ಯಕ್ಷಕಲಾ ರಕ್ಷಣ ವೇದಿಕೆ ಮುಂಬಯಿ ವತಿಯಿಂದ ಯಕ್ಷಗಾನ, ಸಮ್ಮಾನ


Team Udayavani, Feb 12, 2019, 4:53 PM IST

1002mum11.jpg

ಮುಂಬಯಿ: ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಶುದ್ಧ ಜ್ಞಾನದ ಕಲೆ ಯಕ್ಷಗಾನವಾಗಿದೆ. ಎಲ್ಲಿಯವರೆಗೆ ರಾಮಾಯಣ, ಮಹಾಭಾರತ ಮತ್ತು ಮಹಾಕಾವ್ಯಗಳ ಉಪಾಸನೆ ನಡೆಯುತ್ತದೋ ಅಲ್ಲಿಯವರೆಗೆ ಭಾರತ ಸುರಕ್ಷಿತವಾಗಿರುತ್ತದೆ. ಕಲಾವಿದರನ್ನು ಗೌರವಿಸುವ ಮೂಲಕ ವಿವಿಧ ಕಲಾಪ್ರಕಾರಗಳನ್ನು ಸಮೃದ್ಧಿಗೊಳಿಸಬೇಕು ಎಂದು ಥಾಣೆ ಜಿಲ್ಲಾ ವಿಶ್ವ ಹಿಂದು ಪರಿಷತ್ತಿನ ಅಧ್ಯಕ್ಷ ಪೊಲ್ಯ ಉಮೇಶ್‌ ಶೆಟ್ಟಿ ನುಡಿದರು.

ಫೆ. 7ರಂದು ಮೀರಾರೋಡ್‌ ಪೂರ್ವದ ಸಾಯಿಬಾಬಾ ನಗರದ ಸೈಂಟ್‌ ಥೋಮಸ್‌ ಚರ್ಚ್‌ ಸಭಾಗೃಹದಲ್ಲಿ ನಡೆದ ಯಕ್ಷಕಲಾ ರಕ್ಷಣ ವೇದಿಕೆ ಮುಂಬಯಿ ಇದರ ದಕ್ಷಿಣೋತ್ತರ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಅಶ್ವಿ‌ನಿ ಕೊಂಡದಕುಳಿಯವರ ನಿರ್ದೇಶನದ ಯಕ್ಷಗಾನ ಪ್ರದರ್ಶನಗಳ ಮುಂಬಯಿ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ಫಲಾಪೇಕ್ಷೆಗಳಿಲ್ಲದೆ, ಕಡು ಬಡತನದಲ್ಲಿಯೂ ಕಲಾಸೇವೆಗೈಯುವ ಸಂಘಟಕ, ಸಂಚಾಲಕ ಸದಾಶಿವ ವಾಲ್ಪಾಡಿ ಅವರ ಸಾಧನೆ ಅಪಾರವಾಗಿದೆ. ಅವರ ಪರಿಶ್ರಮದಿಂದ ಪಾರಂಪಾರಿಕ ಯಕ್ಷಗಾನ ಶೈಲಿ, ಪುರಾಣ ಕಥೆಗಳ ಬಯಲಾಟಗಳು ಜೀವಂತವಾಗಿದೆ.  ಇವುಗಳ ಬೆಳವಣಿಗೆಗೆ ಕಲಾಪೋಷಕರು, ಕಲಾಭಿಮಾನಿಗಳು ಸಹಕರಿಸಬೇಕು ಎಂದರು.

ಮೀರಾರೋಡ್‌ ಪಲಿಮಾರು ಮಠದ ಟ್ರಸ್ಟಿ ವಿದ್ವಾನ್‌ ರಾಧಾಕೃಷ್ಣ ಭಟ್‌ ಇವರು ಮಾತನಾಡಿ, ಸನಾತನ ಧರ್ಮಗಳ ವಿಶೇಷತೆಯನ್ನು ಬೋಧಿ ಸುವ ಮಾಧ್ಯಮ ಯಕ್ಷಗಾನವಾಗಿದೆ. ಇದು ಬದುಕಿನ ಜವಾಬ್ದಾರಿ ತಿಳಿಸುತ್ತದೆ. ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಶುದ್ಧ ಕನ್ನಡದ ಉಚ್ಚಾರಣೆ ಯಕ್ಷಗಾನದ ಉಸಿರಾಗಿದೆ ಎಂದರು.

ವಾಸ್ತು ಶಾಸ್ತ್ರಜ್ಞ ಅಶೋಕ್‌ ಪುರೋಹಿತ್‌ ಮಾತನಾಡಿ, ಧಾರ್ಮಿಕವಾಗಿ, ಆಧ್ಯಾತ್ಮಿಕವಾಗಿ, ಸಾಮಾಜಿಕವಾಗಿ ಸಾರ್ಥಕತೆ ಹೊಂದಲು ಪೌರಾಣಿಕ ಕಥೆಗಳ ಅಧ್ಯಯನ ಅತ್ಯಗತ್ಯ. ಧನಾತ್ಮಕ ಚಿಂತನೆ ಮೂಲಕ ಒತ್ತಡ ರಹಿತ ಜೀವನ ಸಾಗಿಸಲು ಧ್ಯಾನ ಅಗತ್ಯ ಎಂದರು.

ಯಕ್ಷಗುರು ಹೆರಂಜಾಲು ಗೋಪಾಲ ಗಾಣಿಗ, ರಂಗತಜ್ಞ ಗುಣಪಾಲ ಉಡುಪಿ, ಸಂತೋಷ್‌ ಗುರುಸ್ವಾಮಿ ಮೂಡು ಮಾರ್ನಾಡು ಇವರನ್ನು ಗಣ್ಯರು ಸಮ್ಮಾನಿಸಿ ದರು. ಸಂಚಾಲಕ ಸದಾಶಿವ ವಾಲ್ಪಾಡಿ ಗಣ್ಯರನ್ನು ಗೌರವಿಸಿದರು.

ವೇದಿಕೆಯಲ್ಲಿ ಮಹಾರಾಷ್ಟ್ರ ಮಾನವ ಸೇವಾ ಸಂಘದ ಡಾ| ಹರೀಶ್‌ ಶೆಟ್ಟಿ, ಮುಂಬಯಿ ದೇವಾಡಿಗ ಸಂಘದ ಅಧ್ಯಕ್ಷ ರವಿ ದೇವಾಡಿಗ, ಬಿಲ್ಲವರ ಅಸೋಸಿಯೇಶನ್‌ ಮಲಾಡ್‌ ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ಶೇಖರ ಪೂಜಾರಿ, ಉದ್ಯಮಿ, ಕಲಾಪೋಷಕ ನವೀನ ಭಂಡಾರಿ, ವಿಶ್ವ ಮತ್ತು ರಾಷ್ಟ್ರೀಯ ಜಾಗತಿಕ ಮಾನವಾಧಿಕಾರಿ ಸಂಸ್ಥೆಯ ಅಧ್ಯಕ್ಷ ಸಮಾಜ ರತ್ನ ಲಯನ್‌ ಡಾ| ಕೆ. ಟಿ. ಶಂಕರ್‌, ಸಮಾಜ ಸೇವಕ ಶಂಕರ ಪೂಜಾರಿ ಪೆಲತ್ತೂರು, ಬಂಟ್ಸ್‌ ಫೋರಂ  ಮೀರಾ-ಭಾಯಂದರ್‌ ಗೌರವಾಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ, ಕಲಾಪೋಷಕ ಚಂದ್ರಶೇಖರ ಶೆಟ್ಟಿ,  ಭಾಯಂದರ್‌ ಹನುಮಾನ್‌ ಭಜನಾ ಮಂಡಳಿಯ ಅಧ್ಯಕ್ಷ ಜಯರಾಮ ಶೆಟ್ಟಿ, ದಿನೇಶ್‌ ಶೆಟ್ಟಿ, ಹರೀಶ್‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಚಲನಚಿತ್ರ ಮತ್ತು ರಂಗಭೂಮಿ ನಟ ಜಿ. ಕೆ. ಕೆಂಚನಕೆರೆ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರ್ವಹಿಸಿದರು.

ಅಶ್ವಿ‌ನಿ ಕೊಂಡದಕುಳಿ ಅವರ ಸಂಯೋಜನೆ ಯಲ್ಲಿ ಹಾಗೂ ಹೆರಂಜಾಲು ಗೋಪಾಲ ಗಾಣಿಗ ಅವರ ನಿರ್ದೇಶನದಲ್ಲಿ ದಕ್ಷಯಜ್ಞ ಯಕ್ಷಗಾನ ಪ್ರದರ್ಶನಗೊಂಡಿತು. ಭಾಗವತ ರಾಗಿ ಗೋಪಾಲ ಕೃಷ್ಣ ಗಾಣಿಗ ಹೆರಂಜಾಲು, ಮದ್ದಳೆಯಲ್ಲಿ ಶಶಿಕುಮಾರ್‌ ಆಚಾರ್‌ ಉಡುಪಿ, ಚೆಂಡೆಯಲ್ಲಿ ರಾಮನ್‌ ಹೆಗ್ಡೆ ಅವರು ಸಹಕರಿಸಿದರು. ಮುಮ್ಮೇಳದಲ್ಲಿ ಕಲಾವಿದರುಗಳಾಗಿ ಅಶ್ವಿ‌ನಿ ಕೊಂಡದಕುಳಿ, ನರೇಂದ್ರ ಹೆಗ್ಡೆ, ಲಕ್ಷ್ಮೀನಾರಾಯಣ ಭಟ್‌, ನಾಗೇಂದ್ರ ಭಟ್‌ ಮೂರುರು, ಮಹಾಬಲೇಶ್ವರ ಭಟ್‌ ಇಟಗಿ, ಟಿ. ವಿ. ಸ್ಫೂರ್ತಿ ಭಟ್‌ ಮೊದಲಾದವರು ಪಾಲ್ಗೊಂಡಿದ್ದರು.  

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.