ಇಂದು ನಾರ್ವೆಯಲ್ಲಿ ಕ್ಷಮಿಸಿ
Team Udayavani, Feb 15, 2019, 12:30 AM IST
ಕನ್ನಡದ ಅನೇಕ ಚಿತ್ರಗಳು ವಿದೇಶಗಳಲ್ಲಿ ಪ್ರದರ್ಶನವಾಗಿವೆ. ಅದರಲ್ಲೂ ಬಿಡುಗಡೆ ನಂತರ ಪ್ರದರ್ಶನಗೊಂಡಿರುವುದೇ ಹೆಚ್ಚು. ಈಗ ಹೊಸಬರ ಚಿತ್ರವೊಂದು ನಾರ್ವೆ ದೇಶದಲ್ಲಿ ಪೂರ್ವಭಾವಿ ಪ್ರದರ್ಶನವಾಗುತ್ತಿದೆ. ಭರತ್ ಎಸ್.ನಾವುಂದ ನಿರ್ದೇಶನದ “ಅಡಚಣೆಗಾಗಿ ಕ್ಷಮಿಸಿ’ ಚಿತ್ರದ ಪ್ರೀಮಿಯರ್ ಶೋ ಫೆಬ್ರವರಿ 16 ರಂದು ನಾರ್ವೆ ದೇಶದ ಓಸ್ಲೋ ನಗರದಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಕನ್ನಡದ ಚಿತ್ರವೊಂದು ಬಿಡುಗಡೆ ಮುನ್ನವೇ ನಾರ್ವೆ ದೇಶದಲ್ಲಿ ಪೂರ್ವಭಾವಿ ಪ್ರದರ್ಶನ ಕಾಣುತ್ತಿರುವುದು ವಿಶೇಷ.
ಅಂದಹಾಗೆ, “ಅಡಚಣೆಗಾಗಿ ಕ್ಷಮಿಸಿ’ ಚಿತ್ರದ ಪೂರ್ವಭಾವಿ ಪ್ರದರ್ಶನದ ಉಸ್ತುವಾರಿಯನ್ನು ಚಿತ್ರದ ಕಾರ್ಯಕಾರಿ ನಿರ್ಮಾಪಕ ಹಾಗು ನಾರ್ವೆ ದೇಶದ ಪ್ರಜೆಯಾಗಿರುವ ಮಧುಸೂದನ್ ಶ್ರೀನಿವಾಸ್ ಅವರು ವಹಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಸದ್ಗುಣ ಮೂರ್ತಿ ನಿರ್ಮಾಪಕರು. ಪ್ರದೀಪ್ ವರ್ಮ ನಾಯಕರಾಗಿರುವ ಈ ಚಿತ್ರದಲ್ಲಿ ವಿದ್ಯಾ ಕುಲಕರ್ಣಿ, ಕೆ.ಎಸ್.ಶ್ರೀಧರ್, ಶ್ರೀನಿವಾಸ್ ಪ್ರಭು, ಪ್ರೀತುಪೂಜಾ, ಮೇಘ, ಸುಶೀಲ್ಕುಮಾರ್, ಶಿವಮಂಜು, ಅಗಸ್ತ್ಯ, ಹರಿಪ್ರಸಾದ್ ನಟಿಸಿದ್ದಾರೆ. ಎಸ್.ಪ್ರದೀಪ್ ವರ್ಮ ಸಂಗೀತವಿದೆ. ರವಿವರ್ಮ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
MUST WATCH
ಹೊಸ ಸೇರ್ಪಡೆ
OTT: ಮಾಲಿವುಡ್ನಲ್ಲಿ ಸದ್ದು ಮಾಡಿದ ಫಹಾದ್ ಫಾಸಿಲ್ ʼಆವೇಶಮ್ʼ ಈ ದಿನ ಓಟಿಟಿಗೆ ಎಂಟ್ರಿ?
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
The Safest Online Gaming Sites: Shielding Your Gaming Experience
ವಿಕ್ರಮ್ ಪುತ್ರನ ಜೊತೆ ಮಾರಿ ಸೆಲ್ವರಾಜ್ ಸಿನಿಮಾ: ʼಬೈಸನ್ʼ ಫಸ್ಟ್ ಲುಕ್ ಔಟ್