ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು
Team Udayavani, Feb 11, 2019, 12:30 AM IST
ರಾಣಿಬೆನ್ನೂರ: ಶಾಲೆಗೆ ರಜೆ ಇದ್ದ ಕಾರಣ ಕುಮದ್ವತಿ ನದಿ ಬಾಂದಾರ ಬಳಿ ಆಟವಾಡಲು ತೆರಳಿದ್ದ ಮೂವರು ವಿದ್ಯಾರ್ಥಿನಿಯರು ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕೂಲಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯರು ಅದೇ ಗ್ರಾಮದ 3ನೇ ತರಗತಿಯ ಸುಮನ್ ಫಕ್ರುಸಾಬ್ ತುಮ್ಮಿನಕಟ್ಟಿ (9), 6ನೇ ತರಗತಿಯ ನಿಷಾದ್ಖಾನಂ ಖಾದರ್ಸಾಬ್ ಪಾಟೀಲ (12), 7ನೇ ತರಗತಿಯ ಮಜ್ಮನೀಲ ಹುಸೇನ್ಸಾಬ್ ತೋಟದ (13) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇರುವುದರಿಂದ ಬುತ್ತಿ ಕಟ್ಟಿಕೊಂಡು ಊಟ ಮಾಡಲು ನದಿಗೆ ತೆರಳಿದ್ದರು. ನೀರಿಗಿಳಿದು ಆಟವಾಡುವಾಗ ಈ ದುರ್ಘಟನೆ ನಡೆದಿದೆ. ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?