ತಪ್ಪು ಮಾಹಿತಿ ನೀಡಿದವರಿಗೆ ನೋಟಿಸ್‌


Team Udayavani, Feb 12, 2019, 7:25 AM IST

tappu.jpg

ರಾಮನಗರ: ಕೆಡಿಪಿ ಸಭೆಗೆ ತಪ್ಪು, ಅಪೂರ್ಣ ಮಾಹಿತಿಯನ್ನು ನೀಡುವ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪದ ನೋಟಿಸ್‌ ಜಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಮುಲ್ಲೆ„ ಮುಹಿಲನ್‌ ಅವರು ಜಿಲ್ಲಾ ಪಂಚಾಯ್ತಿಯ ಉಪಕಾರ್ಯದರ್ಶಿ ಉಮೇಶ್‌ ಅವರಿಗೆ ಸೂಚನೆ ನೀಡಿದರು.

ನಗರದ ಜಿಪಂ ಭವನ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ, ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡಿರುವ ಸರ್ಕಾರದ ಕಾರ್ಯಕ್ರಮಗಳ ಪ್ರಗತಿಯ ವರದಿಯಲ್ಲಿ ಆರ್ಥಿಕ ಮತ್ತು ಭೌತಿಕ ಪ್ರಗತಿಯ ಅಂಕಿ, ಅಂಶಗಳಲ್ಲಿ ವ್ಯತ್ಯಾಸಗಳು ಇರುವುದನ್ನು ಗಮನಿಸಿ, ಕೇಳಿದ ಸಮಜಾಯಿಷಿಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡದಿದ್ದ ರಿಂದ ಕೆಂಡಾಮಂಡಲರಾದ ಸಿಇಒ ಅವರು, ಕರ್ತವ್ಯ ಲೋಪದ ಆರೋಪದ ನೋಟಿಸ್‌ ಜಾರಿ ಮಾಡುವಂತೆ ಸೂಚನೆ ನೀಡಿದರು.

ಆರ್ಥಿಕ ಪ್ರಗತಿ ಶೇ.100, ಭೌತಿಕ ಪ್ರಗತಿ?: ಕೆಡಿಪಿ ಸಭೆಗೆ ವಿವಿಧ ಇಲಾಖೆಗಳು ನೀಡಿದ ಮಾಹಿತಿಯಲ್ಲಿ ವಿವಿಧ ಕಾರ್ಯಕ್ರಮಗಳ ಪ್ರಗತಿಯಲ್ಲಿ ಆರ್ಥಿಕ ಪ್ರಗತಿಯನ್ನು ಶೇ.100 ಎಂದು ತೋರಿಸಿದ್ದರು. ಆದರೆ, ಭೌತಿಕ ಪ್ರಗತಿಯ ಅಂಕಿ, ಅಂಶಗಳು ಅದಕ್ಕೆ ತಕ್ಕದಾಗಿರಲಿಲ್ಲ. ಹೀಗಾಗಿ ಸಿಇಒ ಅವರು ಅಂಕಿ, ಅಂಶಗಳು ತಾಳೆ ಆಗುತ್ತಿಲ್ಲ ಎಂದು ಅಧಿಕಾರಿಗಳಿಂದ ಉತ್ತರ ಬಯಸಿದರು.

ಆದರೆ, ಯಾವ ಅಧಿಕಾರಿಯೂ ಸಮರ್ಪಕ ಉತ್ತರ ನೀಡಲಿಲ್ಲ. ಇನ್ನೊಂದೆಡೆ ಪ್ರಗತಿಯನ್ನು ಶೇಕಡವಾರು ಅಂಕಿಗಳಲ್ಲಿ ಕೊಟ್ಟಿರಲಿಲ್ಲ, ಇದು ಜಾಣ್ಮೆಯ ತಪ್ಪ ಎಂದು ಸಿಇಒ ಅವರು ಗುಡುಗಿದರು. ಕೆಡಿಪಿ ಸಭೆಗೆ ಸರಿಯಾದ ಅಂಕಿ-ಅಂಶಗಳನ್ನು ನೀಡದ ಅಧಿಕಾರಿಗಳಿಗೆ ಕರ್ತವ್ಯ ಲೋಪದ ನೋಟಿಸ್‌ ಜಾರಿ ಮಾಡುವ ಕಠಿಣ ನಿರ್ಧಾರ ಕೈಗೊಂಡರು.

ಅಧಿಕಾರಿಗಳಿಗೆ ಸಿಇಒ ತರಾಟೆ: ಕಾರ್ಮಿಕ ಇಲಾಖೆಯ ಆಧಿಕಾರಿಗಳು ಪಿಎಫ್, ಇಎಸ್‌ಐ ನೀಡದ ಕಿಯೋನಿಕ್ಸ್‌ ವಿರುದ್ಧ ದೂರು ದಾಖಲಿಸುತ್ತಿರುವುದಾಗಿ ಹೇಳಿದರು. ಮಧ್ಯೆ ಪ್ರವೇಶಿಸಿದ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್‌, ಪಂಚಾಯತ್‌ ರಾಜ್‌ ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ ಹೊರಗುತ್ತಿಗೆಯಲ್ಲಿರುವ ನೌಕರರಿಗೆ ಆರೇಳು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದರು.

ಈ ಮಾಹಿತಿಗೆ ಕೆರಳಿದ ಸಿಇಒ, ಆರ್‌ಡಿಪಿಆರ್‌ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಆರೇಳು ತಿಂಗಳು ಸಂಬಳ ಸಿಗದಿದ್ದರೆ, ಆ ನೌಕರರು ತಮ್ಮ ಕಟುಂಬಗಳನ್ನು ಹೇಗೆ ಪೋಷಿಸುತ್ತಾರೆ ಎಂದು ಪ್ರಶ್ನಿಸಿದರು. ಅಧಿಕಾರಿಗಳಿಗೆ ಸಂಬಳ ಸಿಗದಿದ್ದರೆ ಕೆಲಸ ಮಾಡ್ತೀರ ಎಂದು ತರಾಟೆಗೆ ತೆಗೆದುಕೊಂಡರು.

ಸಲಕರಣೆ ವಿತರಣೆಗೆ ಸೂಚನೆ: ರೇಷ್ಮೆ ಇಲಾಖೆಯ ಮೂಲಕ ಸಲಕರಣೆ ವಿತರಿಸುವ ಫ‌ಲಾನುಭವಿಗಳ ಪಟ್ಟಿಯನ್ನು ಆಯಾ ವ್ಯಾಪ್ತಿಯ ಜಿಪಂ ಸದಸ್ಯರ ಒಪ್ಪಿಗೆ ಪಡೆದು ವಿತರಿಸುವಂತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಪಂ ಅಧ್ಯಕ್ಷ ಎಂ.ಎನ್‌.ನಾಗರಾಜ್‌ ಸೂಚನೆ ನೀಡಿದರು. ರೇಷ್ಮೆ ಇಲಾಖೆಯ ಮೂಲಕ ವಿತರಣೆಯಾಗುತ್ತಿರುವ ಸೋಲಾರ್‌ ಲೈಟ್‌ಗಳು ಕಳಪೆಯಾಗಿವೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್‌ ದೂರಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೊಡ್ಡ ಮರಳವಾಡಿ ಹಾಗೂ ಹಾರೋಹಳ್ಳಿಗೆ ಆ್ಯಂಬುಲೆನ್ಸ್‌ಗಳನ್ನು ಒದಗಿಸಲಾಗಿದೆ ಎಂದು ಡಿಎಚ್ಒ ಡಾ.ಅಮರನಾಥ್‌ ತಿಳಿಸಿದರು. ಜಿಪಂ ಉಪಕಾರ್ಯದರ್ಶಿ ಉಮೇಶ್‌, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ ಮೂರ್ತಿ, ಮುಖ್ಯ ಯೋಜನಾಧಿಕಾರಿ ದೀಪಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.