ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಡ್ಯಾಂಗೆ ನವಲಿಯಲ್ಲಿ ಜಾಗ
Team Udayavani, Feb 13, 2019, 1:28 AM IST
ವಿಧಾನಪರಿಷತ್: ತುಂಗಭದ್ರಾ ಜಲಾಶಯಕ್ಕೆ ಪೂರಕವಾಗಿ ಗಂಗಾವತಿ ಜಿಲ್ಲೆಯ ನವಲಿ ಗ್ರಾಮದ ಬಳಿ ಸಮಾನಾಂತರ ಜಲಾಶಯ ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಇದಕ್ಕಾಗಿ ಜಾಗ ಗುರುತಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಸದಸ್ಯ ಎನ್.ಎಸ್. ಬೋಸರಾಜು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ ಜಲಾಶಯದ ಸಾಮರ್ಥ್ಯಕ್ಕಿಂತ ಸುಮಾರು 33 ಟಿಎಂಸಿಯಷ್ಟು ನೀರು ಕಡಿಮೆ ಸಂಗ್ರಹ ಆಗುತ್ತಿದೆ. ಈ ಬಗ್ಗೆ ತಜ್ಞರಿಂದಲೂ ಅಭಿಪ್ರಾಯ ಸಂಗ್ರಹಿಸಿ, ಸಮಾ ನಾಂತ ರ ಜಲಾಶಯ ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ. ಇದರಿಂದ ರಾಜ್ಯಕ್ಕೆ 20 ಟಿಎಂಸಿ ಹಾಗೂ ನೆರೆಯ ಆಂಧ್ರಪ್ರದೇಶಕ್ಕೆ 11 ಟಿಎಂಸಿ ನೀರು ಸಿಗಲಿದೆ. ಇದಕ್ಕೆ ಆಂಧ್ರದಿಂದಲೂ ಸ್ಪಂದನೆ ದೊರಕಿದೆ ಎಂದರು. ಅಲ್ಲದೆ, ಕೃಷ್ಣಾ ನದಿಪಾತ್ರದಿಂದ ಗಣೇಕಲ್ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಯನ್ನು 2019-20ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.
ಕೃಷ್ಣಾ ಯೋಜನೆ ಸಂತ್ರಸ್ತರಿಗೆ ಮೂಲಸೌಕರ್ಯ
ವಿಧಾನಪರಿಷತ್: ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರ ಪುನರ್ವಸತಿ ಕೇಂದ್ರಗಳಿಗೆ ಸ್ಮಶಾನ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದಟಛಿ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಿಜೆಪಿ ಸದಸ್ಯ ಹನುಮಂತಪ್ಪ ರುದ್ರಪ್ಪ ನಿರಾಣಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂಲಸೌಕರ್ಯಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು. ಜತೆಗೆ ಸ್ಮಶಾನಕ್ಕಾಗಿ ಜಾಗವನ್ನು ಖರೀದಿಸಲಾಗುವುದು. ಯಾವುದಾದರೂ ಜಾಗದ ಲಭ್ಯತೆ ಇದ್ದರೆ, ಮಾಹಿತಿ ನೀಡುವಂತೆಯೂ ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಅಡಿ 137 ಪುನರ್ವಸತಿ ಕೇಂದ್ರಗಳನ್ನು ನಿರ್ಮಿಸಿದ್ದು, 107 ಕೇಂದ್ರಗಳಿಗೆ ಸಂತ್ರಸ್ತರು ಸ್ಥಳಾಂತರಗೊಂಡಿದ್ದಾರೆ.
ಯೋಜನೆ ಹಂತ-1 ಘಟ್ಟ 3ರಡಿ ಉಳಿದ ಮುಳುಗಡೆ ಗ್ರಾಮಗಳು ಹಿನ್ನೀರಿನಿಂದ ಸದ್ಯಕ್ಕೆ ಯಾವುದೇ ಬಾಧೆ ಆಗದಿರುವುದರಿಂದ ಸ್ಥಳಾಂತರಗೊಂಡಿಲ್ಲ. ಈ ಕೇಂದ್ರಗಳಿಗೆ 2016 ಮತ್ತು 2017ರಲ್ಲಿ ಒಟ್ಟಾರೆ 325.34 ಕೋಟಿ ರೂ. ವಿಶೇಷ ಅನುದಾನದಲ್ಲಿ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ