ಕುಂಭಮೇಳಕ್ಕೆ 4 ತಾತ್ಕಾಲಿಕ ಬಸ್‌ ನಿಲ್ದಾಣ


Team Udayavani, Feb 15, 2019, 7:33 AM IST

m1-kumbhame.jpg

ಮೈಸೂರು: ತಿರುಮಕೂಡಲು ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಫೆ.17ರಿಂದ ಮೂರು ದಿನ ನಡೆಯುವ ಕುಂಭಮೇಳದಲ್ಲಿ ಲಕ್ಷಾಂತರ ಜನರು ಪುಣ್ಯಸ್ನಾನ ಮಾಡಲು ಆಗಮಿಸುತ್ತಿದ್ದು, ಸುಗಮ ಸಂಚಾರಕ್ಕಾಗಿ ನಾಲ್ಕು ತಾತ್ಕಾಲಿಕ ನಿಲುಗಡೆ ತಾಣಗಳನ್ನು ಸ್ಥಾಪಿಸಲಾಗಿದೆ. ನಿಲ್ದಾಣಗಳಿಂದ ಭಕ್ತರು ಒಂದು ಕಡೆಯಿಂದ ಮತ್ತೂಂದು ಕಡೆಗೆ ಸಂಚರಿಸಲು ಉಚಿತ ಮಿನಿಬಸ್‌ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ಕಡೆಯಿಂದ ಬರುವ ಭಕ್ತರು ಗಗೇಶ್ವರಿಯಿಂದ ಮುಂದೆ ಹೊಸದಾಗಿ ನಿರ್ಮಿಸಿರುವ ಸೇತುವೆ ಪಕ್ಕದ ತಾತ್ಕಾಲಿಕ ನಿಲ್ದಾಣದಲ್ಲಿ ನಿಲುಗಡೆ ಮಾಡಿ ನಂತರ ವಾಪಸ್‌ ಅಲ್ಲಿಂದ ಮೈಸೂರು ಕಡೆಗೆ ಸಂಚರಿಸುವುದು. ಕೊಳ್ಳೇಗಾಲ, ಚಾಮರಾಜನಗರ, ತಲಕಾಡು ಹಾಗೂ ತಮಿಳುನಾಡು ಕಡೆಯಿಂದ ಬರುವ ಭಕ್ತರು ತಮ್ಮ ವಾಹನಗಳನ್ನು ಅಗ್ನಿಶಾಮಕ ಠಾಣೆ ಎದುರು ನಿರ್ಮಿಸಿರುವ ತಾತ್ಕಾಲಿಕ ನಿಲ್ದಾಣದಲ್ಲಿ ನಿಲುಗಡೆ ಮಾಡಿ, ನಂತರ ಅದೇ ಮಾರ್ಗದಲ್ಲಿ ವಾಪಸ್ಸಾಗುವುದು.

ಹಳೇ ಸೇತುವೆ ಬಳಿ ನಿಲ್ದಾಣ: ಬೆಂಗಳೂರು, ಮಂಡ್ಯ, ಮಳವಳ್ಳಿ, ಬನ್ನೂರುನಿಂದ ಬರುವ ಭಕ್ತರು ತಮ್ಮ ವಾಹನಗಳನ್ನು ಕಾವೇರಿ ನದಿ ಹಳೇ ಸೇತುವೆ ಬಳಿ ತಾತ್ಕಾಲಿಕ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಿ ನಂತರ ಬನ್ನೂರು ಕಡೆಗೆ ವಾಪಸ್ಸಾಗುವುದು.

ತಾತ್ಕಾಲಿಕ ಸೇತುವೆ: ನಂಜನಗೂಡು, ತಿ.ನರಸೀಪುರ ಪಟ್ಟಣದ ಕಡೆಯಿಂದ ಬರುವ ಭಕ್ತರು ಉತ್ತಮ ವಾಹನಗಳನ್ನು ತಿರುಮಕೂಡಲು ಸೇತುವೆ ಬಳಿ ನಿಲುಗಡೆ ಮಾಡಿ, ನಂತರ ಅದೇ ಮಾರ್ಗವಾಗಿ ಸಂಚರಿಸುವುದು. ಭಕ್ತರ ಅನುಕೂಲಕ್ಕಾಗಿ ಗುಂಜಾನರಸಿಂಹಸ್ವಾಮಿ ದೇಗುಲದಿಂದ ಸಂಗಮ ಸ್ಥಳಕ್ಕೆ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿದ್ದು, ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಈ ಮಾರ್ಗದಲ್ಲಿ ಸಂಚರಿಸುವಂತೆ ಕೋರಲಾಗಿದೆ. 

ಮೈಸೂರಿನಿಂದ ತಿ.ನರಸೀಪುರ, ಕೊಳ್ಳೇಗಾಲ, ಚಾಮರಾಜ ನಗರಕ್ಕೆ ಬರುವ ವಾಹನಗಳು ಮೈಸೂರು-ಮೇಗಳಾಪುರ-ಮೇಗಳಾಪುರದಿಂದ ಬಲಕ್ಕೆ ತಿರುಗಿ ಹೊಸಹಳ್ಳಿ, ಕುಪ್ಪೇಗಾಲ ಸೇತುವೆ ಮಾರ್ಗವಾಗಿ ತಿರುಮಕೂಡಲು ವೃತ್ತದಲ್ಲಿ ಬಲಕ್ಕೆ ತಿರುಗಿ ಖಾಸಗಿ ಬಸ್‌ ನಿಲ್ದಾಣ ನಂತರ ಲಿಂಕ್‌ ರಸ್ತೆ ಮಾರ್ಗ ಕೊಳ್ಳೇಗಾಲ ಮುಖ್ಯರಸ್ತೆ ಮಾರ್ಗವಾಗಿ ತೆರಳುವುದು.

ಕೊಳ್ಳೇಗಾಲ, ಚಾಮರಾಜ ನಗರ, ತಲಕಾಡು ಹಾಗೂ ತಮಿಳುನಾಡು ಕಡೆಯಿಂದ ಮೈಸೂರಿಗೆ ಹೋಗುವ ವಾಹನಗಳು ಚಿಕ್ಕಮ್ಮ ತಾಯಿ ಛತ್ರದ ಬಳಿ ಎಡಕ್ಕೆ ತಿರುಗಿ ತಾಲೂಕು ಕಚೇರಿ ರಸ್ತೆ ವಿದ್ಯೋದಯ ವೃತ್ತದ ಮುಖಾಂತರ ಸುತ್ತೂರು, ವರುಣಾ ಮಾರ್ಗವಾಗಿ ಮೈಸೂರಿಗೆ ತೆರಳುವುದು.

ಬೆಂಗಳೂರು, ಮಂಡ್ಯ, ಮಳವಳ್ಳಿ, ಬನ್ನೂರಿನಿಂದ ಚಾಮರಾಜ ನಗರ, ಕೊಳ್ಳೇಗಾಲಕ್ಕೆ ಹೋಗುವ ವಾಹನಗಳು ಸೋಸಲೆ ಬಳಿ ಎಡಕ್ಕೆ ತಿರುಗಿ ದೊಡ್ಡೇಬಾಗಿಲು, ಪೂರಿಗಾಲಿ, ತಲಕಾಡು, ಮಾದಾಪುರ ಮಾರ್ಗವಾಗಿ ಕೊಳ್ಳೇಗಾಲಕ್ಕೆ ಸಂಚರಿಸುವುದು.

ಮಕ್ಕಳ ಜೇಬಲ್ಲಿ ಮಾಹಿತಿ ಚೀಟಿ ಇಡಿ: ಕುಂಭಮೇಳಕ್ಕೆ ಆಗಮಿಸುವ ಭಕ್ತರು ಜೊತೆಯಲ್ಲಿ ಚಿಕ್ಕಮಕ್ಕಳನ್ನು ಕರೆತಂದಲ್ಲಿ ಅವರ ಜೇಬಿನಲ್ಲಿ ಹೆಸರು, ವಿಳಾಸ ಮತ್ತು ಪೋಷಕರ ದೂರವಾಣಿ ಸಂಖ್ಯೆಗಳ ಮಾಹಿತಿಯನ್ನು ಇರಿಸುವುದು. ಪುಣ್ಯಸ್ನಾನ ಮಾಡುವ ಸಂದರ್ಭದಲ್ಲಿ ಪೋಷಕರು ಚಿಕ್ಕ ಮಕ್ಕಳು, ವೃದ್ಧರ ಬಗ್ಗೆ ಜಾಗೃತಿವಹಿಸಬೇಕು.

ಸ್ನಾನಘಟ್ಟಗಳ ಬಳಿ ನಿರ್ಮಿಸಿರುವ ಬ್ಯಾರಿಕೇಡ್‌ಗಳನ್ನು ದಾಟದಂತೆ ಸೂಚಿಸಿದೆ. ಮಹಿಳೆಯರು ತಮ್ಮ ಚಿನ್ನಾಭರಣಗಳು ಹಾಗೂ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಗಾವಹಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ಸಿಂಗ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.