ರಾಜೀವ್ಗಾಂಧಿ ವಿವಿ ಕುಲಸಚಿವರ ನೇಮಕಕ್ಕೆ ತಿದ್ದುಪಡಿ
Team Udayavani, Feb 15, 2019, 6:37 AM IST
ಬೆಂಗಳೂರು: ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲ ಸಚಿವರ ನೇಮಕ ಮಾಡಲು ಕಾಯ್ದೆ ತಿದ್ದುಪಡಿಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಿದ್ದ ವಿಧೇಯಕಕ್ಕೆ ಬಿಜೆಪಿ ಗಲಾಟೆಯ ನಡುವೆಯೇ ವೈದ್ಯಕೀಯ ಶಿಕ್ಷಣ ಸಚಿವ ಇ ತುಕಾರಾಂ ಒಪ್ಪಿಗೆ ಪಡೆದುಕೊಂಡರು.
ಕುಲಸಚಿವರ ನೇಮಕಕ್ಕೆ ಕಡ್ಡಾಯವಾಗಿ ಐದು ವರ್ಷ ಪ್ರೊಫೇಸರ್ ಆಗಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು ಎನ್ನುವ ನಿಬಂಧನೆಯನ್ನು ಸಡಿಲಗೊಳಿಸಲು ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಕಾಯ್ದೆ ಸದನದಲ್ಲಿ ಅಂಗೀಕಾರ ತಕ್ಷಣವೇ ಹಾಲಿ ಮೌಲ್ಯಮಾಪನ ಕುಲಸಚಿವ-
ಡಾ. ಎಂ.ಕೆ. ರಮೇಶ್ ಅವರನ್ನು ಬಿಡುಗಡೆಗೊಳಿಸಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕರ ಹುದ್ದೆಗೆ ವರ್ಗಾಯಿಸಲಾಗಿದೆ. ಮೌಲ್ಯಮಾಪನ ಕುಲ ಸಚಿವ ಹುದ್ದೆಗೆ ಕಿದ್ವಾಯಿ ಸಂಸ್ಥೆ ಪ್ರಾಧ್ಯಾಪಕ ಡಾ. ಕೆ.ಬಿ. ಲಿಂಗೇಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು