ಸ್ಪರ್ಧಾತ್ಮಕ ಪರೀಕ್ಷೆ ಮಕ್ಕಳಿಗೆ ದಾರಿದೀಪ
Team Udayavani, Feb 14, 2019, 12:13 PM IST
ಚನ್ನಪಟ್ಟಣ: ಕಾಲೇಜು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಳು ದಾರಿದೀಪವಾಗಿದೆ ಎಂದು ನಗರ ಜೆ.ಡಿ.ಎಸ್. ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಆದಿತ್ಯ ಬಿರ್ಲಾ ಗ್ರೂಪ್ ಆಶ್ರಯದ ಜ್ಞಾನಾರ್ಜನ್ ಸಂಸ್ಥೆಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಉಚಿತ ಬೋಧನ ತರಗತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸಕ್ತ ತಂತ್ರಜ್ಞಾನ ಯುಗದಲ್ಲಿ ಅದರಲ್ಲೂ ಬಡತನದಲ್ಲೇ ಹುಟ್ಟಿಬೆಳೆದು ಶಿಕ್ಷಣವನ್ನು ಪಡೆಯುವ ಬಡ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ನಂತರ ಮೆಡಿಕಲ್ ಹಾಗೂ ಎಂಜಿನಿಯರ್ ಕೋರ್ಸ್ಗಳಿಗೆ ಹೋಗಲು ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಬೇಕಿದೆ. ಅದಕ್ಕೆ ಲಕ್ಷಾಂತರ ರೂ. ತೆತ್ತು ಕೋಚಿಂಗ್ಗೆ ಹೋಗಬೇಕಾಗಿದೆ.
ಇದನ್ನು ಮನಗಂಡು ಉಚಿತವಾಗಿ ಜ್ಞಾನಾರ್ಜನ್ ಕೋಚಿಂಗ್ ನಡೆಸಲಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಪರೀಕ್ಷೆಗೆ ಪೂರಕ ತರಬೇತಿ: ಜ್ಞಾನಾರ್ಜನ್ ಶೈಕ್ಷಣಿಕ ಯೋಜನೆ ಈ ಬಾರಿ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಪೂರಕ ತರಬೇತಿಯನ್ನು ನೀಡಲು ರಾಜ್ಯಮಟ್ಟದಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ಪದವಿ ಪೂರ್ವ ಕಾಲೇಜು ಹಾಗೂ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆಯ್ಕೆಯಾಗಿದೆ. ಸಾಮಾನ್ಯವಾಗಿ ಎಸ್ಎಸ್ ಎಲ್ಸಿ ಮುಗಿದ ತಕ್ಷಣ ಬಡ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಮಂದಿ ಜ್ಞಾನ, ಪಿಸಿಎಂಬಿ ಕೋರ್ಸ್ ತಗೆದುಕೊಂಡರೆ ಲಕ್ಷಾಂತರ ರೂ. ಅವಶ್ಯಕವಾಗಿರುತ್ತದೆ ಎಂದು ಬೇರೆ ಕೋರ್ಸಗಳಿಗೆ ಹೋಗುವುದನ್ನು ನೋಡಿದ್ದೇವೆ. ಇದಕ್ಕೆ ಕಾರಣ ಆರ್ಥಿಕ ಸಮಸ್ಯೆಗಳೇ ಆಗಿವೆ.
ಈ ರೀತಿಯ ಆರ್ಥಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಮ್ಮ ಭವಿಷ್ಯವನ್ನು ಚಿವುಟುಕೊಳ್ಳುವ ವಿದ್ಯಾರ್ಥಿಗಳಿಗೆ ನೆರವಾಗಲು ಆದಿತ್ಯ ಬಿರ್ಲಾ ಗ್ರೂಪ್ ತನ್ನದೇ ಆದ ಉಚಿತ ಶೈಕ್ಷಣಿಕೆ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.
ಅಭ್ಯಾಸದಲ್ಲಿ ಶ್ರದ್ಧೆ ಇರಲಿ: ಕಾಲೇಜಿನ ಪ್ರಾಂಶುಪಾಲ ಸದಾನಂದ ಮಾತನಾಡಿ, ಜ್ಞಾನಾರ್ಜನ್ ಶೈಕ್ಷಣಿಕ ಯೋಜನೆ ಜ್ಞಾನ, ಪಿಸಿಎಂಬಿ ಬಡ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಉಚಿತ ತರಬೇತಿ ನೀಡುತ್ತಿದ್ದು ವಿದ್ಯಾರ್ಥಿಗಳು ಶ್ರದ್ಧೆªಯಿಂದ ಅಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಿ: ಯುವ ಸಾಹಿತಿ ಶ್ರೀನಿವಾಸ ರಾಂಪುರ ಮಾತನಾಡಿ, ಕಾಲೇಜು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಅದರಲ್ಲೂ ಬಡವರ್ಗದ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲ ಮಾಡಲು ಶೈಕ್ಷಣಿಕೆ ಸೇವೆಯನ್ನು ನೀಡುತ್ತಿರುವ ಜ್ಞಾನಾರ್ಜನ್ ಶೈಕ್ಷಣಿಕ ಸೇವೆ ಅಗಾಧವಾಗಿದೆ. ಇದರ ಸದುಪಯೋಗ ಪ್ರತಿಯೊಬ್ಬ ವಿದ್ಯಾರ್ಥಿಗಳ ಕರ್ತವ್ಯ ಎಂದರು. ಈ ಸಂದರ್ಭದಲ್ಲಿ ಜ್ಞಾನಾರ್ಜನ್ ಸಂಯೋಜಕಿ ಎಚ್.ಜೆ.ಕಾವ್ಯ, ಉಪನ್ಯಾಸಕರಾದ ಅವಿನಾಶ್, ಲೋಹಿತ್. ಆರ್, ಪ್ರತಾಪ್ ಕುಮಾರ್, ಎಂ.ಶಿಕ್ಷಕ ಹರೀಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ