21 ಕೋ.ರೂ. ವೆಚ್ಚದ ಭೋಜನ ಶಾಲೆ ಉದ್ಘಾಟನೆಗೆ ಸಜ್ಜು
Team Udayavani, Feb 17, 2019, 12:40 AM IST
ಕೊಲ್ಲೂರು : ಇಲ್ಲಿನ ಶ್ರೀಮೂಕಾಂಬಿಕಾ ದೇಗುಲದಲ್ಲಿ ಬಹು ನಿರೀಕ್ಷೆಯ ಸುವ್ಯವಸ್ಥಿತ ಬೃಹತ್ ಭೋಜನ ಶಾಲೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮಾರ್ಚ್-ಎಪ್ರಿಲ್ ತಿಂಗಳಿನಲ್ಲಿ ಭಕ್ತರ ಉಪಯೋಗಕ್ಕೆ ಸಮರ್ಪಣೆಗೊಳ್ಳಲಿದೆ.
21 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಶಾಲೆಯ ತಳ ಅಂತಸ್ತಿನಲ್ಲಿ ದೇಗುಲದ ನೌಕರರ ವಾಹನ ನಿಲುಗಡೆಗೆ ವ್ಯವಸ್ಥೆಗೊಳಿಸಲಾಗಿದೆ. ಪ್ರಥಮ ಅಂತಸ್ತಿನಲ್ಲಿ ಅಡುಗೆ ಕೋಣೆ ಹಾಗೂ ಊಟದ ಭವನ ನಿರ್ಮಾಣವಾಗಿದೆ. ಎರಡನೇ ಅಂತಸ್ತಿನಲ್ಲಿ ಲಡ್ಡು ಪ್ರಸಾದ ತಯಾರಿಕಾ ಕೊಠಡಿ ಹಾಗೂ ಸ್ವಸಹಾಯ ಪದ್ಧತಿ ಊಟಕ್ಕೆ ವ್ಯವಸ್ಥೆ ಇದೆ. ಏಕ ಕಾಲದಲ್ಲಿ 1 ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ 75 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿರುವ ಬೃಹತ್ ಕಟ್ಟಡದಲ್ಲಿ ಏಕ ಕಾಲದಲ್ಲಿ 1ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರೊಂದಿಗೆ 1 ಸಾವಿರ ಸಂಖ್ಯೆಯ ಭಕ್ತರು ಹೊರ ಆವರಣದಲ್ಲಿ ಊಟಕ್ಕಾಗಿ ಕಾದಿರಲು ವಿಶಾಲ ಕೋಣೆಯನ್ನು ನಿರ್ಮಿಸಲಾಗಿದೆ.
ಟೇಬಲ್ ವ್ಯವಸ್ಥೆ
ಈ ವರೆಗೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಅನ್ನ ಪ್ರಸಾದ ಸ್ವೀಕಾರಕ್ಕೆ ನೆಲದಲ್ಲಿ ಕೂರಬೇಕಿತ್ತು. ಈಗ ಎಲ್ಲರಿಗೂ ಟೇಬಲ್, ಫೈಬರ್ ಚೆಯರ್ ವ್ಯವಸ್ಥೆ ಮಾಡಲಾಗುತ್ತಿದೆ.
ದೇಗುಲದಿಂದಲೇ ವೆಚ್ಚ
ಒಳ ಚರಂಡಿ, ಕುಡಿಯುವ ನೀರಿನ ಸರಬರಾಜು ಸಹಿತ ಭೋಜನ ಶಾಲೆ ನಿರ್ಮಾಣಕ್ಕೆ ತಗಲುವ ಸುಮಾರು ಒಟ್ಟು 66 ಕೋಟಿ ರೂ. ವೆಚ್ಚವನ್ನು ಕೊಲ್ಲೂರು ದೇಗುಲ ಭರಿಸುತ್ತಿದೆ. ಗುತ್ತಿಗೆದಾರ ಕಾಪು ವಾಸುದೇವ ಶೆಟ್ಟಿ ತ್ವರಿತಗತಿ ಕಾಮಗಾರಿಗೆ ಮುಂದಾಗಿದ್ದಾರೆ. ಭೋಜನ ಶಾಲೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಅತೀ ಶೀಘ್ರ ಭಕ್ತರ ಉಪಯೋಗಕ್ಕೆ ಲಭ್ಯವಾಗಲಿದೆ.
– ಹರೀಶ ಕುಮಾರ್ ಶೆಟ್ಟಿ,ಅಧ್ಯಕ್ಷರು ಕೊಲ್ಲೂರು ದೇಗುಲ ವ್ಯವಸ್ಥಾಪನಾ ಸಮಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ