ಜಗಕ್ಕೆ ಬೆಳಕು ನೀಡಿದ್ದು 12ನೇ ಶತಮಾನ: ತರಳಬಾಳು ಶ್ರೀ


Team Udayavani, Feb 11, 2019, 11:09 AM IST

11-february-23.jpg

ಹುಬ್ಬಳ್ಳಿ: ಹನ್ನೆರಡನೇ ಶತಮಾನ ಜಗತ್ತಿಗೆ ಬೆಳಕು ನೀಡಿದ ಶತಮಾನ. ಬಸವಾದಿ ಶರಣರು ಸಮಾಜದಲ್ಲಿರುವ ಅಜ್ಞಾನ, ಕಂದಾಚಾರ, ಅಸಮಾನತೆ, ಜಾತಿಯತೆ ಕೊಳೆ ತೊಳೆದು ಸ್ವಚ್ಛತೆ ಮೂಡಿಸುವ ಕಾರ್ಯ ಮಾಡಿದರು ಎಂದು ಸಾಣೆಹಳ್ಳಿ ಶ್ರೀ ತರಳಬಾಳು ಜಗದ್ಗುರು ಡಾ| ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.

ನ್ಯೂ ಕಾಟನ್‌ ಮಾರ್ಕೆಟ್‌ನ ಸಾಂಸ್ಕೃತಿಕ ಭವನದಲ್ಲಿ ಸಾಣೆಹಳ್ಳಿ ಶಿವಸಂಚಾರ ಕಲಾಸಂಘದಿಂದ ರವಿವಾರ 100 ಮಕ್ಕಳಿಂದ ನಡೆದ ಜಾನಪದ ಶೈಲಿಯ ನೃತ್ಯ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜದಲ್ಲಿರುವ ಜನರ ಬದುಕನ್ನುಉನ್ನತೀಕರಿಸಬೇಕೆಂದು 12ನೇ ಶತಮಾನದ ಬಸವಾದಿ ಶರಣರ ಬದುಕನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಅಂದಿನ ಜಗದ್ಗುರುಗಳ ಪ್ರೇರಣೆಯಿಂದ ಸಾಣೆಹಳ್ಳಿಯಲ್ಲಿ ಶಿವಕುಮಾರ ಕಲಾ ಸಂಘ, ಶಿವಸಂಚಾರ ಆರಂಭವಾಯಿತು. ಕಳೆದ 21 ವರ್ಷದಲ್ಲಿ ಶಿವಸಂಚಾರದಿಂದ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 63 ನಾಟಕಗಳ 3 ಸಾವಿರಕ್ಕೂ ಹೆಚ್ಚು ಪ್ರದರ್ಶನ ನೀಡಲಾಗಿದೆ ಎಂದರು.

ಇಂದು ಸಮಾಜದಲ್ಲಿ ಶುದ್ಧ ರಾಜಕಾರಣ ಉಳಿದಿಲ್ಲ, ಶುದ್ಧವಾದ ರಾಜಕೀಯ ಬೇಕು. ಕೊಳಕು ರಾಜಕೀಯ ಬೇಡವಾಗಿದೆ. ನಾವು ಯೋಗ್ಯರನ್ನು ಆಯ್ಕೆ ಮಾಡಬೇಕಿದೆ. ಮತ ಮಾರಿಕೊಳ್ಳುವವರು ಇರುವವರೆಗೂ ಪ್ರಜಾಪ್ರಭುತ್ವ ಹಾಳಾಗಿ ಹೋಗುತ್ತದೆ ಎಂದರು. ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಪಂಡಿತಾರಾಧ್ಯರು ಪ್ರಯೋಗಶೀಲರು, ಸದಾ ಒಂದಿಲ್ಲೊಂದು ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಅವರ ಮೂಲಕವೇ ವಚನಗಳು ಇಂದು ಎಲ್ಲೆಡೆ ಪ್ರಚಾರ ಪಡೆಯುತ್ತಿವೆ ಎಂದರು. ಡಾ| ಎಸ್‌.ಪಿ.ಬಳಿಗಾರ ಮಾತನಾಡಿ, ಶಿವಸಂಚಾರ ಕಲಾಸಂಘದ 100 ಮಕ್ಕಳು 40ಕ್ಕೂ ಹೆಚ್ಚು ವಚನಗಳನ್ನು ನೃತ್ಯರೂಪದಲ್ಲಿ ತೋರಿಸುವುದು ಸಾಮಾನ್ಯ ಕೆಲಸವಲ್ಲ. ಔಷಧಿ ಇಲ್ಲದೇ ರೋಗ ಗುಣವಾಗಬೇಕೆಂದರೆ ಇಂತಹ ಕಾರ್ಯಕ್ರಮದ ಮೂಲಕವೇ ಸಾಧ್ಯ ಎಂದು ಹೇಳಿದರು.

ಶಾಂತ ಗಂಗಾಧರ ಮಾತನಾಡಿ, ಶತಮಾನದಿಂದ ದೀಪ ಬೆಳಗುತ್ತಿದೆ. ಆದರೆ ಬೆಂಕಿ ಹಚ್ಚುವವರು ಕೆಲವರು, ದೀಪ ಹಚ್ಚುವವರು ಕೆಲವರು. ಮಾತು ಬೆಲೆಬಾಳುವ ಸಮಾಜ ಕಟ್ಟುತ್ತದೆ. ನಾವೆಲ್ಲರೂ ಒಂದು ಎಂದು ತೋರಿಸಿರುವುದು ವಚನ. ವಚನ ಹೇಳಬಹುದು, ಹಾಡಬಹುದು, ನೃತ್ಯ ಮಾಡಬಹುದು ಎಂಬುದನ್ನು ತರಳಬಾಳು ಶ್ರೀಗಳು ತೋರಿಸಿ ಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಪ್ರಾಚಾರ್ಯ ಐ.ಜಿ. ಚಂದ್ರಶೇಖರ ಮಾತನಾಡಿದರು. ನಂತರ ಮಕ್ಕಳು ವಿವಿಧ ವಚನಗಳ ನೃತ್ಯ ಪ್ರದರ್ಶನ ನೀಡಿದರು. ಪಿ.ಎಸ್‌. ಧರಣೆಪ್ಪನವರ, ಕಾಡಯ್ಯ ಹಿರೇಮಠ, ಡಾ| ಕೆ.ಎಚ್. ಜಿತೂರಿ, ಡಾ| ಸುರೇಶ ಹಿರೇಗೌಡರ, ಡಾ| ಅಭಯಕುಮಾರ ಮಂಟಗಾಣಿಕರ, ವಿ.ಸಿ. ಶಿಗ್ಲಿ, ಎಸ್‌.ಕೆ. ಆದಪ್ಪನವರ, ಡಾ| ಸವಿತಾ ರಾಯಚೂರ ಇನ್ನಿತರರು ಇದ್ದರು. ಆರ್‌.ಟಿ. ಮಜ್ಜಗಿ ನಿರೂಪಿಸಿದರು.

12ನೇ ಶತಮಾನದಲ್ಲಿ ವಚನಗಳು ಸೃಷ್ಟಿ ಆಗಿದ್ದರೂ ಇಂದಿಗೂ ಅವು ಪ್ರಸ್ತುತವಾಗಿವೆ. ನಮ್ಮ ಬದುಕಿಗೆ ದಾರಿ ದೀಪವಾಗಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಹಿರಿಯ ತರಳುಬಾಳು ಶ್ರೀಗಳು ಮೊಟ್ಟ ಮೊದಲಿಗೆ ವಚನಗಳನ್ನು ಹಾಡಿಸಿದರು. ನಂತರ ನಾಟಕಗಳನ್ನು ಮಾಡಿಸಿದರು. ಪುಸ್ತಕಗಳನ್ನು ಪ್ರಕಟಿಸಿದರು. ನೃತ್ಯದ ಮೂಲಕ ವಚನಗಳನ್ನು ಜನರಿಗೆ ತಲುಪಿಸಿದರು. ಇಂದಿನ ದೃಶ್ಯ ಮಾಧ್ಯಮ ಹಿಂದೆ ಇದ್ದಿದ್ದರೆ ದೊಡ್ಡ ಕ್ರಾಂತಿಯೇ ಆಗುತ್ತಿತ್ತು.
•ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ,ಸಾಣೇಹಳ್ಳಿ, ಶ್ರೀ ತರಳಬಾಳು ಮಠ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.