ಬೇಡಿಕೆಗಳ ಈಡೇರಿಕೆಗೆ ಬಿಸಿಯೂಟ ತಯಾರಕರ ಆಗ್ರಹ


Team Udayavani, Feb 15, 2019, 7:11 AM IST

dvg-2.jpg

ದಾವಣಗೆರೆ: ಕೆಲಸದ ಭದ್ರತೆ, ಕನಿಷ್ಠ ವೇತನ ಜಾರಿ, ಆರೋಗ್ಯ ವಿಮೆ, ಭವಿಷ್ಯನಿಧಿ ಜಾರಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌(ಎಐಟಿಯುಸಿ) ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಗುರುವಾರ ಶಾಲೆಯಲ್ಲಿ ಅಡುಗೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು.
 
ಕಳೆದ 16 ವರ್ಷದಿಂದ ದಾವಣಗೆರೆ ಜಿಲ್ಲೆಯಲ್ಲಿ 4 ಸಾವಿರ ಒಳಗೊಂಡಂತೆ ರಾಜ್ಯದಲ್ಲಿ 1.80 ಲಕ್ಷದಷ್ಟು ಕಾರ್ಯಕರ್ತೆಯರು ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸೌಲತ್ತು ಇಲ್ಲದೆಯೇ ಕೆಲಸ ಮಾಡುತ್ತಿರುವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಗೌರವಧನದ ಹೆಸರಲ್ಲಿ ಅತೀ ಕಡಿಮೆ ವೇತನ ನೀಡುತ್ತಿವೆ. ಸಾಕಷ್ಟು ಹೋರಾಟದ ಫಲವಾಗಿ ಮುಖ್ಯ ಅಡುಗೆಯವರಿಗೆ 2,700 ಮತ್ತು ಸಹಾಯಕ ಅಡುಗೆಯವರಿಗೆ 2,600 ರೂ. ನೀಡಲಾಗುತ್ತಿದೆ.

ಇಂದಿನ ದಿನಮಾನದಲ್ಲಿ ಅಷ್ಟು ಹಣದಲ್ಲಿ ಜೀವನ ನಡೆಸುವುದು ತೀರಾ ದುಸ್ತರ. ಸರ್ಕಾರ ಕೂಡಲೇ ಬಿಸಿಯೂಟ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
 
ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಿದಾಗ ಖುದ್ದು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಬಜೆಟ್‌ನಲ್ಲಿ ವೇತನ ಹೆಚ್ಚಳದ ನಿರೀಕ್ಷೆ ಮೂಡಿಸಿದ್ದರು.

ಆದರೆ, ಫೆ. 8 ರಂದು ಅವರು ಮಂಡಿಸಿರುವ ಬಜೆಟ್‌ನಲ್ಲಿ 500 ರೂ. ಮಾತ್ರ ಹೆಚ್ಚಳ ಮಾಡುವ ಮೂಲಕ ದುಡಿಯುವ ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ. ಬಜೆಟ್‌ಗೆ ಅನುಮೋದನೆ ಪಡೆಯುವ ಮುನ್ನವೇ ಪುನರ್‌ ಪರಿಶೀಲನೆ ನಡೆಸಿ, ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. 

16 ವರ್ಷದಿಂದ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರಿಗೆ ಕೆಲಸದ ಭದ್ರತೆ ಎಂಬುದೇ ಇಲ್ಲ. ಸಾಮಾಜಿಕ ಸೌಲಭ್ಯಗಳಾದ ಆರೋಗ್ಯ ವಿಮೆ, ಭವಿಷ್ಯನಿಧಿ ಯಾವುದೂ ಇಲ್ಲ. ಹಾಗಾಗಿ ಬಿಸಿಯೂಟ ಕಾರ್ಯಕರ್ತೆಯರನ್ನು ಶಾಲಾ ಸಿಬ್ಬಂದಿ, ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕರ ಕಾಯ್ದೆಯಡಿ ಸೌಲಭ್ಯ ಒದಗಿಸಬೇಕು. ಬಿಸಿಯೂಟ ಯೋಜನೆ ಎನ್ನುವ ಬದಲಿಗೆ ಬಿಸಿಯೂಟ ನಿರಂತರ ಕಾರ್ಯಕ್ರಮ ಎಂದು ಬದಲಾಯಿಸಬೇಕು. ಅಪಘಾತಕ್ಕೆ ತುತ್ತಾಗಿ ಮರಣ ಹೊಂದುವ ಕುಟುಂಬದವರಿಗೆ 5 ಲಕ್ಷ, ಅಪಘಾತಕ್ಕೆ ತುತ್ತಾದವರಿಗೆ 2 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ಒಳಗೊಂಡಂತೆ ಕೆಲವಾರು ಜಿಲ್ಲೆಯಲ್ಲಿ ಬಿಸಿಯೂಟ ಯೋಜನೆಯನ್ನು ಖಾಸಗಿಯವರಿಗೆ ವಹಿಸುವ ಹುನ್ನಾರ ನಡೆದಿದೆ. ಇದೇ ಪ್ರಕ್ರಿಯೆ ಎಲ್ಲಾ ಕಡೆ ನಡೆದಲ್ಲಿ 1.80 ಲಕ್ಷ ಕಾರ್ಯಕರ್ತೆಯರು ಬೀದಿ ಪಾಲಾಗಲಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ಬಿಸಿಯೂಟ ಯೋಜನೆಯನ್ನು ಖಾಸಗಿಯವರಿಗೆ ವಹಿಸಬಾರದು ಎಂದು ಒತ್ತಾಯಿಸಿದರು.

ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು, ರುದ್ರಮ್ಮ ಬೆಳಲಗೆರೆ, ಐರಣಿ ಚಂದ್ರು, ಆವರಗೆರೆ ವಾಸು, ಸಿ. ರಮೇಶ್‌, ಜ್ಯೋತಿಲಕ್ಷ್ಮಿ, ಪ್ರಮೀಳಾ, ಜಯಮ್ಮ, ವನಜಾಕ್ಷಮ್ಮ, ಚನ್ನಮ್ಮ, ಗಿರಿಜಮ್ಮ, ಮಲ್ಲಮ್ಮ, ಸಾವಿತ್ರಮ್ಮ, ಗದಿಗೇಶ್‌ ಪಾಳೇದ್‌, ನಾಗರತ್ನಮ್ಮ, ಮಂಜುಳಾ, ರೇಖಾ, ಪ್ರೇಮಾ, ಟಿ. ಪುಷ್ಪಾ, ವಸಂತಮ್ಮ, ಕರಿಬಸಮ್ಮ, ಸುವರ್ಣಮ್ಮ, ಮಾದಿಹಳ್ಳಿ ಮಂಜುನಾಥ್‌, ಗಂಗಮ್ಮ, ಅನುರಾಧಾ ಇತರರು ಇದ್ದರು.

ಟಾಪ್ ನ್ಯೂಸ್

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.