ಪ್ರಹಸನದಿಂದ ಜನರಿಗೆ ಬೇಸರ: ವಿಶ್ವನಾಥ್
Team Udayavani, Feb 11, 2019, 12:35 AM IST
ಚಿತ್ರದುರ್ಗ: ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಬಿಡುಗಡೆ ಮಾಡುತ್ತಿರುವ ಆಡಿಯೋ-ವಿಡಿಯೋ ಕಂಡು ರಾಜ್ಯ ರಾಜಕಾರಣದ ಬಗ್ಗೆ ಜನರು ರೋಸಿ ಹೋಗಿದ್ದಾರೆ ಎಂದು ಜೆಡಿಎಸ್ ರಾಜ್ಯಾದ್ಯಕ್ಷ ಎಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಹೊಸದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿಮುದ್ರಿಕೆಗಳ ಪ್ರಹಸನದಿಂದಾಗಿ ನಾಡಿನ ಮತದಾರರು ರಾಜಕಾರಣಿಗಳನ್ನು ಮನ್ನಿಸಲಾರದಂತಹ ಕೆಲಸ ಮಾಡುತ್ತಿದ್ದೇವೆ. ಕುಮಾರಸ್ವಾಮಿ, ಸಿದ್ದರಾಮಯ್ಯ, ಯಡಿಯೂರಪ್ಪ ಹಾಗೂ ಮುಖಂಡರಿಗೆ ಭಗವಂತ ಒಳ್ಳೆಯ ಬುದ್ಧಿ ಕೊಡಲಿ ಎಂದರು.
ಒಬ್ಬೊಬ್ಬ ಶಾಸಕರಿಗೆ 20, 30 ಕೋಟಿ ರೂ. ನೀಡಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಇಷ್ಟೊಂದು ದುಡ್ಡು ಎಲ್ಲಿಂದ ಬರುತ್ತದೆ, ವಿಧಾನಸೌಧದ ಬಳಿ ದನಗಳ ಜಾತ್ರೆ ನಡೆಯುತ್ತಿದೆಯೇನೋ ಅನ್ನಿಸುತ್ತಿದೆ ಎಂದು ವ್ಯಂಗ್ಯವಾಡಿದರು.
ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಶಿಷ್ಯ ನಾನು. ನನ್ನ ಬೆಳವಣಿಗೆಗೆ ಅವರೇ ಕಾರಣ. ದೇವರಾಜ ಅರಸು ಆಗಲು ಯಾರಿಗೂ ಸಾಧ್ಯವಿಲ್ಲ. ಅವರ ಸಾಧನೆಯ ಸಮೀಪಕ್ಕೂ ಹೋಗಲು ಆಗುವುದಿಲ್ಲ. ಕೆಲವರು ತಾವೇ ದೇವ ರಾಜ ಅರಸು ಅಂತಾರೆ. ಕೆಲವರು ನೀವೇ ದೇವರಾಜ ಅರಸು ಅಂತ ರೈಲು ಹತ್ತಿಸುತ್ತಾರೆ ಎಂದು ಪರೋಕ್ಷ ವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ