ಕಾಟಿ ಹಾವಳಿಯಿಂದ ಗ್ರಾಮಸ್ಥರು ಕಂಗಾಲು


Team Udayavani, Feb 17, 2019, 12:30 AM IST

cow-dd.jpg

ಮಣಿಪಾಲ: ಹಿರಿಯಡಕ ಪಂಚನಬೆಟ್ಟುವಿನ ಕುಳೇದು ಪರಿಸರದಲ್ಲಿ ಕಾಟಿ ಹಾವಳಿ ಮಿತಿಮೀರಿದ್ದು ಜನರಲ್ಲಿ ಆತಂಕ ಮನೆಮಾಡಿದೆ. ಕಾಟಿಯೊಂದು ಕುಳೆದುವಿನ ರಾಧಾ ನಾಯಕ್‌ ಅವರ ಮನೆಯ ಹಸುವಿಗೆ ತಿವಿದು ಘಾಸಿ ಮಾಡಿದೆ. 

ಹಗಲಿನಲ್ಲೂ ಕಾಟಿಗಳು ನಿರ್ಭೀತಿಯಿಂದ ಸಂಚರಿಸುವುದರಿಂದ ಈ ಪ್ರದೇಶದ ಮಕ್ಕಳು, ಮಹಿಳೆಯರು ಆತಂಕದಲ್ಲೇ ದಿನ ದೂಡುವಂತಾಗಿದೆ. ಈ ಪ್ರದೇಶದಲ್ಲಿ ಹೈನುಗಾರಿಕೆ ಹಾಗೂ ಕೃಷಿಯನ್ನೇ ನಂಬಿ ದಿನ ಸಾಗಿಸುತ್ತಿರುವವರಿದ್ದು  ಕಾಟಿಗಳಿಂದ ರಾಸುಗಳಿಗೆ ಘಾಸಿ ಅಥವಾ ಪ್ರಾಣಾಪಾಯ ಉಂಟಾದಲ್ಲಿ ಸಂಭವಿಸುವ ನಷ್ಟವನ್ನು ಭರಿಸುವ ಶಕ್ತಿ ಅವರಲ್ಲಿಲ್ಲ. 

ಎಲ್ಲೆಲ್ಲಿ ಸಮಸ್ಯೆ
ಬೊಮ್ಮರಬೆಟ್ಟು ಮತ್ತು ಎರಲ್ಪಾಡಿ ವ್ಯಾಪ್ತಿಯಲ್ಲಿ ಕಾಟಿಗಳ ಹಾವಳಿ ಮಿತಿಮೀರಿದೆ. ಪಂಚನಬೆಟ್ಟು, ಏಳುಪಾಲು, ಸಾಗ, ನಡುಗುಡ್ಡೆ, ಸಾಣೆಕಲ್ಲು, ಎರಲ್ಪಾಡಿ ಪ್ರದೇಶದ ಜನರು ಆತಂಕದಲ್ಲಿದ್ದಾರೆ.

ಕಾಡುಪ್ರಾಣಿ ಬಾಧೆ
ಕಾಡಿನಲ್ಲಿ ಆಹಾರವಿಲ್ಲದೆ ನಾಡಿಗಿಳಿಯುತ್ತಿರುವ ಕಾಟಿ, ಹಂದಿ, ಮಂಗ, ನವಿಲಿನ ಬಾಧೆಯಿಂದ ಕೃಷಿಕರು ಕಂಗೆಟ್ಟು ಹೋಗಿದ್ದಾರೆ. ಕೃಷಿ ನಷ್ಟವಾಗುತ್ತಿದ್ದು ಸಾಲದಲ್ಲಿ ಮುಳುಗುವಂತಾಗಿದೆ. ಚಿರತೆಗಳ ಉಪಟಳವೂ ಇದ್ದು ಅಪಾಯದ ಸಾಧ್ಯತೆಯೂ ಇದೆ. 

ಅರಣ್ಯ ಇಲಾಖೆಗೆ ಪತ್ರ
ಕಾಟಿಗಳ ಹಾವಳಿಯಿಂದ ದನಗಳ ಮೇಲೆ ದಾಳಿ ಆಗುತ್ತಿರುವ ಬಗ್ಗೆ ಹಾಗೂ ಉಪಟಳದ ಬಗ್ಗೆ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು ಕ್ರಮಕ್ಕೆ ವಿನಂತಿಸಲಾಗಿದೆ ಎಂದು ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷೆ ಸವಿತಾ ನಾಯಕ್‌, ಪಿಡಿಒ ರಾಜಶೇಖರ್‌ ರಾವ್‌ ತಿಳಿಸಿದ್ದಾರೆ. 

ನೀರೆ ಮೀಸಲು ಅರಣ್ಯದಿಂದ ಕಾಟಿಗಳು ಕೆಳಗಿಳಿದು ಊರಿನೊಳಗೆ ಬರುತ್ತಿವೆ.ಇವುಗಳನ್ನು ಮತ್ತೆ ಮೀಸಲು ಅರಣ್ಯಕ್ಕೆ ಸೇರಿಸುವ ಕಾರ್ಯಾಚರಣೆ ನಡೆಸಲಾಗುವುದು. ಕಾಡುಪ್ರಾಣಿಗಳಿಂದ ದನಗಳಿಗೆ ಘಾಸಿಯಾದರೆ ಅಥವಾ ಸಾವನ್ನಪ್ಪಿದರೆ ಇಲಾಖಾ ನಿಯಮಾ ನುಸಾರ ಪರಿಹಾರ ನೀಡಲು ಅವಕಾಶ ಇದೆ. 
– ಜಯರಾಮ್‌,ಅರಣ್ಯಾಧಿಕಾರಿ,ಹಿರಿಯಡ್ಕ

ಪಶುಸಂಗೋಪನೆ ಇಲಾಖೆ ವೈದ್ಯಾಧಿಕಾರಿಗಳು ಕಾಡುಪ್ರಾಣಿಗಳಿಂದ ಘಾಸಿಯಾದ ದನಗಳನ್ನು ಪರಿಶೀಲನೆ ನಡೆಸಿ ವರದಿ ನೀಡುತ್ತಾರೆ. ಈ ವರದಿ ಆಧಾರದಲ್ಲಿ ಅರಣ್ಯ ಇಲಾಖೆಯಿಂದ ಪರಿಹಾರ ಪಡೆಯಬಹುದು. ಅಥವಾ ದನಗಳಿಗೆ ವಿಮೆ ಮಾಡಿಸಿದ್ದಲ್ಲಿ ಅದನ್ನು ಕ್ಲೇಮು ಮಾಡಬಹುದು. 
– ಡಾ| ಸರ್ವೋತ್ತಮ ಉಡುಪ, 
ಉಪ ನಿರ್ದೇಶಕ, ಪಶು ಸಂಗೋಪನಾ ಇಲಾಖೆ 

ಟಾಪ್ ನ್ಯೂಸ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.