ನಾಮಕರಣ ಬದಲಾವಣೆಗೆ ಆಗ್ರಹ
Team Udayavani, Feb 15, 2019, 7:24 AM IST
ದಾವಣಗೆರೆ: ಸರಕಾರಿ ಅನುದಾನದಲ್ಲಿ ನಡೆದ ಸಾರ್ವಜನಿಕ ಕಾಮಗಾರಿಗಳಿಗೆ ಜೀವಂತವಿರುವ ಜನಪ್ರತಿನಿಧಿಗಳ ಹೆಸರು ಇಟ್ಟಿರುವುದನ್ನು 15 ದಿನದೊಳಗಾಗಿ ತೆಗೆದುಹಾಕಿ ದಾರ್ಶನಿಕರು, ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಬೇಕು ಎಂದು ಬಿಜೆಪಿ ದಾವಣಗೆರೆ ಜಿಲ್ಲೆ ಕಾನೂನು ವಿಭಾಗದ ಜಿಲ್ಲಾ ಸಂಚಾಲಕ ಎ.ಸಿ. ರಾಘವೇಂದ್ರ ಒತ್ತಾಯಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಿ ಅನುದಾನದಲ್ಲಿ ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ನಡೆದ ಕಾಮಗಾರಿಗಳಾದ ರಸ್ತೆ, ಉದ್ಯಾನವನ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಸಭಾಂಗಣ, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಜೀವಂತವಿರುವ ಜನಪ್ರತಿನಿಧಿಗಳ ಹೆಸರಿಡಲಾಗಿದ್ದು. ಇದು ಕಾನೂನು ಬಾಹಿರವಾಗಿದೆ ಎಂದರು.
ಈ ಹಿಂದೆ 2011ರಲ್ಲಿ ಚನ್ನಗಿರಿಯ ಸಾರ್ವಜನಿಕ ಕ್ರೀಡಾಂಗಣಕ್ಕೆ ಮಾಡಾಳ್ ವಿರೂಪಾಕ್ಷಪ್ಪ ಕ್ರೀಡಾಂಗಣವೆಂದು ನಾಮಕರಣ ಮಾಡಿದ ಪ್ರಕರಣಕ್ಕೆ
ಸಂಬಂಧಿಸಿದಂತೆ ರಿಟ್ ಪಿಟಿಷನ್ ನಂ.2201/2012ರಲ್ಲಿ ಜೀವಂತವಿರುವ ರಾಜಕೀಯ ನಾಯಕರ ನಾಮಕರಣ ಮಾಡುವಂತಿಲ್ಲ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಸ್ಪಷ್ಟ ಆದೇಶ ನೀಡಿದ್ದು, ಅದರಂತೆ ತೆರವುಗೊಳಿಸಲಾಗಿತ್ತು. ಆದರೆ, ದಾವಣಗೆರೆ ನಗರದಲ್ಲಿ ಮಾತ್ರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ನಗರದಲ್ಲಿ ಖಾಸಗಿ ಬಸ್ ನಿಲ್ದಾಣಕ್ಕೆ ಶಾಮನೂರು ಶಿವಶಂಕರಪ್ಪ ಹಳೇ ಬಸ್ ನಿಲ್ದಾಣ, ಕುಂದುವಾಡ ಕೆರೆಗೆ ಎಸ್. ಎಸ್. ಮಲ್ಲಿಕಾರ್ಜುನ್ ಸಾಗರ, ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಎಸ್.ಎಸ್. ಮಲ್ಲಿಕಾರ್ಜುನ್ ಸಭಾಂಗಣ ಸೇರಿದಂತೆ ವಿವಿಧ ರಸ್ತೆ, ಬಡಾವಣೆ, ಇಲಾಖೆ ಸಭಾಂಗಣಕ್ಕೆ ಜೀವಂತವಿರುವ ವಿವಿಧ ರಾಜಕಾರಣಿಗಳ ಹೆಸರಿಡಲಾಗಿದ್ದು, ಅಂತಹ ಬೋರ್ಡ್ಗಳ ತೆರವಿಗೆ ನವೆಂಬರ್ 23, 2018ರಂದು ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.
ಅರ್ಜಿ ಸಲ್ಲಿಸಿ ಹಲವು ತಿಂಗಳು ಕಳೆದರೂ ಯಾವುದೇ ಕ್ರಮವಾಗಿಲ್ಲ. ಈ ಕೂಡಲೇ 15 ದಿನದೊಳಗಾಗಿ ಕಾನೂನು ಕ್ರಮ ಕೈಗೊಂಡು ಬೋರ್ಡ್ಗಳನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳನ್ನು ಒಳಗೊಂಡಂತೆ ಸಂಬಂಧಪಟ್ಟವರ ಮೇಲೆ ಹೈಕೋರ್ಟ್ನಲ್ಲಿ ಪಿಟಿಷನ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಕೀಲರಾದ ಎಚ್. ದಿವಾಕರ್, ಶ್ರೀನಿವಾಸ್, ಡಿ.ಪಿ. ಬಸವರಾಜ್, ಲಿಂಬಾನಾಯ್ಕ, ಜಿ.ಸಿ.ವಸುಂಧರಾ, ಮಂಜುಳಾ, ಶಂಕರ್ರಾವ್, ಪಿ.ವಿ. ಶಿವಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ