ಮ್ಯಾನ್‌ಹೋಲ್‌ಗ‌ಳೇ ಹೆಚ್ಚು ಅಪಾಯಕಾರಿ


Team Udayavani, Feb 16, 2019, 6:30 AM IST

manhol.jpg

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಗಿಂತ  ಜಲಮಂಡಳಿಯ ಮ್ಯಾನ್‌ಹೋಲ್‌ಗ‌ಳು, ಆಪ್ಟಿಕಲ್‌ ಫೈಬರ್‌ ಕೇಬಲ್‌ (ಒಎಫ್ಸಿ) ಚೇಂಬರ್‌ಗಳು ಅಪಾಯಕಾರಿ ಎಂಬ ಅಂಶ ಬಿಬಿಎಂಪಿಯಿಂದ ನಡೆಸಿದ ಸಮೀಕ್ಷೆ ಬಯಲು ಮಾಡಿದೆ. 

ರಸ್ತೆಗುಂಡಿ ಸಮಸ್ಯೆಯಿಂದಾಗಿ ಸಾವು-ನೋವುಗಳು ಸಂಭವಿಸಿದ ಪರಿಣಾಮ ಸಾರ್ವಜನಿಕರು ಪಾಲಿಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಜತೆಗೆ ಹೈಕೋರ್ಟ್‌ ಸಹ ಛೀಮಾರಿ ಹಾಕಿದರಿಂದ ಅಧಿಕಾರಿಗಳು, ಸಮರೋಪಾದಿಯಲ್ಲಿ ಗುಂಡಿ ಮುಚ್ಚುವ ಕಾರ್ಯಾಚರಣೆ ನಡೆಸಿ, ಬಹುತೇಕ ಆರ್ಟಿರಿಯಲ್‌ ಹಾಗೂ ಸಬ್‌ ಆರ್ಟಿರಿಯಲ್‌ ರಸ್ತೆಗಳನ್ನು ಗುಂಡಿಮುಕ್ತವಾಗಿಸಿದ್ದಾರೆ. 

ಆದರೆ, ನಗರದ ಪ್ರಮುಖ ರಸ್ತೆಗಳು ಗುಂಡಿಮುಕ್ತವಾದರೂ ವಾಹನ ಸವಾರರಿಗೆ ಮಾತ್ರ ಅಪಾಯ ತಪ್ಪಿಲ್ಲ ಎಂಬ ಆತಂಕಾರಿ ವಿಷಯ ಪಾಲಿಕೆಯಿಂದ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ. ಸಾರ್ವಜನಿಕರಿಗೆ ರಸ್ತೆಗಳಲ್ಲಿ ಅನಾನುಕೂಲವಾದ ಅಂಶಗಳ ಕುರಿತು ಸಮೀಕ್ಷೆ ನಡೆಸಿರುವ ಪಾಲಿಕೆಯ ರಸ್ತೆ ಮೂಲಸೌಕರ್ಯ ವಿಭಾಗವು, ಗುಂಡಿಗಿಂತ ಮ್ಯಾನ್‌ಹೋಲ್‌ ಅಪಾಯಕಾರಿ ಎಂಬುದನ್ನು ಗುರುತಿಸಿದ್ದಾರೆ. 

ಜಲಮಂಡಳಿಯ ಮ್ಯಾನ್‌ಹೋಲ್‌ಗ‌ಳು ಹಾಳಾಗಿರುವ ಸ್ಥಳಗಳು ಹಾಗೂ ವಾಹನ ಸವಾರರಿಗೆ ಯಾವ ರೀತಿಯ ತೊಂದರೆಯಾಗುತ್ತಿದೆ ಎಂಬುದರ ಅಧ್ಯಯನ ನಡೆಸಿ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಲವು ಬಾರಿ ಜಲಮಂಡಳಿಗೆ ಸೂಚಿಸಿದ್ದಾರೆ. ಆದರೆ, ಜಲಮಂಡಳಿಯ ಅಧಿಕಾರಿಗಳು ಸಮರ್ಪಕವಾಗಿ ವರದಿ ನೀಡಿಲ್ಲ. ಪರಿಣಾಮ ಪಾಲಿಕೆಯಿಂದಲೇ ಸಮೀಕ್ಷೆ ನಡೆಸಿದ್ದು, ವರದಿಯನ್ನು ಸರ್ಕಾರ ಹಾಗೂ ಜಲಮಂಡಳಿಗೆ ನೀಡಲಾಗಿದೆ. 

ಅದರಂತೆ ಪಾಲಿಕೆಯ ಪ್ರಮುಖ ರಸ್ತೆಗಳಲ್ಲಿ ಜಲಮಂಡಳಿ ನಿರ್ಮಿಸಿರುವ ಮ್ಯಾನ್‌ಹೋಲ್‌ಗ‌ಳು ವಾಹನ ಸವಾರರಿಗೆ ಹೆಚ್ಚು ಅನಾನುಕೂಲವಾಗಿವೆ. ಜತೆಗೆ ಅಪಘಾತಗಳಿಗೆ ಕಾರಣವಾಗುತ್ತಿವೆ. ಜಲಮಂಡಳಿಯೂ ಮ್ಯಾನ್‌ಹೋಲ್‌ಗ‌ಳನ್ನು ನಿರ್ಲಕ್ಷಿಸಿದರಿಂದ ಹಲವು ಭಾಗಗಳಲ್ಲಿ ಮ್ಯಾನ್‌ಹೋಲ್‌ಗ‌ಳು ಉಕ್ಕಿಹರಿದು ರಸ್ತೆಗಳು ಹಾಳಾಗಿವೆ. ಹೀಗಾಗಿ ಕೂಡಲೇ ಮ್ಯಾನ್‌ಹೋಲ್‌ಗ‌ಳ ದುರಸ್ತಿಪಡಿಸುವಂತೆ ಪಾಲಿಕೆಯ ಅಧಿಕಾರಿಗಳು ಜಲಮಂಡಳಿಗೆ ಪತ್ರ ಬರೆದಿದ್ದಾರೆ. 

ಒಎಫ್ಸಿ ಚೇಂಬರ್‌ಗಳ ಕಾಟ: ಖಾಸಗಿ ಸಂಸ್ಥೆಗಳು ರಸ್ತೆಗಳಲ್ಲಿ ಅಧಿಕೃತ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಒಎಫ್ಸಿ ಚೇಂಬರ್‌ಗಳೂ ವಾಹನ ಸವಾರರ ತಲೆನೋವಾಗಿ ಪರಿಣಮಿಸಿವೆ. ನಗರದ ರಸ್ತೆಗಳಲ್ಲಿ 904 ಕಡೆಗಳಲ್ಲಿ ಒಎಫ್ಸಿ ಚೇಂಬರ್‌ಗಳಿದ್ದು, ರಸ್ತೆ ಮಟ್ಟಕ್ಕಿಂತ ಎತ್ತರದಲ್ಲಿರುವುದರಿಂದ ದ್ವಿಚಕ್ರ ವಾಹನಗಳು ವೇಗವಾಗಿ ಚಲಿಸುವಾಗ ಅಪಘಾತ ಸಂಭವಿಸುವ ಸಾಧ್ಯತೆಯಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 

1,355 ಅಪಾಯಕಾರಿ ಮ್ಯಾನ್‌ಹೋಲ್‌: ಪಾಲಿಕೆಯ ವ್ಯಾಪ್ತಿಯ 1400 ಕಿ.ಮೀ. ಉದ್ದ ಆರ್ಟಿರಿಯಲ್‌ ಹಾಗೂ ಸಬ್‌ ಆರ್ಟಿರಿಯಲ್‌ ರಸ್ತೆಗಳಲ್ಲಿ ಜಲಮಂಡಳಿಯಿಂದ ಸಾವಿರಾರು ಮ್ಯಾನ್‌ಹೋಲ್‌ ನಿರ್ಮಿಸಲಾಗಿದೆ. ಆದರೆ, ಆ ಪೈಕಿ 1,355 ಕಡೆಗಳಲ್ಲಿನ ಮ್ಯಾನ್‌ಹೋಲ್‌ಗ‌ಳು ಅಪಾಯಕಾರಿಯಾಗಿವೆ ಎಂಬುದು ಸಮೀಕ್ಷೆಯಿದೆ ಬೆಳಕಿಗೆ ಬಂದಿದೆ. ಪ್ರಮುಖವಾಗಿ ಮ್ಯಾನ್‌ಹೋಲ್‌ಗ‌ಳು ರಸ್ತೆ ಮಟ್ಟಕ್ಕಿಂತ ತಳಭಾಗದಲ್ಲಿದ್ದರೆ, ಮತ್ತೆ ಹಲವೆಡೆ ರಸ್ತೆಗಿಂತ ಮೇಲ್ಮಟ್ಟದಲ್ಲಿದ್ದು, ವಾಹನ ಸವಾರರಿಗೆ ತೊಂದರೆಯುಂಟಾಗುತ್ತಿದ್ದು, ಅವುಗಳನ್ನು ಸರಿಪಡಿಸುವಂತೆ ಪತ್ರ ಬರೆಯಲಾಗಿದೆ. 

ಅಂಕಿ-ಅಂಶಗಳು
– 1400 ಕಿ.ಮೀ. ಆರ್ಟಿರಿಯಲ್‌, ಸಬ್‌ ಆರ್ಟಿರಿಯಲ್‌ ರಸ್ತೆಗಳ ಉದ್ದ 
– 1355 ಅಪಾಯಕಾರಿ ಮ್ಯಾನ್‌ಹೋಲ್‌ಗ‌ಳು
– 904 ಒಎಫ್ಸಿ ಚೇಂಬರ್‌ಗಳು
– 58 ಜಲಮಂಡಳಿ ವಾಟರ್‌ ವಾಲ್‌ ಚೇಂಬರ್‌ಗಳು
– 42 ಬೆಸ್ಕಾಂ ಹಾಗೂ ಕೆಪಿಸಿಎಲ್‌ ಚೇಂಬರ್‌ಗಳು
– 14 ಮಳೆನೀರು ಹರಿದು ಹೋಗಲು ನಿರ್ಮಿಸಿದ ಚೇಂಬರ್‌ಗಳು

ಪ್ರಮುಖ ರಸ್ತೆಗಳಲ್ಲಿನ ಮ್ಯಾನ್‌ಹೋಲ್‌ಗ‌ಳು ಮಳೆಗಾಲದಲ್ಲಿ ಉಕ್ಕಿಹರಿದು ಸಮಸ್ಯೆ ಸೃಷ್ಟಿಸುತ್ತಿದ್ದು, ಅವುಗಳ ಸಮೀಕ್ಷೆ ನಡೆಸಿ ವರದಿಯನ್ನು ಜಲಮಂಡಳಿಗೆ ನೀಡಲಾಗಿದೆ. ಆದರೆ, ಅವರು ಎಷ್ಟು ಮ್ಯಾನ್‌ಹೋಲ್‌ಗ‌ಳನು ದುರಸ್ತಿಪಡಿಸಿದ್ದಾರೆ ಎಂಬ ಮಾಹಿತಿ ನೀಡಿಲ್ಲ. ಇದೀಗ ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಮ್ಯಾನ್‌ಹೋಲ್‌ಗ‌ಳ ಗುರುತಿಸಿ ವರದಿ ಜಲಮಂಡಳಿಗೆ ನೀಡಿದ್ದು, ಅವುಗಳನ್ನು ದುರಸ್ತಿ ಪಡಿಸುವಂತೆ ಕೋರಲಾಗಿದೆ. 
-ಸೋಮಶೇಖರ್‌, ಮುಖ್ಯ ಎಂಜಿನಿಯರ್‌ (ರಸ್ತೆ ಮೂಲಸೌಕರ್ಯ)

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.