ಅಲ್ಪಸಂಖ್ಯಾಕ ಪದದ ಮರು ವ್ಯಾಖ್ಯಾನ: ಆಯೋಗಕ್ಕೆ ಸುಪ್ರಿಂ ಸೂಚನೆ
Team Udayavani, Feb 11, 2019, 6:23 AM IST
ಹೊಸದಿಲ್ಲಿ : ಸಮುದಾಯವೊಂದರ ರಾಜ್ಯವಾರು ಜನಸಂಖ್ಯೆಯನ್ನು ಲೆಕ್ಕಿಸಿಕೊಂಡು, “ಅಲ್ಪಸಂಖ್ಯಾಕ’ ಪದದ ಮರು ವ್ಯಾಖ್ಯಾನಕ್ಕೆ ಮಾರ್ಗದರ್ಶಿ ಸೂತ್ರ ರೂಪಿಸಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿ ಮೂರು ತಿಂಗಳ ಒಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಇಂದು ಸೋಮವಾರ ರಾಷ್ಟ್ರೀಯ ಅಲ್ಪಸಂಖ್ಯಾಕ ಆಯೋಗಕ್ಕೆ (ಎನ್ಸಿಎಂ ಗೆ) ಸೂಚನೆ ನೀಡಿದೆ.
ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೋಯ್ ನೇತೃತ್ವದ ಪೀಠವು ಈ ವಿಷಯದಲ್ಲಿ, “ಅರ್ಜಿದಾರರಾಗಿರುವ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಉಪಾಧ್ಯಾಯ ಅವರು ಅಲ್ಪಸಂಖ್ಯಾಕ ಆಯೋಗಕ್ಕೆ ಮರು ಅರ್ಜಿ ಸಲ್ಲಿಸಬೇಕು; ಮತ್ತು ಇಂದು ಸೋಮವಾರದಿಂದ ಮೂರು ತಿಂಗಳ ಒಳಗೆ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಹೇಳಿತು.
“ರಾಷ್ಟ್ರವ್ಯಾಪಿ ಜನಸಂಖ್ಯಾ ಅಂಕಿಅಂಶಗಳಿಗೆ ಬದಲಾಗಿ ರಾಜ್ಯದಲ್ಲಿನ ಒಂದು ನಿರ್ದಿಷ್ಟ ಸಮುದಾಯದ ಜನಸಂಖ್ಯೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಅಲ್ಪಸಂಖ್ಯಾಕ ಪದವನ್ನು ಪುನರ್ ವ್ಯಾಖ್ಯಾನಿಸುವ ಅಗತ್ಯವಿದೆ’ ಎಂದು ಉಪಾಧ್ಯಾಯ ಅವರು ತಮ್ಮ ಅರ್ಜಿಯಲ್ಲಿ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ