16 ರಂದು ಕರಾವಳಿ ಪರಿಸರ ಸ್ಥಿತಿಗತಿ ವಿಚಾರ ಸಂಕಿರಣ


Team Udayavani, Feb 13, 2019, 11:21 AM IST

13-february-25.jpg

ಶಿರಸಿ: ಸಂಕೀರ್ಣ ಸ್ಥಿತಿಯಲ್ಲಿರುವ ಕರಾವಳಿಯ ಅರಣ್ಯ, ಪರಿಸರ ಪರಿಸ್ಥಿತಿ, ಸವಾಲುಗಳು ಹಾಗೂ ಪರಿಹಾರದ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಫೆ.16ರಂದು ಭಟ್ಕಳ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಮುಂಜಾನೆ 10:30ರಿಂದ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಹಾಗೂ ವೃಕ್ಷಲಕ್ಷ ಆಂದೋಲನದ ಮುಖ್ಯಸ್ಥ ಅನಂತ ಹೆಗಡೆ ಅಶೀಸರ, ಕರಾವಳಿ ಹಾಗೂ ಪಶ್ಚಿಮ ಘಟ್ಟದ ಪರಿಸರ ಸ್ಥಿತಿಗತಿ ಅತ್ಯಂತ ಸೂಕ್ಷ್ಮ ಹಾಗೂ ಸವಾಲಿನಿಂದ ಕೂಡಿದೆ. ಸಂರಕ್ಷಣೆಗೆ ಹಲವು ಕಾನೂನು ತೊಡಕುಗಳೂ ಇವೆ. ಪಶ್ಚಿಮ ಘಟ್ಟದ ನದಿ ಕಣಿವೆಗಳ ಉಳಿವಿಗೆ ಕರಾವಳಿ ರಕ್ಷಣೆ ಅಗತ್ಯ. ಅತಿಯಾದ ವಾಣಿಜ್ಯೀಕರಣದಿಂದ ಇಲ್ಲಿನ ಜೀವ ವೈವಿದ್ಯಕ್ಕೂ ಕುತ್ತು ಬಂದಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದ ಅನೇಕ ಸಂಕಟಗಳೂ ಎದುರಾಗಿವೆ. ಜನ ಜಾಗೃತಿ ಆಗಬೇಕು ಎಂದರು.

ಕಾರವಾರದ ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌, ಭಟ್ಕಳದ ಶಿವಶಾಂತಿಕಾ ಸಾವಯವ ಪರಿವಾರ, ಅರಣ್ಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿವಿ ಸಹಕಾರದಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ ಹಿರಿಯ ಅಧಿಕಾರಿಗಳು, ವಿಜ್ಞಾನಿಗಳು, ತಜ್ಞರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ಗೋಷ್ಠಿ, ಸಂವಾದ: ಮುಂಜಾನೆ 10ಕ್ಕೆ ಶಾಸಕ ಸುನೀಲ ನಾಯ್ಕ ಉದ್ಘಾಟಿಸಲಿದ್ದು, ಜಿಲ್ಲಾ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಹೋರಾಟಗಾರ ಅನಂತ ಅಶೀಸರ ಪ್ರಾಸ್ತಾವಿಕ ಮಾತನಾಡಲಿದ್ದು, ಅತಿಥಿಗಳಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಮನೋಜಕುಮಾರ, ಅರಣ್ಯಾಧಿಕಾರಿ ಶ್ರೀಧರ, ವಿಜ್ಞಾನಿಗಳಾದ ಡಾ| ಸುಭಾಶ್ಚಂದ್ರನ್‌, ಕೇಶವ, ಮಂಜು, ಉಡುಪಿ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶಪ್ರಸಾದ ಪಾಂಡೇಲು, ಹೋರಾಟಗಾರ ಬಿ.ಎಚ್. ರಾಘವೇಂದ್ರ ಪಾಲ್ಗೊಳ್ಳುವರು.

ಪ್ರಥಮ ಗೋಷ್ಠಿ ಕರಾವಳಿ ಪರಿಸರ ಪರಿಸ್ಥಿತಿ ಕುರಿತು ನಡೆಯಲಿದ್ದು ಹಿರಿಯ ಪರಿಸರ ಅಧಿಕಾರಿ ವಿಜಯಾ ಹೆಗಡೆ ಅಧ್ಯಕ್ಷತೆ ವಹಿಸುವರು. ವಿಜ್ಞಾನಿಗಳಾದ ಡಾ| ಮಹಾಬಲೇಶ್ವರ, ಡಾ| ಪ್ರಕಾಶ ಮೇಸ್ತ, ಡಾ| ವಿ.ಎನ್‌. ನಾಯಕ, ಅಧಿಕಾರಿ ದಿನೇಶ ಕುಮಾರ ಮಾತನಾಡುವರು. ರಾಜ್ಯ ಪತ್ರಕರ್ತರ ಸಂಘದ ಸದಸ್ಯ ಜಿ.ಸುಬ್ರಾಯ ಭಟ್ಟ ಬಕ್ಕಳ, ಅಬ್ದುಲ್‌ ಜಬ್ಟಾರ ಉಪಸ್ಥಿತರಿರುವರು.

ಕೃಷಿ ತೋಟಗಾರಿಕೆಯಲ್ಲಿ ಕೀಟನಾಶಕಗಳ ದುರ್ಬಳಕೆ ಹಾಗೂ ತಡೆ, ಸಾವಯವ ಪ್ರಯೋಗದ ಕುರಿತು ಎರಡನೇ ಗೋಷ್ಠಿ ಅಧ್ಯಕ್ಷತೆಯನ್ನು ಪ್ರೊ| ರಘುನಾಥ ವಹಿಸುವರು. ವಿಜ್ಞಾನಿಗಳಾದ ಡಾ| ಜವರೇಗೌಡ, ಶ್ರೀಧರ ಹೆಬ್ಟಾರ, ಕಿಶನ್‌ ಬಲ್ಸೆ, ಈರಯ್ಯ ದೇವಾಡಿಗ ಮಾತನಾಡುವರು. ನಾಗರಾಜ್‌ ಬೇಂಗ್ರೆ, ನಾರಾಯಣ ಕೊಲ್ಲೆ ಪಾಲ್ಗೊಳ್ಳುವರು. ಮಧ್ಯಾಹ್ನ 3:30ಕ್ಕೆ ಮುಕ್ತ ಸಂವಾದದಲ್ಲಿ ಆರ್‌ಎಫ್‌ಒ ಶಂಕರ ಗೌಡ, ಪತ್ರಕರ್ತರಾದ ಕೃಷ್ಣಮೂರ್ತಿ ಹೆಬ್ಟಾರ, ರಘುನಂದನ ಭಟ್ಟ, ನರಸಿಂಹ ಸಾತೊಡ್ಡಿ, ಭಾಸ್ಕರ ನಾಯಕ, ಕದಂಬದ ವಿಶ್ವೇಶ್ವರ ಭಟ್ಟ ಕೋಟೆಮನೆ, ಗ್ರಾಮ ಅರಣ್ಯ ಸಮಿತಿಯ ರಾಮಾ ನಾಯಕ, ಕಿಸಾನ್‌ ಸಂಘದ ನಾರಾಯಣ ಭಟ್ಟ, ವನವಾಸಿಯ ಸೋಮು ಗೌಡ, ರವೀಂದ್ರ ಶೆಟ್ಟಿ, ಶಾಂತಾರಾಂ ಸಿದ್ದಿ, ರಮೇಶ ಖಾರ್ವಿ, ಎನ್‌.ಜಿ. ಸತ್ಯನಾರಾಯಣ ಸುಳ್ಯ, ಸತ್ಯನಾರಾಯಣ ಉಡುಪ, ಗಣಪತಿ ಕೆ., ಪಾಲ್ಗೊಳ್ಳುವರು.

ಸಮಾರೋಪ ಸಮಾರಂಭ ಸಂಜೆ 4ಕ್ಕೆ ಸ್ನೇಹಕುಂಜದ ಅಧ್ಯಕ್ಷ ಎಂ.ಆರ್‌.ಹೆಗಡೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅತಿಥಿಗಳಾಗಿ ಮಾಜಿ ಶಾಸಕ ಮಂಕಾಳು ವೈದ್ಯ, ಪತ್ರಕರ್ತ ಅಶೋಕ ಹಾಸ್ಯಗಾರ, ಅರಣ್ಯಾಧಿಕಾರಿ ಬಾಲಚಂದ್ರ, ಶಿವಾನಿ ಶಾಂತಾರಾಮ ಭಟ್ಕಳ, ಡಾ| ಜಗದೀಶ, ವಿನೋದ ಪಟಗಾರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ನಿರ್ಣಯ ಅಂಗೀಕಾರ ಕೂಡ ಇದೆ ಎಂದು ವಿವರಿಸಿದರು.

ಪತ್ರಕರ್ತರ ಸಂಘ ಕೂಡ ಪರಿಸರ ಸಂರಕ್ಷಣೆಗೆ ಕೈ ಜೋಡಿಸುತ್ತಿರುವುದು ಅಭಿನಂದನೀಯ.
•ಅನಂತ ಅಶೀಸರ, ಹೋರಾಟಗಾರ

ಪತ್ರಕರ್ತರು ಪರಿಸರದಿಂದ ಹೊರತಾಗಿಲ್ಲ. ಪರಿಸರ ಸಂರಕ್ಷಣೆ ಕೂಡ ನಮ್ಮ ಜವಾಬ್ದಾರಿ. ಈ ಅರಿವಿನ ದೃಷ್ಟಿಯಲ್ಲಿ ಕಾರ್ಯಕ್ರಮ ಆಯೋಜನೆ.
•ರಾಧಾಕೃಷ್ಣ ಭಟ್ಟ ಭಟ್ಕಳ ಅಧ್ಯಕ್ಷರು, ಜಿಲ್ಲಾ ಪತ್ರಕರ್ತರ ಸಂಘ

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.