ಬಿಸಿಯೂಟ ತಯಾರಕರ ಕಡೆಗಣೆಸಿದ ಸರ್ಕಾರ


Team Udayavani, Feb 15, 2019, 11:22 AM IST

15-february-16.jpg

ಹಾವೇರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸಂಬಳ ಹೆಚ್ಚಿಸದೇ ಇರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ (ಎಐಟಿಯುಸಿ) ನೇತೃತ್ವದಲ್ಲಿ ಬಿಸಿಯೂಟ ತಯಾರಕರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಕಾಗಿನೆಲೆ ರಸ್ತೆಯಲ್ಲಿರುವ ಮುರುಘರಾಜೇಂದ್ರ ಮಠದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹಾವೇರಿ ಉಪ ವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟನೆ ಮಾಡಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಮಾತನಾಡಿ, ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ನೇತೃತ್ವದಲ್ಲಿ 19-11-2018 ರಂದು ದೆಹಲಿಯ ಸಂಸತ್‌ ಭವನದ ಮುಂದೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ಬಿಸಿಯೂಟ ತಯಾರಕರ ಸಂಬಳ ಹೆಚ್ಚಿಸಬೇಕು ಎಂದು ಒತ್ತಾಯ ಮಾಡಲಾಗಿತ್ತು. ಆದರೆ, ಪ್ರತಿಭಟನೆಗೆ ಗಣನೆಗೆ ತೆಗೆದುಕೊಳ್ಳದ ಕೇಂದ್ರ ಸರ್ಕಾರ, ದುಡಿಯುವ ಮಹಿಳೆಯರ ಸಂಬಳ ಹೆಚ್ಚಿಸದೆ ಅನ್ಯಾಯ ಮಾಡಿದೆ ಎಂದು ದೂರಿದರು.

ಬೆಂಗಳೂರಿನಲ್ಲಿ 2-12-2018ರಂದು ಪ್ರತಿಭಟನೆ ನಡೆಸಿ ಪ್ರೀಡ್‌ಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿತ್ತು. ಆ ಸಮಯದಲ್ಲಿ ಮುಖ್ಯಮಂತ್ರಿಗಳು 3-12-2018 ರಂದು ಸಂಘಟನೆ ಪದಾ ಧಿಕಾರಿಗಳೊಂದಿಗೆ ಸಭೆ ನಡೆಸಿ, 2019-2020 ಬಜೆಟ್‌ನಲ್ಲಿ ವೇತನ ಹೆಚ್ಚಿಸುವ ಭರವಸೆ ನೀಡಿದ್ದರು. ಅವರ ಭರವಸೆ ಮಾತುಗಳನ್ನು ನಂಬಿ ಅಂದು ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಪಡೆದುಕೊಂಡಿದ್ದೇವು. ಆದರೆ, ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ ನಲ್ಲಿ ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ರಾಜ್ಯದ ಮುಖ್ಯಮಂತ್ರಿಗಳು ಭರವಸೆ ನೀಡಿದಂತೆ, ಬಜೆಟ್‌ನಲ್ಲಿ ಸಂಬಳ ಹೆಚ್ಚಳ ಮಾಡಬೇಕಿತ್ತು. ಆದರೆ, ಮುಖ್ಯಮಂತ್ರಿಯವರು ಅದನ್ನು ಮಾಡದೇ, ಅಂದಿನ ಅಹೋರಾತ್ರಿ ಧರಣಿಯನ್ನು ಹತ್ತಿಕ್ಕಲು ಸುಳ್ಳು ಭರಸವೆ ನೀಡಿದರು ಎಂಬ ಅನುಮಾನ ಮೂಡುತ್ತಿದೆ. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ನುಡಿದಂತೆ ನಡೆಯುವುದಿಲ್ಲ ಎಂಬ ಬಲವಾದ ಆರೋಪವಿತ್ತು. ಬಜೆಟ್‌ ಅಧಿ ವೇಶನ ಬಳಿಕ ಅದು ಮತ್ತೊಮ್ಮೆ ನಿಜ ಎಂಬುದು ಸಾಬೀತಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಈಗಲಾದರೂ ಬಿಸಿಯೂಟ ತಯಾರಕರ ಸಂಬಳ ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ಜಿಲ್ಲಾಧ್ಯಕ್ಷ ಜಿ.ಡಿ. ಪೂಜಾರ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಕ್ಕೆ ಬಂದರೆ, ಬಿಸಿಯೂಟ ತಯಾರಕರನ್ನು ಕಾಯಂಗೊಳಿಸುತ್ತೇನೆ ಎಂಬ ಭರವಸೇ ನೀಡಿದ್ದರು. ಕಾಯಂಗೊಳಿಸುವುದಿರಲಿ, ಸಂಬಳ ಹೆಚ್ಚಳ ಮಾಡದೇ, ಮೋಸ ಮಾಡಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಬಿಸಿಯೂಟ ನೌಕರರು ತುಂಬಾ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಉಳಿಸಿಕೊಳ್ಳುವಂಥ ಕೆಲಸವನ್ನು ಮುಖ್ಯಮಂತ್ರಿಯವರು ಮಾಡಬೇಕು ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ರೇಖಮ್ಮಾ ದನ್ನೂರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುನಾಥ ಲಕ್ಮಾಪೂರ, ವಿವಿಧ ತಾಲೂಕುಗಳ ಅಧ್ಯಕ್ಷರಾದ ಸರೋಜಮ್ಮಾ ಹಿರೇಮಠ, ಲಲಿತಾ ಬುಶೇಟ್ಟಿ, ರಾಜೇಶ್ವರಿ ದೊಡ್ಡಮನಿ, ಲತಾ ಹಿರೇಮಠ, ನಿರ್ಮಲಾ ಬಂಕಾಪುರಮಠ, ಪ್ರೇಮಾ ತಡಸ, ತಾಲೂಕು ಸಂಚಾಲಕರಾದ ವಿದ್ಯಾ ಸಿದ್ದಪ್ಪನವರ, ಲಲಿತಾ ಕಾಯಕದ ಸೇರಿದಂತೆ ನೂರಾರು ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.