ತ್ಯಾಜ್ಯ ವಿಂಗಡಿಸದಿದ್ದರೆ ದಂಡ


Team Udayavani, Feb 12, 2019, 6:37 AM IST

tyajya.jpg

ಬೆಂಗಳೂರು: ತ್ಯಾಜ್ಯ ವಿಲೇವಾರಿಗೆ ಹೊಸ ಗುತ್ತಿಗೆದಾರರನ್ನು ನೇಮಿಸಿದ ಬಳಿಕ ತ್ಯಾಜ್ಯ ವಿಂಗಡಣೆ ಮಾಡದ ಸಾರ್ವಜನಿಕರ ವಿರುದ್ಧ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಎಚ್ಚರಿಕೆ ನೀಡಿದರು.

ವಾರ್ಡ್‌ವಾರು ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಟೆಂಡರ್‌ ಪ್ರಕ್ರಿಯೆಯಲ್ಲಿನ ಲೋಪಗಳ ನಿವಾರಣೆಗೆ ಮೇಯರ್‌ ಗಂಗಾಂಬಿಕೆ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಯೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪಾಲಿಕೆಯಿಂದ ಹಸಿ ಹಾಗೂ ಸ್ಯಾನಿಟರಿ ತ್ಯಾಜ್ಯ ಸಂಗ್ರಹಕ್ಕೆ ಮಾತ್ರ ಟೆಂಡರ್‌ ಆಹ್ವಾನಿಸಲಾಗಿದೆ. ಹೀಗಾಗಿ ಸಾರ್ವಜನಿಕರು ಆಟೋಗಳು ಬಂದಾಗ ಹಸಿ ತ್ಯಾಜ್ಯವನ್ನು ಮಾತ್ರ ನೀಡಬೇಕು ಎಂದು ಹೇಳಿದರು.

ತ್ಯಾಜ್ಯ ವಿಂಗಡಿಸದೆ ಆಟೋಗಳಿಗೆ ನೀಡುವ ಸಾರ್ವಜನಿಕರಿಗೆ ದಂಡ ವಿಧಿಸಲು ಅವಕಾಶವಿದೆ. ಅದಕ್ಕೂ ಮೊದಲು ತ್ಯಾಜ್ಯ ವಿಂಗಡಿಸದೆ ನೀಡುವುದರಿಂದ ಆಗುವ ಅನಾನುಕೂಲಗಳು ಹಾಗೂ ವಿಂಗಡಣೆಯ ಅನುಕೂಲಗಳ ಕುರಿತಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಜತೆಗೆ ಮಾಧ್ಯಮಗಳು, ಸಂಘ-ಸಂಸ್ಥೆಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಭಿತ್ತರಿಸಲಾಗುವುದು. ಆ ನಂತರವೂ ವಿಂಗಡಣೆ ಮಾಡದವರ ವಿರುದ್ಧ ದಂಡ ಪ್ರಯೋಗ ಮಾಡಲಾಗುವುದು ಎಂದು ತಿಳಿಸಿದರು.

ಪಾಲಿಕೆಯಿಂದ ಆಹ್ವಾನಿಸಿರುವ ಹೊಸ ಟೆಂಡರ್‌ನಲ್ಲಿ 198 ವಾರ್ಡ್‌ಗಳಲ್ಲಿ ಪ್ರತಿ 5 ವಾರ್ಡ್‌ಗಳಿಗೆ ಒಬ್ಬರಂತೆ ಗುತ್ತಿಗೆದಾರರನ್ನು ನೇಮಿಸಲಾಗುತ್ತದೆ. ಇದರಿಂದಾಗಿ ಹೊಸ ಗುತ್ತಿಗೆದಾರರು ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ದೊರೆಯುತ್ತದೆ. ಜತೆಗೆ ಗುತ್ತಿಗೆದಾರರ ಬಳಿ ಆಟೋ ಟಿಪ್ಪರ್‌, ಕಾಂಪ್ಯಾಕ್ಟರ್‌ ವಾಹನಗಳಿರುವ ದಾಖಲೆಗಳನ್ನು ಪರಿಶೀಲಿಸಿದ ನಂತರವೇ ಕಾರ್ಯಾದೇಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಪಾಲಿಕೆಯಲ್ಲಿರುವ ಸಗಟು ತ್ಯಾಜ್ಯ ಉತ್ಪಾದಕರಾದ ಹೋಟೆಲ್‌, ಅಪಾರ್ಟ್‌ಮೆಂಟ್‌ಗಳಿಂದ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲು ಖಾಸಗಿ ಏಜೆನ್ಸಿಗಳನ್ನು ನೇಮಿಸಲಾಗುವುದು. ಅವರು ತ್ಯಾಜ್ಯ ಸಂಗ್ರಹಿಸಿದ ಶುಲ್ಕವನ್ನು ತ್ಯಾಜ್ಯ ಉತ್ಪಾದಕರಿಂದಲೇ ಸಂಗ್ರಹಿಸಲಿದ್ದು, ಪಾಲಿಕೆಯ ಸಂಸ್ಕರಣಾ ಘಟಕಗಳಲ್ಲಿ ಅವರು ಸಂಗ್ರಹಿಸಿದ ತ್ಯಾಜ್ಯ ವಿಲೇವಾರಿಗೆ ಅವಕಾಶ ನೀಡಲಾಗುವುದು ಎಂದು ಮಂಜುನಾಥ ಪ್ರಸಾದ್‌ ತಿಳಿಸಿದರು. 

ಇದರಿಂದಾಗಿ ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದು ನಿಲ್ಲಲಿದೆ. ಜತೆಗೆ ಪಾಲಿಕೆಯ ಸಂಸ್ಕರಣಾ ಘಟಕಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡಿದ್ದಕ್ಕೆ ಬದಲಾಗಿ, ಖಾಸಗಿ ಏಜೆನ್ಸಿಗಳಿಂದ ಇಂತಿಷ್ಟು ಶುಲ್ಕ ಸಂಗ್ರಹಿಸಲಾಗುವುದು. ಜತೆಗೆ ಸಗಟು ತ್ಯಾಜ್ಯ ಉತ್ಪಾದಕರಿಗೆ ಘನತ್ಯಾಜ್ಯ ಉಪಕರದಲ್ಲಿ ವಿನಾಯಿತಿ ನೀಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಹೇಳಿದರು. 

ವೈದ್ಯಾಧಿಕಾರಿಗಳಿಗೆ ಪ್ಲಾಸ್ಟಿಕ್‌ ನಿಷೇಧ ಹೊಣೆ: ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ, ಇನ್ನೂ ಪ್ಲಾಸ್ಟಿಕ್‌ ಬಳಕೆಯಾಗುತ್ತಲೇ ಇದೆ. ಆ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ಬಳಕೆ ಮತ್ತು ಪ್ಲಾಸ್ಟಿಕ್‌ ತ್ಯಾಜ್ಯ ಉತ್ಪತ್ತಿ ಕಡಿಮೆ ಮಾಡುವ ಹೊಣೆಯನ್ನು ಪಾಲಿಕೆಯ ಹಿರಿಯ ವೈದ್ಯಾಧಿಕಾರಿಗಳಿಗೆ ವಹಿಸಲಾಗುವುದು. ಸದ್ಯ ವೈದ್ಯಾಧಿಕಾರಿಗಳು ಉದ್ದಿಮೆ ಪರವಾನಗಿ ನೀಡುವ ಕೆಲಸವನ್ನಷ್ಟೇ ಮಾಡುತ್ತಿದ್ದು, ಇನ್ನು ಮುಂದೆ ಸಮರ್ಪಕವಾಗಿ ಪ್ಲಾಸ್ಟಿಕ್‌ ನಿಷೇಧಿಸುವ ಹೊಣೆಯನ್ನೂ ನಿರ್ವಹಿಸಬೇಖು ಎಂದು ಆಯುಕ್ತರು ತಿಳಿಸಿದರು.

ಕಟ್ಟಡ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಟೆಂಡರ್‌: ಹಸಿ ತ್ಯಾಜ್ಯ ವಿಲೇವಾರಿಯಂತೆಯೇ ನಗರದಲ್ಲಿನ ಕಟ್ಟಡ ತ್ಯಾಜ್ಯ ವಿಲೇವಾರಿಗೂ ಹೊಸದಾಗಿ ಟೆಂಡರ್‌ ಆಹ್ವಾನಿಸಲಾಗುವುದು. ಕಟ್ಟಡ ಕೆಡುವುದು ಮತ್ತು ನಿರ್ಮಿಸುವ ವೇಳೆ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಗೆ ಕಟ್ಟಡ ಮಾಲೀಕರಿಗೆ ಶುಲ್ಕ ವಿಧಿಸಲಾಗುವುದು.

ಕಟ್ಟಡ ತ್ಯಾಜ್ಯ ವಿಲೇವಾರಿಗೆ ವಲಯವಾರು ಶುಲ್ಕ ವಿಧಿಸಲು ನಿರ್ಧರಿಸಿದ್ದು, ಶೀಘ್ರವೇ ಟೆಂಡರ್‌ ಆಹ್ವಾನಿಸಲಾಗುವುದು. ಜತೆಗೆ ಈಗಾಗಲೇ ವಿಲೇವಾರಿಗೆ ಕೆಲವೊಂದು ಕ್ವಾರಿಗಳನ್ನು ಗುರುತಿಸಲಾಗಿದ್ದು, ಕಟ್ಟಡ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು ಎಂದು ಆಯುಕ್ತರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.