ಕೆರೆಯಲ್ಲಿ ತೇಲುತ್ತಿದ್ದ ಜಿಂಕೆ ಶವ ಹೊರಕ್ಕೆ
Team Udayavani, Feb 12, 2019, 7:25 AM IST
ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ತಪ್ಪಲಿನ ಕೃಷ್ಣಯ್ಯನಕಟ್ಟೆಯ ನೀರಿನಲ್ಲಿ ತೇಲುತ್ತಿದ್ದ ಜಿಂಕೆಯ ಕಳೇಬರವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸೋಮವಾರ ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಮುಕ್ತಿ ನೀಡಿದರು.
ಕಳೆದ ನಾಲ್ಕು ದಿನಗಳಿಂದಲೂ ಕೃಷ್ಣಯ್ಯನಕಟ್ಟೆಯ ನೀರಿನಲ್ಲಿ ಜಿಂಕೆ ಶವ ತೇಲುತ್ತಿತ್ತು. ಆದರೆ, ಅರಣ್ಯ ಇಲಾಖೆಗೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ. ಈ ಕುರಿತು ‘ಉದಯವಾಣಿ’ಯಲ್ಲಿ ಫೆ.10ರಂದು ‘ಕೃಷ್ಣಯ್ಯನಕಟ್ಟೆಯಲ್ಲಿ ತೇಲುತ್ತಿರುವ ಜಿಂಕೆ ಕಳೇಬರ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಇಲಾಖೆ ಸಿಬ್ಬಂದಿ, ಸೋಮವಾರ ಬೆಳಗ್ಗೆ ಕೃಷ್ಣಯ್ಯನಕಟ್ಟೆಗೆ ಧಾವಿಸಿ ನೀರಿನಲ್ಲಿ ತೇಲುತ್ತಿದ್ದ ಜಿಂಕೆಯ ಕಳೇಬರವನ್ನು ಹೊರ ತೆಗೆದರು. ನಂತರ ಪಶು ವೈದ್ಯ ಡಾ. ರಾಘವೇಂದ್ರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಈ ಭಾಗದಲ್ಲಿ ಸೀಳುನಾಯಿಗಳು ಹೆಚ್ಚಾಗಿವೆ. ಅವು ಗುಂಪುಗುಂಪಾಗಿ ಜಿಂಕೆಗಳ ಮೇಲೆ ದಾಳಿ ನಡೆಸುತ್ತವೆ. ಹೀಗಾಗಿ ಸೀಳುನಾಯಿಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಜಿಂಕೆ ನೀರಿಗಿಳಿದರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಮರಣೋತ್ತರ ವರದಿ ಬಂದ ಮೇಲೆ ಖಚಿತವಾಗಿ ಏನಾಗಿದೆ ಎಂಬುದು ತಿಳಿಯಲಿದೆ. ಈಗ ಕಳೇಬರವನ್ನು ಸುಟ್ಟು ಹಾಕಲಾಗಿದೆ ಎಂದು ಅರಣ್ಯ ಇಲಾಖೆಯ ರಘುರಾಮ್ ತಿಳಿಸಿದ್ದಾರೆ.
ಬಿಆರ್ಟಿ ಅರಣ್ಯ ಧಾಮವು ರಾಜ್ಯದಲ್ಲಿ ವಿಶಿಷ್ಟ ಕಾಡು ಪ್ರಭೇಧವನ್ನು ಒಳಗೊಂಡಿದೆ. ಈಗ ಬೇಸಿಗೆ ಕಾಲವಾಗಿದೆ. ಈಗಾಗಲೇ ಬೆಂಕಿರೇಖೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ನಿರ್ಮಿಸಿದ್ದಾರೆ. ಆದರೂ ಬೆಂಕಿ ಅವಘಡಗಳನ್ನು ಸಂಭವಿಸದಂತೆ ಕಾಯ್ದುಕೊಳ್ಳಲು ಕಟ್ಟೆಚ್ಚರ ವಹಿಸಬೇಕಿದೆ. ಆದರೂ ಅಲ್ಲಲ್ಲಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತದೆ. ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇರುವ ನೀರನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಪರಿಸರಪ್ರಿಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ