ಎ.ಮಣಿಮೇಖಲೈ ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕಿ
Team Udayavani, Feb 13, 2019, 1:17 AM IST
ಬೆಂಗಳೂರು: ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ನ ನೂತನ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಎ. ಮಣಿ ಮೇಖಲೈ ಅವರು ಸೋಮವಾರ ಫೆ.11ರಂದು ಅಧಿಕಾರ ವಹಿಸಿ ಕೊಂಡಿದ್ದಾರೆ. ಈ ಹಿಂದೆ ವಿಜಯ ಬ್ಯಾಂಕಿನ ಮಹಾ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದ ಮಣಿಮೇಖಲೈ, ಬೆಂಗಳೂರು ವಿಶ್ವವಿದ್ಯಾನಿಲಯದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಮಾರುಕಟ್ಟೆ)ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1998ರಲ್ಲಿ ವಿಜಯ ಬ್ಯಾಂಕಿನ ಅಧಿಕಾರಿಯಾಗಿ ಸೇರಿದ ಅವರು ಸತತ ಮೂರು ದಶಕ ಬ್ಯಾಂಕಿಂಗ್ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಅಪಾರ ಅನುಭವ ಪಡೆದಿದ್ದಾರೆ. ಶಾಖಾ ಮುಖ್ಯ ಸ್ಥರಾಗಿ, ವಲಯ ಮುಖ್ಯಸ್ಥ ರಾಗಿ ಹಾಗೂ ಕಾರ್ಪೋರೇಟ್ ಕಚೇರಿಯ ಪ್ರಮುಖ ವಿಭಾಗಗಳ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಂತಿಮವಾಗಿ ವಿಜಯ ಬ್ಯಾಂಕ್ ಬೆಂಗಳೂರು ಉತ್ತರ ವಲಯದ ಜನರಲ್ ಮ್ಯಾನೇಜರ್ ಸೇವೆಯಲ್ಲಿದ್ದರು ಎಂದು ಕೆನರಾ ಬ್ಯಾಂಕ್ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್