳಗಾಗಿ ನೋಂದಣಿ ಮಾಡಿಸಬೇಕು ಎಂದು ಸಲಹೆ ನೀಡಿದರು.

ಮರಣ ಹೊಂದಿದವರ ಹೆಸರಿನಲ್ಲಿ ಪಿಂಚಣಿ, ಮಾಸಾಶನ ಹೋಗುತ್ತಿದೆ ಎಂಬ ದೂರು ಬರುತ್ತವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ನಗರಸಭೆ, ಪುರಸಭೆ ಅಧಿಕಾರಿಗಳು ಜನರಿಗೆ ತಿಳಿವಳಿಕೆ ನೀಡಿ, ಮರಣ ನೋಂದಣಿ ಮಾಡಿಸಲು ಹೇಳಬೇಕು. ಇಲ್ಲವಾದಲ್ಲಿ ಪ್ರಕರಣಗಳ ತನಿಖೆ ನಡೆದಾಗ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಆನ್‌ಲೈನ್‌ ನೋಂದಣಿ ಇರುವುದರಿಂದ ತಾಂತ್ರಿಕ ತರಬೇತಿ ಪಡೆಯುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಆಯೋಜಿಸಿರುವ ತರಬೇತಿಯ ಸದುಪಯೋಗ ಪಡೆದು ಅನುಷ್ಠಾನಕ್ಕೆ ತರಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ್‌ ಉಸ್ಮಾನ್‌ ಪಟೇಲ್‌ ಮಾತನಾಡಿದರು. ಆರ್ಥಿಕ ಮತ್ತು ಸಾಂಖ್ಯೀಕ ನಿರ್ದೇಶನಾಲಯದ ಇ-ಜನ್ಮ ಸಂಯೋಜನಾಧಿಕಾರಿ ಮಧುಕುಮಾರ ಅವರು ಜನನ-ಮರಣ ನೋಂದಣಿ ನಿಯಮಗಳು ಮತ್ತು ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ತರಬೇತಿ ನೀಡಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಇಂಜಿನಿಯರ್‌ ಬಂಡೆಪ್ಪ ಆಕಳ ಉಪಸ್ಥಿತರಿದ್ದರು. ತರಬೇತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ನಗರಸಭೆ, ಪುರಸಭೆ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ನಾಡಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.

ಶಿವಕುಮಾರ ಹೈಯಾಳ ಪ್ರಾರ್ಥಿಸಿದರು. ಡಿಟಿಐ ಉಪ ಪ್ರಾಚಾರ್ಯ ಗುರು ಪಾಟೀಲ ಸ್ವಾಗತಿಸಿದರು. ಗ್ರಾಮ ಲೆಕ್ಕಾಧಿಕಾರಿ ಚನ್ನಬಸ್ಸು ನಿರೂಪಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ ವಂದಿಸಿದರು.

21 ದಿನದೊಳಗೆ ನೋಂದಣಿ ಮಾಡಿಸಿ
ಜನನ ಅಥವಾ ಮರಣ ಘಟನೆ ಸಂಭವಿಸಿದ 21 ದಿನಗಳ ಒಳಗಾಗಿ ನೋಂದಣಿ ಮಾಡಿದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. 21 ದಿನಗಳ ನಂತರ 30 ದಿನಗಳ ಒಳಗಾಗಿ 2 ರೂ. ತಡ ಶುಲ್ಕದೊಂದಿಗೆ ನೋಂದಣಿ ಮಾಡಿಸಬಹುದು. 30 ದಿನಗಳ ನಂತರ 1 ವರ್ಷದೊಳಗಾಗಿ ಅಧಿಸೂಚಿತ ಪ್ರಾಧಿಕಾರದ ಲಿಖೀತ ಅನುಮತಿಯಿಂದ ಮತ್ತು ಒಬ್ಬ ಪ್ರಮಾಣೀಕರಣ ಅಧಿಕಾರಿ (ನೋಟರಿ ಪಬ್ಲಿಕ್‌) ಅಥವಾ ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತನಾದ ಇತರೆ ಯಾವುದೇ ಒಬ್ಬ ಅಧಿಕಾರಿ ಮುಂದೆ ಮಾಡಿದ ಅಫಿಡವಿಟ್ ಹಾಜರುಪಡಿಸಿದ ಬಳಿಕ 5 ರೂ. ಗಳ ತಡ ಶುಲ್ಕವನ್ನು ಪಾವತಿಸಿ ನೋಂದಾಯಿಸಬಹುದು.
•ಸುನೀಲ ಬಿಸ್ವಾಸ್‌, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.