ಹೂಗ್ಯಂ ಗ್ರಾಪಂ ಅಧ್ಯಕ್ಷೆ ಪದಚ್ಯುತಿ
Team Udayavani, Feb 16, 2019, 7:27 AM IST
ಹನೂರು: ತಾಲೂಕಿನ ಹೂಗ್ಯಂ ಗ್ರಾಪಂ ಅಧ್ಯಕ್ಷರ ವಿರುದ್ಧ ಸದಸ್ಯರು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಜಯವಾಗಿದ್ದು, ಅಧ್ಯಕ್ಷೆ ರಾಜೇಶ್ವರಿ ಅವರನ್ನು ಪದಚ್ಯುತಿಗೊಳಿಸಲಾಗಿದೆ.
20 ಸದಸ್ಯ ಬಲದ ಪಂಚಾಯ್ತಿ ಅಧ್ಯಕ್ಷೆಯಾಗಿ ರಾಜೇಶ್ವರಿ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಅಧ್ಯಕ್ಷರಾದ ಬಳಿಕ ಆಡಳಿತ ವೈಫಲ್ಯ ಮತ್ತು ಕಾರ್ಯ ವೈಖರಿಯಿಂದ ಬೇಸತ್ತ 14 ಸದಸ್ಯರು ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಅವಕಾಶ ಕಲ್ಪಿಸುವಂತೆ ಎಸಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆ ಕ್ರಮ ಕೈಗೊಂಡಿದ್ದ ಎಸಿ ನಿಖೀತಾ ಚಿನ್ನಸ್ವಾಮಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ 14 ಸದಸ್ಯರು ಹಾಜರಾಗಿ ಅವಿಶ್ವಾಸ ನಿರ್ಣಯದ ಪರವಾಗಿ ಅಧ್ಯಕ್ಷರ ವಿರುದ್ಧವಾಗಿ ಮತ ಚಲಾವಣೆ ಮಾಡಿದರು.
ಪದಚ್ಯುತೆ ಅಧ್ಯಕ್ಷೆ ರಾಜೇಶ್ವರಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದರು. ಸಭೆಯಲ್ಲಿ ಉಪಾಧ್ಯಕ್ಷೆ ಚಿತ್ರಾ, ಷಣ್ಮುಗಂ, ಗಣೇಶ್, ನಾಗರಾಜು, ಸರೋಜಾ, ಮಾದಯ್ಯ, ಅಂಕಮ್ಮ, ಬಸವ, ವೆಂಕಟಪ್ಪಶೆಟ್ಟಿ, ಜಯಮ್ಮ, ಸಿದ್ದರಾಜು, ರಾಜೇಂದ್ರನ್, ಪೂಂಗೊಡಿ, ಪಾರ್ವತಿ ಉಪಸ್ಥಿತರಿದ್ದರು.
ಅವಿಶ್ವಾಸ ಸಭೆಗೆ ಅಧ್ಯಕ್ಷೆ ರಾಜೇಶ್ವರಿ, ರೂಪಾ, ಮಾದನಾಯ್ಕ, ಮೀನಾಕ್ಷಿ, ಜಡೇಮಾಡಿ, ಕಾಮರಾಜು ಗೈರು ಹಾಜರಾಗಿದ್ದರು. ಅವಿಶ್ವಾಸ ನಿರ್ಣಯ ಹಿನ್ನೆಲೆ ರಾಮಾಪುರ ಸಿಪಿಐ ಮನೋಜ್ಕುಮಾರ್ ಮತ್ತು ಸಿಬ್ಬಂದಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ