ಮದ್ಯವ್ಯಸನಿಗಳ ಮಕ್ಕಳ ಕುರಿತಾಗಿ ತಾತ್ಸಾರ ಬೇಡ ; ಪ್ರೋತ್ಸಾಹ ಕೊಡಿ


Team Udayavani, Feb 16, 2019, 11:32 AM IST

bhandary-pv-16-2.jpg

ಉಡುಪಿ: ರೋಟರಿ ಪರ್ಕಳ ಹಾಗೂ ರೋಟರಿ ಸಮುದಾಯ ದಳ ಕಬ್ಯಾಡಿ ಇವುಗಳ ಸಹಯೋಗದಲ್ಲಿ ಮಾಹಿತಿ ಕಾರ್ಯಾಗಾರ ಮತ್ತು ವಾರದ ಸಭೆ ಕಬ್ಯಾಡಿಯಲ್ಲಿರುವ ನಾಗಬ್ರಹ್ಮಸ್ಥಾನದಲ್ಲಿ ಇತ್ತಿಚೆಗೆ ನಡೆಯಿತು. ಮಾಹಿತಿ ಕಾರ್ಯಾಗಾರದಲ್ಲಿ ಮನೋವೇದ್ಯರಾಗಿರುವ ಹಾಗೂ ಡಾ. ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ನಿರ್ದೇಶಕರಾಗಿರುವ ಡಾ. ಪಿ.ವಿ. ಭಂಡಾರಿ ಮತ್ತು ಮನೋವೈದ್ಯರಾಗಿರುವ ಡಾ. ವಿರೂಪಾಕ್ಷ ದೇವರಮನೆಯವರು ಭಾಗವಹಿಸಿದ್ದರು.

‘ಮದ್ಯ ವ್ಯಸನಿಗಳ ಮಕ್ಕಳು – ನಮ್ಮ ಜವಾಬ್ದಾರಿ’ ಎಂಬ ವಿಷಯದ ಕುರಿತಾಗಿ ಡಾ. ಭಂಡಾರಿ ಮತ್ತು ಡಾ. ವಿರೂಪಾಕ್ಷ ಅವರು ತಮ್ಮ ವಿಚಾರಗಳನ್ನು ಸಭೆಯಲ್ಲಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಭಂಡಾರಿಯವರು, ಮದ್ಯವ್ಯಸನಿಗಳ ಮಕ್ಕಳ ಕುರಿತಾಗಿ ಸಮುದಾಯ ಜವಾಬ್ದಾರಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಕುಡಿತ ಎನ್ನುವುದೂ ಸಹ ಒಂದು ಕಾಯಿಲೆ. ಕುಡಿತದ ಚಟಕ್ಕೆ ಬಲಿಯಾದ ವ್ಯಕ್ತಿಯ ಮಕ್ಕಳನ್ನು ಈ ಸಮಾಜ ‘ಕುಡುಕನ ಮಗ’ ಎಂದೇ ಗುರುತಿಸುತ್ತದೆ, ಆ ಭಾವನೆ ಮೊದಲಿಗೆ ನಮ್ಮಲ್ಲಿ ದೂರವಾಗಬೇಕು. ಆ ಮಕ್ಕಳ ಮನಸ್ಸನ್ನು ಘಾಸಿಗೊಳಿಸುವ ಬದಲಿಗೆ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅದನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ ಎಂದು ಅವರು ಹೇಳಿದರು. ಅಂತಹ ಮಕ್ಕಳು ಮನೆಯಲ್ಲಿ ಹೆತ್ತವರ ಪ್ರೀತಿಯಿಂದ ವಂಚಿತರಾಗಿರುತ್ತಾರೆ, ಆ ಕಾರಣದಿಂದಲೇ ಈ ಮಕ್ಕಳು ನಿಧಾನವಾಗಿ ಅಪರಾಧ ಜಗತ್ತಿನತ್ತ ಸೆಳೆಯಲ್ಪಡುತ್ತಾರೆ, ಅದನ್ನು ತಪ್ಪಿಸುವ ಉದ್ದೇಶದಿಂದಲೇ ಈ ಕಾರ್ಯಕ್ರಮವನ್ನು ನಮ್ಮ ಆಸ್ಪತ್ರೆಯ ವತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದು ಡಾ. ಭಂಡಾರಿ ಅವರು ಹೇಳಿದರು.

ಮದ್ಯವ್ಯಸನಿ ಪೀಡಿತರ ಮಕ್ಕಳಿಗೆ ‘ನೀವು ಒಂಟಿಯಲ್ಲ’ ಎಂದು ಹೇಳುವುದು ನಮ್ಮೆಲ್ಲರ ಜವಾಬ್ದಾರಿ. ಹಾಗಾದಾಗ ಮಾತ್ರ ಅಂತಹ ಮಕ್ಕಳಿಗೆ ಮುಂದೆ ಉತ್ತಮ ಭವಿಷ್ಯ ಲಭ್ಯವಾಗುವಂತೆ ಮಾಡಲು ಸಾಧ್ಯ ಎಂದು ಡಾ. ವಿರೂಪಾಕ್ಷ ದೇವರಮನೆಯವರು ಅಭಿಪ್ರಾಯಪಟ್ಟರು.

ಬಾಳಿಗ ಆಸ್ಪತ್ರೆಯಲ್ಲಿ ಪ್ರತೀ ತಿಂಗಳ ಮೂರನೇ ಶನಿವಾರ ಮದ್ಯವ್ಯಸನಿಗಳ ಮಕ್ಕಳಿಗೆ ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಇದರಲ್ಲಿ, ಮದ್ಯವ್ಯಸನಿಗಳ ಮಕ್ಕಳನ್ನು ಮ್ಯೂಸಿಯಂ, ಬೀಚ್ ಗಳಿಗೆ ಕರೆದುಕೊಂಡು ಹೋಗುವುದು. ನಾಣ್ಯ ಸಂಗ್ರಹ, ಫೊಟೋಗ್ರಾಫಿ ಮತ್ತು ಇತರೇ ಹವ್ಯಾಸಗಳ ಕುರಿತು ಅವರಲ್ಲಿ ಆಸಕ್ತಿಯನ್ನು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂಬ ಮಾಹಿತಿಯನ್ನು ಡಾ. ಭಂಡಾರಿಯವರು ಇದೇ ಸಂದರ್ಭದಲ್ಲಿ ನೀಡಿದರು.

ರೋಟರಿ ಪರ್ಕಳದ ಅಧ್ಯಕ್ಷರಾಗಿರುವ ರೊಟೇರಿಯನ್ ಗುರುಪ್ರಸಾದ್ ಕಾಮತ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಎ. ಗಣೇಶ್ ಮತ್ತು ಲಕ್ಷ್ಮೀ ನಾಯಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.