“ಪರವಾನಿಗೆ ಪಡೆದ ಗುತ್ತಿಗೆದಾರರಿಗೆ ಮರಳು ಗಣಿಗಾರಿಕೆ ಅವಕಾಶ ನೀಡಿ’


Team Udayavani, Feb 16, 2019, 12:30 AM IST

z-sand.jpg

ಮಡಿಕೇರಿ : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಬದ್ಧವಾಗಿ ಪರವಾನಿಗೆ ಪಡೆದ ಗುತ್ತಿಗೆದಾರರಿಗೆ ಸೂಚಿತ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅವಕಾಶವನ್ನು ಒದಗಿಸದೆ, ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದು, ಇದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದೆಯೆಂದು ಕೊಡಗು ಜಿಲ್ಲಾ ಮರಳು ಗುತ್ತಿಗೆದಾರರ ಸಂಘ ನೇರ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು 2017ರಲ್ಲಿ ಜಾರಿಯಾದ ನೂತನ ಮರಳು ನೀತಿಯ ಅನುಷ್ಠಾನಕ್ಕೆ ಬದಲಾಗಿ, ಅಕ್ರಮ ಮರಳು ದಂಧೆಕೋರರೊಂದಿಗೆ ನೇರ ಶಾಮೀಲಾಗಿದೆಯೆಂದು ಕಟುವಾಗಿ ಟೀಕಿಸಿ, ಇದರಿಂದ ಜಿಲ್ಲೆಯ 8 ಮರಳು ಬ್ಲಾಕ್‌ಗಳಲ್ಲಿ ಮರಳು ತೆಗೆದು ಅಗತ್ಯವಿ ರುವವರಿಗೆ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲವೆಂದು ತಮ್ಮ ಅಸಹಾಯ ಕತೆಯನ್ನು ವ್ಯಕ್ತಪಡಿಸಿದರು.

2017ರ  ಡಿಸೆಂಬರ್‌ನಲ್ಲಿ ಗುತ್ತಿಗೆ ಪಡೆಯಲಾಗಿದ್ದರೂ, ಜೂನ್‌ ತಿಂಗಳಿನಿಂದ ಡಿಸೆಂಬರ್‌ವರೆಗೆ ಜಿಲ್ಲೆಯಾದ್ಯಂತ ಮರಳು ಗಣಿಗಾರಿಕೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಗಣಿಗಾರಿಕೆ ಸ್ಥಗಿತಗೊಂಡಿತ್ತು. ಆದರೆ, ಸ್ಥಳೀಯ ದಂಧೆಕೋರರು ಮಳೆಗಾಲವನ್ನು ಲೆಕ್ಕಿಸದೆ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಸಿ ಮಡಿಕೆೇರಿ ಹಾಗೂ  ವೀರಾಜಪೆೇಟೆ   ತಾಲೂಕುಗಳದ್ಯಂತ ಮರಳು ಸರಬರಾಜು ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಕಳೆದ ನವೆಂಬರ್‌ನಿಂದ ಗಣಿಗಾರಿಕೆಗೆ ಅವಕಾಶ ನೀಡುವಂತೆ ಇಲಾಖೆ ಮೂಲಕ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಸೂಕ್ತ ಸ್ಪಂದನ ಸಿಗಲಿಲ್ಲ. ನಿರಂತರ ಪ್ರಯತ್ನದ ಬಳಿಕ ಪ್ರಸಕ್ತ ಸಾಲಿನ ಜನವರಿಯಲ್ಲಿ ಅನುಮತಿ ನೀಡಿದ್ದರೂ ಮರಳು ಸಾಗಾಟಕ್ಕೆ ಬಳಸುವ ವಾಹನಗಳಿಗೆ ಜಿಪಿಎಸ್‌ ಅಳವಡಿಸುವ ಪ್ರಕ್ರಿಯೆಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಯೆಂದು ದೂರಿದರು.

ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಗಳನ್ನು ಸಂಪರ್ಕಿಸಿದಾಗ ಅವರು ಟಾಸ್ಕ್ ಫೋರ್ಸ್‌ನ ಶಿಫಾರಸ್ಸು ಅಗತ್ಯವೆಂದು ತಿಳಿಸಿದ್ದಾರೆ. ಆದರೆ, ಈಗಾಗಲೆ ಎಲ್ಲ ಹಂತಗಳಲ್ಲಿ ಅನುಮತಿಗಳನ್ನು ಪಡೆದು ಲಕ್ಷಾಂತರ ಬಂಡವಾಳ ಹಾಕಿ, ಸ್ಟಾಕ್‌ ಯಾರ್ಡ್‌ ನಿರ್ಮಿಸಿ ಸಿಸಿ ಕ್ಯಾಮೆರಾ, ವೇ ಬ್ರಿಡ್ಜ್ ಅಳವಡಿಸಿ ಗಣಿಗಾರಿಕೆ ಆರಂಭಿಸಲಾಗಿದೆ. ಆದರೆ, ಜಿಪಿಎಸ್‌ ಅಳವಡಿಸಲಾಗಿಲ್ಲ ಎನ್ನುವ ಒಂದೇ ಕಾರಣಕ್ಕೆ ಮರಳು ಸಾಗಾಟಕ್ಕೆ ಅವಕಾಶ ದೊರಕದೆ ಗುತ್ತಿಗೆದಾರರು ನಷ್ಟ ಅನುಭವಿ ಸುವಂತಾಗಿದೆ ಎಂದು ತಿಳಿಸಿದರು.

ಅಧಿಕಾರಿಗಳು ಅನುಸರಿಸುತ್ತಿರುವ ವಿಳಂಬ ಧೋರಣೆಗೆ ಗುತ್ತಿಗೆದಾರರು ಬಲಿಪಶುಗಳಾಗಿದ್ದಾರೆ. ನಿಯಮಾವಳಿ ಅನುಸಾರ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಅವಕಾಶ ನೀಡುವ ಮೂಲಕ ಗುತ್ತಿಗೆದಾರರ ನೆರವಿಗೆ ಬರಬೇಕೆಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಪಿ.ಟಿ. ರಮೇಶ್‌, ಗುತ್ತಿಗೆದಾರರಾದ ರಫೀಕ್‌ ದರ್ಬಾರ್‌, ಪರ್ವತಯ್ಯ, ಜಾಕೀರ್‌ ಹಾಗೂ ಹರೀಶ್‌ ಉಪಸ್ಥಿತರಿದ್ದರು. 

ದಬ್ಟಾಳಿಕೆ
ನೂತನ ಮರಳು ನೀತಿಯ ಅನ್ವಯ ಪರಿಶಿಷ್ಟರಿಗೆ ಮರಳು ಬ್ಲಾಕ್‌ಗಳನ್ನು ಮೀಸಲಿಡಲಾಗಿದೆ. ಅದರಂತೆ ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಬ್ಲಾಕ್‌ನ್ನು ಪರ್ವತಯ್ಯ ಎಂಬವರು ಬಿಡ್‌ ಮಾಡಿ ಪಡೆದುಕೊಂಡಿದ್ದಾರೆ. ಆದರೆ, ಅಲ್ಲಿರುವ ಅಕ್ರಮ ಮರಳು ದಂಧೆ ನಡೆಸುವ ಮಂದಿ ಗಣಿಗಾರಿಕೆ ನಡೆಸಲು ಅವಕಾಶ ನೀಡದೆ ದಬ್ಟಾಳಿಕೆ ಎಸಗಿದ್ದಾರೆ. ಅಲ್ಲದೆ, ಜೀವಬೆದರಿಕೆಯನ್ನೂ ಒಡ್ಡಿದ್ದಾರೆ. ಈ ಬಗ್ಗೆ ರಕ್ಷಣೆ ನೀಡುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆಗೆ ಮನವಿ ಮಾಡಲಾಗಿದ್ದರು ಯಾವುದೇ ಸ್ಪಂದನ ದೊರಕಿಲ್ಲವೆಂದು ಕರ್ನಾಟಕ ರಾಜ್ಯ ಭೋವಿ ಮಹಾಸಭಾದ ಅಧ್ಯಕ್ಷ ಮಂಜಪ್ಪ ಹುಲುಗ ಭೋವಿ ಆರೋಪಿಸಿದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.