ಮಂಗನ ಕಾಯಿಲೆ: ಕಾರ್ಕಳದಲ್ಲಿ ಒಟ್ಟು 2 ಪ್ರಕರಣ  


Team Udayavani, Feb 15, 2019, 12:30 AM IST

monkey-disease-ddd.jpg

ವಿಶೇಷ ವರದಿ ಕಾರ್ಕಳ: ಇತ್ತೀಚೆಗೆ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಸದ್ದು ಮಾಡಿದ ಮಂಗನ ಕಾಯಿಲೆ ಭೀತಿ (ಕೆಎಫ್ಡಿ) ಜನರ ನೆಮ್ಮದಿಯನ್ನೇ ಕೆಡಿಸಿದೆ. ಉಣ್ಣೆ (ಉಣುಗು)ಗಳಿಂದ ಈ ಕಾಯಿಲೆ ಹರಡುತ್ತಿದ್ದರೂ ಮಂಗಗಳು ಸತ್ತ ಸುದ್ದಿ ಕೇಳಿ ಜನ ಮತ್ತಷ್ಟು ಆತಂಕಕ್ಕೀಡಾಗುತ್ತಾರೆ.

ಜ. 10ರ ಬಳಿಕ ಇಲ್ಲಿವರೆಗೆ ಕಾರ್ಕಳ ತಾಲೂಕು ಒಂದರಲ್ಲೇ ಒಟ್ಟು 52 ಮಂಗಗಳು ಮೃತಪಟ್ಟಿವೆ. ವಯೋಸಹಜವಾಗಿ ಮಂಗ ಗಳು ಸಾಯುತ್ತಿದ್ದರೂ, ಕಾಯಿಲೆಯ ಗುಮ್ಮದಿಂದ ಜನರು ಭಯಭೀತ ಗೊಂಡಿದ್ದಾರೆ. ಕೆಲವೊಂದು ಮಂಗಗಳು ವಾಹನ ಅಪಘಾತ, ವಿದ್ಯುತ್‌ ಶಾಕ್‌ನಿಂದಲೂ ಮೃತಪಟ್ಟಿವೆ.ಸತ್ತ 52 ಮಂಗಗಳ ಪೈಕಿ 2 ಮಂಗಗಳ ಸ್ಯಾಂಪಲ್‌ನಲ್ಲಿ  ಸೋಂಕು ದೃಢಪಟ್ಟಿದೆ. ಬಹುತೇಕ ಮಂಗಗಳು ಕೊಳೆತು ಮರಣೋತ್ತರ ಪರೀಕ್ಷೆ  ನಡೆಸಲಾಗದ ಕಾರಣ 52ರಲ್ಲಿ  19 ಮಂಗಗಳ ಮರಣೋತ್ತರ ಪರೀಕ್ಷೆ ಮಾತ್ರ ನಡೆಸಲಾಗಿದೆ. ಸ್ಯಾಂಪಲ್‌ ಅನ್ನು ಶಿವಮೊಗ್ಗ ವಿಡಿಎಲ್‌ (Virus Diagnostic Laboratory) ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ಅವುಗಳಲ್ಲಿ 11 ನೆಗೆಟಿವ್‌, 2 ಪಾಸಿಟಿವ್‌ ಆಗಿ ಕಂಡುಬಂದಿದೆ. 6 ಮಂಗಗಳ ವರದಿ ಇನ್ನಷ್ಟೇ ಬರಬೇಕಿದೆ. ಹಿರ್ಗಾನದ ಚಿಕ್ಕಲ್‌ಬೆಟ್ಟು ಹಾಗೂ ಅಯ್ಯಪ್ಪನಗರದ ಪಿಲಿಚೆಂಡಿಯಲ್ಲಿ ಪತ್ತೆಯಾದ ಮಂಗಗಳ ಸ್ಯಾಂಪಲ್‌ ನಲ್ಲಿ ಸೋಂಕು ದೃಢಪಟ್ಟಿದೆ.

ಅನವಶ್ಯವಾಗಿ ಕಾಡಿಗೆ ಹೋಗಬಾರದು. ತಮ್ಮ ಜಾನುವಾರು ಕಾಡಿಗೆ ಹೋಗದಂತೆ ಸಾಧ್ಯವಾದಷ್ಟು ತಡೆಗಟ್ಟಬೇಕು. ಕಾಡಿಗೆ ಹೋಗಲೇಬೇಕಾದ ಸಂದರ್ಭ ಮೈತುಂಬಾ ಬಟ್ಟೆ ಧರಿಸಿ, ಶೂ ಧರಿಸಿ ತೆರಳಬೇಕು. ಆರೋಗ್ಯ ಇಲಾಖೆಯಿಂದ ಉಚಿತವಾಗಿ ವಿತರಿಸುವ ಡಿ.ಎಂ.ಪಿ. ತೈಲ ಲೇಪಿಸಿ ಕಾಡಿಗೆ ತೆರಳಬೇಕು. ಕಾಡಿನಿಂದ ಬಂದ ಅನಂತರ ಬಿಸಿನೀರಿನಿಂದ ಸೋಪು ಹಚ್ಚಿ ಸ್ನಾನ ಮಾಡಿ,  ಬಟ್ಟೆಗಳನ್ನು ಬಿಸಿನೀರಿನಲ್ಲಿ  ತೊಳೆಯಬೇಕು. ಜ್ವರ, ವಿಪರೀತ ತಲೆನೋವು, ಕೈಕಾಲು- ಸೊಂಟನೋವು, ನಿಶ್ಶಕ್ತಿ ಕಂಡು ಬಂದಲ್ಲಿ ತತ್‌ಕ್ಷಣವೇ ತಪಾಸಣೆಗಾಗಿ ವೈದ್ಯರ ಬಳಿ ತೆರಳಿ ಸಲಹೆ ಪಡೆಯುವುದು ಮತ್ತು  ಸತ್ತ ಮಂಗ ಕಂಡುಬಂದಲ್ಲಿ ಸಮೀಪದ ಆರೋಗ್ಯ ಕೇಂದ್ರ, ಅರಣ್ಯ ಇಲಾಖೆ ಅಥವಾ ಪಶುವೈದ್ಯರ ಗಮನಕ್ಕೆ ತರುವಂತೆ ಜಾಗೃತಿ ಮೂಡಿಸಲಾಗುತ್ತಿದೆ.  

ಭಯ ಬೇಡ
ಮಂಗನ ಕಾಯಿಲೆ ಕುರಿತು ಭಯ ಬೇಡ. ಆದರೆ ಅಗತ್ಯ ಮುನ್ನೆಚರಿಕೆ  ಕ್ರಮಗಳನ್ನು ವಹಿಸುವುದು ಉತ್ತಮ.
– ಡಾ| ಕೃಷ್ಣಾನಂದ
ತಾಲೂಕು ಆರೋಗ್ಯ ಅಧಿಕಾರಿ, ಕಾರ್ಕಳ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.