ಹೊನ್ನ ಹುಡಿ ಫೋಟೋಗೆ ಪ್ರಥಮ ಬಹುಮಾನ
Team Udayavani, Feb 10, 2019, 11:54 AM IST
ಕೊಪ್ಪಳ: ಖ್ಯಾತ ಕಲಾ ವಿಮರ್ಶಕ ಎ. ಈಶ್ವರಯ್ಯ ಸ್ಮರಣಾರ್ಥ ‘ನೆಲದ ನೆಲೆ-ಗ್ರಾಮೀಣ ಸೊಬಗಿನ ನೈಜ ಚಿತ್ರಣ’ ವಿಷಯದಡಿ ನಡೆದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊಪ್ಪಳದ ಛಾಯಾಗ್ರಾಹಕ ಭರತ್ ಕಂದಕೂರಗೆ ಪ್ರಥಮ ಬಹುಮಾನ ಲಭಿಸಿದೆ.
ಉಡುಪಿಯ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ಬಿಳಿಕಲ್ಲು ಪ್ರಕಾಶನ ಹಾಗೂ ಫೋಕಸ್ ಸ್ಟುಡಿಯೋದ ಸಹಯೋಗದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 115ಕ್ಕೂ ಹೆಚ್ಚು ಛಾಯಾಗ್ರಾಹಕರ ಸುಮಾರು 400ಕ್ಕೂ ಹೆಚ್ಚು ಛಾಯಾಚಿತ್ರಗಳಿದ್ದವು. ಕೊಪ್ಪಳದ ಭರತ್ ಕಂದಕೂರ ಅವರ ‘ಹೊನ್ನ ಹುಡಿ’ ಶೀರ್ಷಿಕೆಯ ಛಾಯಾಚಿತ್ರ ಅಂತಿಮ ಸುತ್ತಿನಲ್ಲಿ ಬಹುಮಾನ ಪಡೆದುಕೊಂಡಿದೆ. ಶುಕ್ರವಾರ ನಡೆದ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ 5 ಸಾವಿರ ರೂ. ನಗದು, ಪಾರಿತೋಷಕ ನೀಡಿ ಗೌರವಿಸಲಾಯಿತು.
ಖ್ಯಾತ ಅಂತಾರಾಷ್ಟ್ರೀಯ ಛಾಯಾಗ್ರಾಹಕ ಗುರುದಾಸ್ ಕಾಮತ್ ಹಾಗೂ ಫೋಕಸ್ ರಘು ಸ್ಪರ್ಧೆಯ ತೀರ್ಪುಗಾರರಾಗಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಸ್. ಲಿಂಗದೇವರು, ಸಿನಿಮಾ ವಿಮರ್ಶಕ, ಪತ್ರಕರ್ತ ಗಿರೀಶ್ರಾವ್ (ಜೋಗಿ), ಕಾಲೇಜಿನ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ ಕಾಮತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ