ನಾನು ಜನರ ಕ್ಲರ್ಕ್,ಯಡಿಯೂರಪ್ಪ ಏನು?
Team Udayavani, Feb 16, 2019, 12:10 AM IST
ಹಾಸನ: ನಾನು ಯಾವುದೇ ಪಕ್ಷದ ಕ್ಲರ್ಕ್ ಅಲ್ಲ. ರಾಜ್ಯದ ಆರೂವರೆ ಕೋಟಿ ಜನರ ಕ್ಲರ್ಕ್ನಂತೆ ಕೆಲಸ ಮಾಡುತ್ತಿದ್ದೇನೆ. ಜನರ ಕೆಲಸವನ್ನು ಒಬ್ಬ ಕ್ಲರ್ಕ್ನಂತೆ ಮಾಡಲು ನನಗೆ ಹೆಮ್ಮೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಆಳುವ ಪಕ್ಷದ ಅಧ್ಯಕ್ಷನಾಗಿ ಅಮಿತ್ ಶಾ ಅವರು
ಇಷ್ಟು ಹಗುರವಾಗಿ ಮಾತನಾಡಬಾರದು. ಅಮಿತ್ ಶಾ ಅವರು ಒಬ್ಬ ಮುಖ್ಯಮಂತ್ರಿಯನ್ನು ಕ್ಲರ್ಕ್ ಎಂದು ಟೀಕಿಸುವುದಾದರೆ ಅವರ ಪಕ್ಷದ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಏನು ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲವೇ?ಅಪರೇಷನ್ ಕಮಲ, ಶಾಸಕರ ಖರೀದಿ ಮಾಡುತ್ತಿರುವ ಅವರ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಅಮಿತ್ಶಾ ಅವರಿಗೆ ನೈತಿಕತೆ ಇದ್ದರೆ ಆಪರೇಷನ್ ಕಮಲದ ಬಗ್ಗೆ ಮಾತನಾಡಬೇಕಾಗಿತ್ತು. ಆ ಬಗ್ಗೆ ಮಾತನಾಡಲಾರದಷ್ಟು ಮುಜುಗರದ ಸ್ಥಿತಿಯಲ್ಲಿದ್ದಾರೆ ಎಂದು ಚುಚ್ಚಿದ ಕುಮಾರ ಸ್ವಾಮಿ, ಅಭಿವೃದ್ಧಿ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಮುಂದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ