ಉಗ್ರ ದಾಳಿಗೆ ಆರ್ಡಿಎಕ್ಸ್ ಬಂದದ್ದು ಗಡಿಯಾಚೆಯಿಂದ ? NIA ಶಂಕೆ
Team Udayavani, Feb 16, 2019, 5:23 AM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾ ದಲ್ಲಿ 40 ಸಿಆರ್ಪಿಎಫ್ ಯೋಧರನ್ನು ಬಲಿ ಪಡೆದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ಆತ್ಮಾಹುತಿ ದಾಳಿಗೆ ಬಳಸಲಾಗಿರುವ ಆರ್ಡಿಎಕ್ಸ್ ಸ್ಫೋಟಕವನ್ನು ಗಡಿಯಾಚೆಯಿಂದ ಕಳ್ಳಸಾಗಣೆ ಮಾಡಿ ತರಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶಂಕಿಸಿದೆ.
ಜಮ್ಮು ಕಾಶ್ಮೀರದಲ್ಲಿ ಕಳೆದ ಹತ್ತು ವರ್ಷಗಳಲ್ಲೇ ಮೊದಲ ಬಾರಿಗೆ ಉಗ್ರ ಕೃತ್ಯಕ್ಕೆ ಆರ್ಡಿಎಕ್ಸ್ ಸ್ಫೋಟಕವನ್ನು ಆವಂತಿಪುರ ದಾಳಿಯಲ್ಲಿ ಬಳಸಲಾಗಿರುವುದು ಕಂಡುಬಂದಿದೆ ಎಂದು NIA ಹೇಳಿದೆ.
ಈ ನಡುವೆ ಇಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಸರ್ವ ಪಕ್ಷಗಳ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ ಪುಲ್ವಾಮಾ ಉಗ್ರದಾಳಿಗೆ ದೇಶದ ಪ್ರತಿಕ್ರಿಯೆ ಸ್ಪಷ್ಟವಾಗಿ ಪ್ರಕಟವಾಗಲಿದೆ. ಸಭೆಯು ಸಂಸತ್ತಿನ ಗ್ರಂಥಾಲಯದಲ್ಲಿ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಆರಂಭವಾಗಲಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಈ ಸರ್ವ ಪಕ್ಷ ಸಭೆಯನ್ನು ಕರೆದಿದ್ದಾರೆ.
ಪುಲ್ವಾಮಾ ದಾಳಿಯ ವಿವರಗಳನ್ನು ಸಭೆಯಲ್ಲಿ ಸರ್ವ ಪಕ್ಷಗಳಿಗೆ ನೀಡಲಾಗುವುದಲ್ಲದೆ ಸರಕಾರ ಈ ವರೆಗೆ ತೆಗೆದುಕೊಂಡಿರುವ ಕ್ರಮಗಳನ್ನು ಕೂಡ ವಿವರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಟ್ಟೆಚ್ಚರದಿಂದ ಇರುವಂತೆ ಭದ್ರತಾ ಪಡೆಗಳಿಗೆ ಸೂಚಿಸಲಾಗಿದೆ. ರಾಜ್ಯದ ಅನೇಕ ಸೂಕ್ಷ್ಮ ಭಾಗಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಮೊಬೈಲ್ ಸೇವೆಗಳನ್ನು ಅಮಾನತು ಪಡಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ