ಪಾಕಿಸ್ತಾನಕ್ಕೆ ಪಾಠ ಕಲಿಸಲು ಆಗ್ರಹ


Team Udayavani, Feb 16, 2019, 8:51 AM IST

vij-3.jpg

ನಿಡಗುಂದಿ: ಮೀಸೆ ಕೆಳಗೆ ಬಿದ್ದರೂ ಮಣ್ಣಾಗಲಿಲ್ಲ ಎನ್ನುವ ಪಾಪಿ ಪಾಕಿಸ್ತಾನ ತನ್ನ ಚಾಳಿ ಮುಂದುವರಿಸಿ ಉಗ್ರರನ್ನು ಭಾರತೀಯ ಸೇನೆ ಮೇಲೆ ಛೂ ಬಿಟ್ಟು 40ಕ್ಕೂ ಹೆಚ್ಚು ಸೈನಿಕರನ್ನು ಕೊಂದ ಪಾಕ್‌ಗೆ ಶೀಘ್ರ ತಕ್ಕಪಾಠ ಕಲಿಸಬೇಕು ಎಂದು ನಿವೃತ್ತ ಸೈನಿಕ ಸಿದ್ರಾಮೇಶ ಅರಮನಿ ಹೇಳಿದರು.

ಪಟ್ಟಣದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್‌ ಇಸ್ಮಾಯಿಲ್‌ ಮೂಲ್ಕಿಶಿಫಾಯಿ ಅವರ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಜಮ್ಮು ಕಾಶ್ಮೀರದ ಪುಲಾವಾಮಾ ಜಿಲ್ಲೆಯಲ್ಲಿ ಕೇಂದ್ರಿಯ ಮೀಸಲು ಪಡೆಯಸೈನಿಕರ ಮೇಲೆ ಗುರುವಾರ ಹೇಡಿಯಂತೆ ದಾಳಿ ಮಾಡಿ ಸೈನಿಕರ ಪ್ರಾಣ ತೆಗೆದ ಪಾಕಿಸ್ತಾನವನ್ನು ಭೂಪಟದಲ್ಲಿ ಇರದಂತೆ ನಾಶ ಮಾಡಬೇಕು. ಕಳೆದ ಕೆಲ ದಿನಗಳ ಹಿಂದೆ ನಡೆಸಿದ ಸರ್ಜಿಕಲ್‌ ಸ್ಟ್ರೈಕ್‌ದಿಂದ ಪಾಠ ಕಲಿಯದ ಪಾಕಿಸ್ತಾನವನ್ನು ಸಂಪೂರ್ಣ ನಾಶ ಮಾಡಬೇಕು. ಭಯೋತ್ಪಾದನೆಯನ್ನು ಮಟ್ಟಹಾಕದೆ ಅವರನ್ನು ಪೋಷಿಸುತ್ತಿರುವ ಪಾಕಿಸ್ತಾನ ನೆಲೆಯನ್ನು ಧ್ವಂಸ ಮಾಡುವ ಮೂಲಕ ಪ್ರತ್ಯುತ್ತರ ನೀಡಬೇಕು ಎಂದರು.

ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯ ವೈ.ಎಸ್‌. ಭಜಂತ್ರಿ ಮಾತನಾಡಿ, ಪಾಕಿಸ್ತಾನ ಪದೇ ಪದೇ ಉಗ್ರರ ಮೂಲಕ ಸೈನಿಕರ ಪ್ರಾಣ ತೆಗೆಯುತ್ತಿರುವುದು ನೋಡಿದರೆ ಅದೊಂದು ರೀತಿ ಯುದ್ಧ ಸಾರಿದಂತೆ ಕಾಣುತ್ತಿದೆ. ತಾಳ್ಮೆ, ಸಹನೆಯ ಭಾರತ ತನ್ನ ಶಕ್ತಿ, ಸಾಮರ್ಥ್ಯವನ್ನು ಇಡಿ ವಿಶ್ವಕ್ಕೆ ಸಾರುವ ಸಮಯ ಬಂದಿದ್ದು ಕೂಡಲೇ ಪಾಕ್‌ನ ನೆಲೆಯನ್ನು ಸಂಪೂರ್ಣ ನಾಶಪಡಿಸಬೇಕು. 40ಕ್ಕೂ ಅಧಿಕ ಸೈನಿಕರ ಪ್ರಾಣ ಪಡೆದ ಪಾಕ್‌ಗೆ ಮತ್ತೂಂದು ಸರ್ಜಿಕಲ್‌ ಸ್ಟ್ರೈಕ್‌ದಂತ ಹೊಡೆದ ನೀಡಬೇಕು.

ಕಾಶ್ಮೀರದಲ್ಲಿ ಪ್ರತ್ಯೇಕವಾದಿಗಳಿಗೆ ನೀಡಿದ ರಕ್ಷಣೆಯನ್ನು ಹಿಂಪಡೆದು ಅವರನ್ನು ಇತರೆ ರಾಜ್ಯಗಳ ಸೆರೆಮನೆಯಲ್ಲಿ ಬಂಧಿಯಾಗಿಸಬೇಕು ಎಂದರು.  ನಿವೃತ್ತ ಸೈನಿಕರಾದ ಬಿ.ಡಿ. ವಿಭೂತಿ, ಶಿವಾನಂದ ರೂಢಗಿ, ಬಸವರಾಜ ಗಣಿ, ಸಂಗಮೇಶ ಕೂಡಗಿ, ಸಂತೋಷ ಮಡಿವಾಳರ, ಹಿಂದೂ ಜನಜಾಗೃತಿ ಸಮಿತಿಯ ವೆಂಕಟರಮಣ ನಾಯ್ಕ, ಶಿವಶಂಕ್ರಪ್ಪ ಅಂಗಡಿ, ಬಸಯ್ಯ ಗಣಾಚಾರಿ, ಜಟ್ಟೆಪ್ಪ ಗಣಿ ಇತರರು ಇದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.