ಯಾರಾಗಿದ್ದಾನೋ ಭ್ರಷ್ಟ ಅವನಿಗೆ ನನ್ನಿಂದ ಕಷ್ಟ:ಹುಬ್ಬಳ್ಳಿಯಲ್ಲಿ ಮೋದಿ
Team Udayavani, Feb 10, 2019, 2:00 PM IST
ಹುಬ್ಬಳ್ಳಿ : ಸಾಹಸ, ಶೌರ್ಯ,ತ್ಯಾಗ, ಧೈರ್ಯ, ವಿದ್ಯಾ, ಸಂಸ್ಕೃತಿ ಮತ್ತು ಪರಂಪರೆಗಳಿಗೆ ಹೆಸರುವಾಸಿಯಾಗಿರುವ ಪವಿತ್ರ ಪುಣ್ಯ ಭೂಮಿಗೆ ಬಂದಿದ್ದಕ್ಕೆ ರೋಮಾಂಚ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಬೃಹತ್ ಸಮಾವೇಶದಲ್ಲಿ ಕನ್ನಡದಲ್ಲೇ ಭಾಷಣ ಆರಂಭಿಸಿದರು.
ನಾವು ಬಡವರು,ಮಧ್ಯಮವರ್ಗದವರ ಏಳಿಗೆಗಾಗಿ ಕೆಲಸ ಮಾಡುತ್ತಿದ್ದೇವೆ.45 ವರ್ಷಗಳಲ್ಲಿ ಮಾಡದ ಕೆಲಸವನ್ನು 4.5 ವರ್ಷಗಳಲ್ಲಿ ಮಾಡಿದ್ದೇವೆ.
ಇಲ್ಲಿನ ಮುಖ್ಯಮಂತ್ರಿ ಅಳುತ್ತಾರೆ,ದೆಹಲಿಯಲ್ಲಿ ನಾಮಧಾರ್ಗಳು ಅಳುತ್ತಿದ್ದಾರೆ.ಇವರನ್ನೆಲ್ಲಾ ನೋಡಿ ದೇಶದ ಜನ ನಗುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಯಾರು ಭ್ರಷ್ಟರಿದ್ದಾರೋ ಅವರಿಗೆ ಮೋದಿಯಿಂದ ಕಷ್ಟ ಇದೆ ಎನ್ನುವ ಮೂಲಕ ವಿಪಕ್ಷಗಳ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ರೈತರು ಸೇರಿದಂತೆ ವಿವಿಧ ವರ್ಗದ ಜನರಿಗೆ ಕೇಂದ್ರ ಸರ್ಕಾರ ಜಾರಿ ಮಾಡಿದ ಯೋಜನೆಗಳನ್ನು ಜನರಿಗೆ ತಿಳಿಸಿ ಪ್ರಧಾನಿ ಭಾಷಣ ಮುಗಿಸಿದರು.
ವಿವಿಧ ಅಭಿವೃದ್ಧಿ ಯೋಜನೆಗಳಿಕೆ ಚಾಲನೆ
ಬಿಜೆಪಿ ಸಮಾವೇಶದ ವೇದಿಕೆಗೆ ಆಗಮಿಸುವ ಮನ್ನು ಅರ್ಧ ಕಿ.ಮೀ ದೂರದಲ್ಲಿ ಹಾಕಲಾಗಿದ್ದ ಇನ್ನೊಂದು ವೇದಿಕೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲದೆ ನೀಡಿದರು.
ಮನೆ ಮನೆಗೆ ಗ್ಯಾಸ್ ಜೋಡಣೆ, ಪ್ರಧಾನಮಂತ್ರಿ ಆವಾಸ್ ಯೋಜನೆ ಹಕ್ಕುಪತ್ರ ವಿತರಣೆ, ಐಐಟಿ ಮೊದಲ ಹಂತದ ಕಟ್ಟಡ ನಿರ್ಮಾಣ, ಐಐಐಟಿ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ, ಹುಬ್ಬಳ್ಳಿ-ಚಿಕ್ಕಬಾಜೂರು ಡಬ್ಲಿಂಗ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಸಂಜೆ 5:30 ಗಂಟೆಗೆ ವಿಶೇಷ ವಿಮಾನ ಮೂಲಕ ನಗರಕ್ಕೆ ಆಗಮಿಸಬೇಕಿತ್ತು. ಆದರೆ 6.30 ರ ವೇಳೆಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಸಚಿವ ಆರ್.ವಿ.ದೇಶ್ಪಾಂಡೆ ಸೇರಿದಂತೆ ಸರ್ಕಾರಿ ಅಧಿಕಾರಿಗಳು ಮತ್ತು ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು