ಲೋಕಾ ಚುನಾವಣೆಗೆ ಕಾಂಗ್ರೆಸ್‌ ತಯಾರಿ


Team Udayavani, Feb 13, 2019, 7:55 AM IST

13-february-13.jpg

ದಾವಣಗೆರೆ: ಈಗಾಗಲೇ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸತತ ಮೂರು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ದೋಖಾ… ಆಗದಂತೆ ನೋಡಿಕೊಳ್ಳಬೇಕು. ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರನ್ನು ಗೆಲ್ಲಿಸುವ ಮೂಲಕ ಮೂರು ಚುನಾವಣಾ ಸೋಲಿನ ಸೇಡು ತೀರಿಸಿಕೊಳ್ಳಬೇಕು. ಅವರನ್ನು ಗೆಲ್ಲಿಸುವ ಹಠ, ಛಲ ಹೊಂದಬೇಕು ಎಂದು ಮಾಜಿ ಶಾಸಕ ವಡ್ನಾಳ್‌ ರಾಜಣ್ಣ ತಿಳಿಸಿದ್ದಾರೆ.

ಮಂಗಳವಾರ ರೇಣುಕ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್‌ ಮತ್ತು ಎಸ್‌.ಎಸ್‌. ಅಭಿಮಾನಿಗಳ ಬಳಗದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್‌ ನೇತೃತ್ವದ ಸರ್ಕಾರದಲ್ಲಿ ದಾವಣಗೆರೆ ಜಿಲ್ಲೆಯಲ್ಲಿದ್ದ 7 ಶಾಸಕರ ಕಾಲಾವಧಿಯಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು ಜಿಲ್ಲೆಯ ಇತಿಹಾಸದಲ್ಲೇ ಆಗಿಲ್ಲ ಎಂದರು.

ದಾವಣಗೆರೆಯಲ್ಲಿನ ಪಿಬಿ ರಸ್ತೆಯಲ್ಲಿ ಓಡಾಡಿದರೆ ಯಾವುದೋ ದೇಶದ ರಸ್ತೆಯಲ್ಲಿ ಓಡಾಡಿದಂತಹ ಅನುಭವ ಆಗುತ್ತದೆ. ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಾಮನೂರು ಶಿವಶಂಕರಪ್ಪ ದಾವಣಗೆರೆ ಮಾತ್ರವಲ್ಲ ಎಲ್ಲಾ ಕಡೆ ಅಷ್ಟೊಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಪ್ರತಿ ಮನೆಗೆ ಒಂದಲ್ಲ ಒಂದು ಸೌಲಭ್ಯ ತಲುಪಿದೆ. ಆದರೂ, ಶಾಮನೂರು ಶಿವಶಂಕರಪ್ಪ ಅವರನ್ನ ಬಿಟ್ಟರೆ ಎಲ್ಲರೂ ಸೋಲಬೇಕಾಯಿತು. ಚುನಾವಣೆ ಎಂದರೆ ಸೋಲು-ಗೆಲುವು ಸಾಮಾನ್ಯ. ಆದರೆ, ಚುನಾವಣಾ ಸೋಲಿಗೆ ಒಂದು ಕಾರಣವಾದರೂ ಬೇಕಲ್ಲ. ಸೋತರೆ ಏನಾಗುತ್ತದೆ ಎಂಬುದರ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕು ಎಂದರು.

ಜಗಳೂರು ಕ್ಷೇತ್ರದ ಮಾಜಿ ಶಾಸಕ ಎಚ್.ಪಿ. ರಾಜೇಶ್‌ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಸ್‌.ಎಸ್‌. ಮಲ್ಲಿಕಾರ್ಜುನ್‌ರವರೇ ನಮ್ಮ ಅಭ್ಯರ್ಥಿ. ವಿಧಾನ ಸಭಾ ಚುನಾವಣೆಯಲ್ಲಿ ಉಂಟಾದ ಸೋಲಿನ ನೋವನ್ನು ದೂರ ಮಾಡಲು ಅವರನ್ನ ಗೆಲ್ಲಿಸುವ ಒಂದೇ ವಾಕ್ಯದ ನಿರ್ಣಯ ಕೈಗೊಳ್ಳಬೇಕು. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ ನಂತರವೂ ಸೋತಿರುವ ಬಗ್ಗೆ ಮಲ್ಲಿಕಾರ್ಜುನ್‌ಗೆ ನೋವಾಗಿದೆ. ಆದರೂ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ, ಎದುರಿಸುವ ಆತ್ಮಸ್ಥೈರ್ಯ ಇದೆ. ಅವರ ಮನವೊಲಿಸಿ, ನಾವೆಲ್ಲ ಧೈರ್ಯ, ಆತ್ಮಸ್ಥೈರ್ಯ ತುಂಬಬೇಕು. ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರದಲ್ಲಿ ನಾನು, ಮಲ್ಲಿಕಾರ್ಜುನ್‌, ವಡ್ನಾಳ್‌ ರಾಜಣ್ಣ, ರಾಜೇಶ್‌ ಎಲ್ಲರೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೆವು. ಎಷ್ಟೇ ಕೆಲಸ ಮಾಡಿದ್ದರೂ ಎಲೆಕ್ಷನ್‌ನಲ್ಲಿ ಒಂದರೆಡು ಕಾರಣಕ್ಕೆ ಸೋಲಬೇಕಾಯಿತು. ಭತ್ತಕ್ಕೆ ಸೊಳ್ಳೆರೋಗ ಬಿದ್ದು ಹಾಳಾದಂತೆ… ಸೋಲಾಯಿತು. ಕಾಂಗ್ರೆಸ್ಸನ್ನು ಸೋಲಿಸಿದ ನಂತರ ಜನರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ. ಅವರಿಗೆ ಈಗ ಯಾಕಾದರೂ ಮಲ್ಲಿಕಾರ್ಜುನ್‌ ಅವರನ್ನ ಸೋಲಿಸಿದವೋ ಎಂಬುದು ಮನವರಿಕೆ ಆಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲ್ಲುವ ವರದಿ ಇದೆ. ಹಿಂದಿನ ಚುನಾವಣೆಯಲ್ಲಿ ನಾನೇ ಕಾಂಗ್ರೆಸ್‌ಗೆ ವೋಟ್ ಹಾಕಿದನೋ ಇಲ್ಲವೋ ಎಂಬ ಅನುಮಾನ ನನಗೇ ಇದೆ. ಈಗ ಎಲ್ಲಿಯೂ ಯಾವುದೇ ಸಮಸ್ಯೆ ಇಲ್ಲ. ಮಲ್ಲಿಕಾರ್ಜುನ್‌ ಅವರನ್ನ ಗೆಲ್ಲಿಸೋಣ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರೇ ನಮ್ಮ ಅಭ್ಯರ್ಥಿ. ಅವರಿಗೆ ಟಿಕೆಟ್ ಕೊಡಬೇಕು ಎಂದು ಕೆಪಿಸಿಸಿ ಸಭೆಯಲ್ಲಿ ಹೇಳಿದ್ದೇವೆ. ಕಳೆದ ಎಲೆಕ್ಷನ್‌ನಲ್ಲಿ ಸೋತಿರುವುದಕ್ಕೆ ಮಲ್ಲಿಕಾರ್ಜುನ್‌ ಅವರಿಗೆ ನೋವಿದೆ. ನೀವೇ ನಿಲ್ಲಬೇಕು ಎಂದು ಮನವೊಲಿಸುವ, ಒತ್ತಾಯಿಸಿ, ಮತ್ತೆ ಕಣಕ್ಕಿಳಿಸಿ, ಅವರನ್ನ ಗೆಲ್ಲಿಸುವ ಮೂಲಕ ನೋವನ್ನ ದೂರ ಮಾಡೋಣ ಎಂದ ಅವರು ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಹರಿಹಾಯ್ದರು.

ಮೇಯರ್‌ ಶೋಭಾ ಪಲ್ಲಾಗಟ್ಟೆ, ಉಪ ಮೇಯರ್‌ ಕೆ.ಚಮನ್‌ಸಾಬ್‌, ಸದಸ್ಯರಾದ ಎಚ್. ತಿಪ್ಪಣ್ಣ, ಎಂ. ಹಾಲೇಶ್‌, ಜಿಲ್ಲಾ ಪಂಚಾಯತಿ ಸದಸ್ಯರಾದ ಕೆ.ಎಸ್‌. ಬಸವಂತಪ್ಪ, ಕೆ.ಎಚ್. ಓಬಳೇಶಪ್ಪ, ಜಿ.ಸಿ. ನಿಂಗಪ್ಪ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್‌. ಬಸವರಾಜಪ್ಪ, ಮುಖಂಡರಾದ ಬಿ.ಎಚ್. ವೀರಭದ್ರಪ್ಪ, ಎಲ್‌.ಬಿ. ಭೈರೇಶ್‌, ಕಂಬತ್ತಹಳ್ಳಿ ಮಂಜುನಾಥ್‌, ಬಿ.ಜಿ. ನಾಗರಾಜಗೌಡ್ರು. ಬಿ.ಟಿ. ಹನುಮಂತಪ್ಪ, ಭಾಗ್ಯಮ್ಮ, ಶಶಿಕಲಾ, ಅಯೂಬ್‌ ಪೈಲ್ವಾನ್‌, ಸಾದಿಕ್‌ ಪೈಲ್ವಾನ್‌, ಯತಿರಾಜ್‌, ಪ್ರಕಾಶ್‌ ಪಾಟೀಲ್‌, ಮೌಲಾಸಾಬ್‌, ಎಸ್‌. ಮಲ್ಲಿಕಾರ್ಜುನ್‌ ಇದ್ದರು. ಬಿ.ಎಚ್. ಪರಶುರಾಮ್‌ ಸ್ವಾಗತಿಸಿದರು. ಕೆ.ಜಿ. ಶಿವಕುಮಾರ್‌ ನಿರೂಪಿಸಿದರು.

ಸೋಲಿಗೆ ಕಾರಣ ನಾವು-ನೀವು…
ಸಭೆಯಲ್ಲಿ ಜೈ ಮಲ್ಲಣ್ಣ… ಜೈ ಮಲ್ಲಣ್ಣ… ಎಂದು ಹೇಳಿ ಆಮೇಲೆ ಮನೆ ಮುರಿಯಬಾರದು. ಬೊಗಳೆ ಮಾತಾಡಿದರೆ ಕಾಂಗ್ರೆಸ್‌ ಉದ್ಧಾರ ಆಗೊಲ್ಲ. ಸಿದ್ದರಾಮಯ್ಯ ಸರ್ಕಾರದ ಅವಧಿ ಸುವರ್ಣ ಕಾಲ. 53 ಕೆರೆ ತುಂಬಿಸುವ ಯೋಜನೆ ಕೊಟ್ಟಿರುವ ಅವರನ್ನ ಸ್ಮರಿಸಬೇಕು. ಮಲ್ಲಿಕಾರ್ಜುನ್‌ ಸೋಲಲು ನಾವು-ನೀವು ಕಾರಣ ಬೇರೆ ಯಾರೂ ಅಲ್ಲ. ಮಲ್ಲಣ್ಣ ಲೀಡರ್‌ಗಳು ಹಂಚಲಿ ಅಂತ 50-100 ಮನೆ ಬರೆದುಕೊಟ್ಟರೆ. ಅವರು ತಮಗೆ ಬೇಕಾದವರಿಗೆ, ಅವರಿಗೆ ಬರೆದುಕೊಟ್ಟರು. ಇದೇ ದಾವಣಗೆರೆಯ ಎಸ್‌.ಎಸ್‌.ಎಂ ನಗರದಲ್ಲಿ ಬಿಜೆಪಿ ಬಾವುಟ ಹಾರುತ್ತಿವೆ. ಕೇಳಿದರೆ ನಿಮ್ಮವರಿಗೆ ದುಡ್ಡು ಕೊಟ್ಟು ಮನೆ ತೆಗೆದುಕೊಂಡಿದ್ದೇವೆ ಎಂದೇ ಹೇಳುತ್ತಾರೆ. ಒಂದು ಏರಿಯಾ ಕೊಟ್ಟರೆ ಜನರ ಕಾಲಿಗೆ ಬಿದ್ದು ವೋಟ್ ತರಬೇಕು. ನಾನು ಈ ಬಾರಿಯ ಎಲೆಕ್ಷನ್‌ನಲ್ಲಿ 15 ಸಾವಿರ ಲೀಡ್‌ ಕೊಡಿಸುತ್ತೇನೆ. ದಾವಣಗೆರೆ ಸಿಟಿಯಲ್ಲಿ ವೋಟ್ ಬರುವಂತೆ ಮಾಡಿದರೆ ಮಲ್ಲಿಕಾರ್ಜುನ್‌ ಗೆದ್ದೇ ಗೆಲ್ಲುತ್ತಾರೆ ಎಂದು ಆನಗೋಡು ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಸ್‌. ಬಸವಂತಪ್ಪ ಹೇಳಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.