ವಿಹಾರಿ ಶತಕ, ಮಾಯಾಂಕ್‌ ಅರ್ಧಶತಕ


Team Udayavani, Feb 13, 2019, 12:30 AM IST

b-14.jpg

ನಾಗ್ಪುರ: ಕನ್ನಡಿಗ ಮಾಯಾಂಕ್‌ ಅಗರ್ವಾಲ್‌ (95 ರನ್‌) ಹಾಗೂ ಹನುಮ ವಿಹಾರಿ (114 ರನ್‌) ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಹಾಲಿ ರಣಜಿ ಚಾಂಪಿಯನ್‌ ವಿದರ್ಭ ವಿರುದ್ಧದ ಇರಾನಿ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಶೇಷ ಭಾರತ ಮೊದಲ ದಿನ ಪ್ರಥಮ ಇನ್ನಿಂಗ್ಸ್‌ನಲ್ಲಿ 330 ರನ್‌ ಪೇರಿಸಿ ಆಲೌಟಾಗಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಶೇಷ ಭಾರತಕ್ಕೆ ಮಾಯಾಂಕ್‌ ಅಗರ್ವಾಲ್‌ ಹಾಗೂ ಅನ್ಮೋಲ್‌ಪ್ರೀತ್‌ ಸಿಂಗ್‌ (15 ರನ್‌) ನೆರವಾದರು. ಇವರಿಬ್ಬರು ಮೊದಲ ವಿಕೆಟಿಗೆ 46 ರನ್‌ ಜತೆಯಾಟ ನಿರ್ವಹಿಸಿ ಉತ್ತಮ ಆರಂಭ ನೀಡಿದರು. ಎರಡನೇ ವಿಕೆಟಿಗೆ ಒಂದಾದ ಮಾಯಾಂಕ್‌ ಹಾಗೂ ಹನುಮ ವಿಹಾರಿ 125 ರನ್‌ ಜತೆಯಾಟ ನಡೆಸಿ ತಂಡ ಭಾರೀ ಮೊತ್ತ ಪೇರಿಸುವ ಸೂಚನೆ ನೀಡಿದರು. ಆದರೆ ಈ ಹಂತದಲ್ಲಿ ಮಾಯಾಂಕ್‌ ಔಟಾದರು. ಕೇವಲ 5 ರನ್‌ ಅಂತರದಿಂದ ಅವರು ಶತಕ ತಪ್ಪಿಸಿಕೊಂಡರು. 134 ಎಸೆತ ಎದುರಿಸಿದ ಮಾಯಾಂಕ್‌ 10 ಬೌಂಡರಿ, 3 ಸಿಕ್ಸರ್‌ ಮೂಲಕ ಗುಡುಗಿದರು. 

ಅಗರ್ವಾಲ್‌ ಪತನದ ಬಳಿಕ ಶೇಷ ಭಾರತ ದಿಢೀರ್‌ ಕುಸಿತ ಅನುಭವಿಸಿತು. ಅಗ್ರ ಕ್ರಮಾಂಕದಲ್ಲಿ ನಾಯಕ ಅಜಿಂಕ್ಯ ರಹಾನೆ (13 ರನ್‌) ಶ್ರೇಯಸ್‌ ಅಯ್ಯರ್‌ (19 ರನ್‌), ಇಶಾನ್‌ ಕಿಶನ್‌ (2 ರನ್‌), ಕೆ.ಗೌತಮ್‌ (7 ರನ್‌) ಪೆವಿಲಿಯನ್‌ಗೆ ಪರೇಡ್‌ ನಡೆಸಿದರು. ಇದರಿಂದಾಗಿ ತಂಡ ದೊಡ್ಡ ಮೊತ್ತವನ್ನು ಒಟ್ಟುಗೂಡಿಸುವಲ್ಲಿ ಹಿನ್ನಡೆ ಅನುಭವಿಸಿತು.  ಹನುಮ ವಿಹಾರಿ ಒಟ್ಟು 211 ಎಸೆತ ಎದುರಿಸಿ 11 ಬೌಂಡರಿ ಮತ್ತು 2 ಸಿಕ್ಸರ್‌ ಮೂಲಕ ಶತಕ ಬಾರಿಸಿದ್ದರಿಂದ ಶೇಷ ಭಾರತ ಸಾಧಾರಣ ಮೊತ್ತ ಪೇರಿಸುವಂತಾಯಿತು. 

ವಿದರ್ಭ ಬಿಗು ದಾಳಿ
ವಿದರ್ಭ ಬೌಲರ್‌ಗಳಾದ ಆದಿತ್ಯ ಸರ್ವಟೆ (99ಕ್ಕೆ 3), ಅಕ್ಷಯ್‌ ವಖಾರೆ (62ಕ್ಕೆ 3) ಹಾಗೂ ರಜನೀಶ್‌ ಗುರ್ಬಾನಿ (58ಕ್ಕೆ 2) ಬಿಗು ಬೌಲಿಂಗ್‌ ನಡೆಸಿ ಶೇಷ ಭಾರತಕ್ಕೆ ಆಘಾತ ನೀಡಿದರು. ಪರಿಣಾಮ ಶೇಷ ಭಾರತದ ಮಧ್ಯಮ ಕ್ರಮಾಂಕ ಕುಸಿಯಿತು.

ಸಂಕ್ಷಿಪ್ತ ಸ್ಕೋರು: ಶೇಷಭಾರತ ಪ್ರಥಮ ಇನ್ನಿಂಗ್ಸ್‌ 330 ಆಲೌಟ್‌ (ಮಾಯಾಂಕ್‌ ಅಗರ್ವಾಲ್‌ 95, ಹನುಮ ವಿಹಾರಿ 114, ರಾಹುಲ್‌ ಚಾಹರ್‌ 22, ರಜಪೂತ್‌ 25, ಆದಿತ್ಯ ಸರ್ವಟೆ 99ಕ್ಕೆ 3, ಅಕ್ಷಯ್‌ ವಖಾರೆ 62ಕ್ಕೆ 3, ರಜನೀಶ್‌ ಗುರ್ಬಾನಿ 58ಕ್ಕೆ 2).

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.