ಇಂಡೋ-ಪಾಕ್ ಲಾಹೋರ್ ಬಸ್ಸಿಗೆ ಕಪ್ಪು ಜ್ಯಾಕೆಟ್, ಪ್ರತಿಭಟನೆ
Team Udayavani, Feb 16, 2019, 1:56 PM IST
ಫಗ್ವಾರಾ : 40 ಸಿಆರ್ಪಿಎಫ್ ಯೋಧರನ್ನು ಬಲಿ ಪಡೆದಿರುವ ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ” ಸದಾ ಎ ಸರ್ಹದ್ ” ಎಂಬ ಹೆಸರಿನ ಭಾರತ – ಪಾಕ್ ಬಸ್ ಸೇವೆಯನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿ ಬಲ ಪಂಥೀಯ ಸಂಘಟನೆಗಳ ಸದಸ್ಯರು ಇಂದು ಶನಿವಾರ ಲಾಹೋರ್ಗೆ ಹೋಗುತ್ತಿದ್ದ ಬಸ್ಸಿನತ್ತ ಕಪ್ಪು ಜ್ಯಾಕೆಟ್ ಮತ್ತು ಟಿ ಶರ್ಟ್ಗಳನ್ನು ಬೀಸಿ ಪ್ರತಿಭಟನೆ ನಡೆಸಿದರು.
ಶಿವಸೇನಾ (ಹಿಂದುಸ್ಥಾನ್) ರಾಜ್ಯ ಘಟಕದ ಅಧ್ಯಕ್ಷ ಮನೀಷ್ ಸೂದ್ ನೇತೃತ್ವದಲ್ಲಿ ಪ್ರತಿಭಟನಕಾರರು ದಿಲ್ಲಿ – ಲಾಹೋರ್ ಪಾಕಿಸ್ಥಾನ್ ಟೂರಿಸಂ ಡೆವಲಪ್ಮೆಂಟ್ ಕಾರ್ಪೊರೇಶನ್ (ಪಿಟಿಡಿಸಿ) ಬಸ್ಸು 1ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕ್ಕರೆ ಕಾರ್ಖಾನೆ ಚೌಕದ ಮೂಲಕ ಸಾಗುತ್ತಿದ್ದ ವೇಳೆ ಪ್ರತಿಭಟನೆ ನಡೆಸಿದರು.
ಲಾಹೋರ್ಗೆ ಹೋಗುತ್ತಿದ್ದ ಪಿಟಿಡಿಸಿ ಬಸ್ಸಿಗೆ ನಾವು ಕಪ್ಪು ಬಾವುಟ ತೋರಿಸಬೇಕೆಂದಿದ್ದೆವು; ಆದರೆ ಪೊಲೀಸರು ನಮ್ಮ ಕೈಯಿಂದ ಕಪ್ಪು ಬಾವುಟಗಳನ್ನು ಕಸಿದುಕೊಂಡರು ಎಂದು ಸೂದ್ ಹೇಳಿದರು.
ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ ಪಾಕಿಸ್ಥಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಳ್ಳಬೇಕು ಎಂದು ಸೂದ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ