ವೀರರಿಗೆ ಮಿಡಿದ ಭಾರತದ ಹೃದಯ


Team Udayavani, Feb 17, 2019, 12:30 AM IST

v-12.jpg

ಭಾರವಾದ ಮನಸ್ಸು. ರೋಷಾಗ್ನಿ ತುಂಬಿದ ಹೃದಯ. ಅದೆಲ್ಲವನ್ನೂ ಮೀರಿಸುವ ಗಾಢವಾದ ಶೋಕ. ಉಗ್ರರ ರಣಹೇಡಿ ದಾಳಿಗೆ ಜೀವ ತೆತ್ತ 40 ಸೈನಿಕರ ಪಾರ್ಥಿವ ಶರೀರಗಳು ಅವರವರ ಹಳ್ಳಿಗಳಿಗೆ ಶನಿವಾರ ತಲುಪಿದಾಗ ಎಲ್ಲೆಡೆ ಜನವೋ ಜನ, ಅತ್ಯಂತ ಭಾವುಕತೆಯಿಂದ ಕಂಬನಿ ಮಿಡಿದು ಬಲಿದಾನಗೈದ ಯೋಧರಿಗೆ ಕಂಬನಿಯ ವಿದಾಯ ಹೇಳಿದರು. ಈ ಭಾವಕ್ಕೆ ಅನುಕಂಪಕ್ಕೆ ಜಾತಿ-ಧರ್ಮದ ಹಂಗಿರಲಿಲ್ಲ. ಮೇಲು, ಕೀಳಿನ ಸಂಕೋಲೆಯಿರಲಿಲ್ಲ. ತಮ್ಮ ಕುಟುಂಬದ ಸದಸ್ಯನನ್ನು ಕಳೆದುಕೊಂಡ ಭಾವವೇ ಎಲ್ಲೆಲ್ಲೂ ಅಭಿವ್ಯಕ್ತಗೊಂಡಿತ್ತು.

ನೀನೆಲ್ಲಿ ನಡೆವೆ ದೂರ, ಎಲ್ಲೆಲ್ಲೂ ಶೋಕವೇ: ಉತ್ತರ ಪ್ರದೇಶದ ಕನ್ನೋಜ್‌ ಜಿಲ್ಲೆಯ ಟಿವ್ರಾ ಹಳ್ಳಿಗೆ ಬೆಳಗ್ಗೆ 9ಕ್ಕೆ ಆಗಮಿಸಿದ ಯೋಧ ಪ್ರದೀಪ್‌ ಕುಮಾರ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಆ ಊರಿನ ಜನ ಬೆಳಗಿನ ಜಾವದಿಂದಲೇ ಕಾದುಕುಳಿತಿದ್ದರು. ಪ್ರದೀಪ್‌ ಕುಟುಂಬದ ದುಃಖದಲ್ಲಿ ಭಾಗಿಯಾದ ಸಾವಿರಾರು ಜನ ಆ ಹೆಮ್ಮೆಯ ಯೋಧನಿಗೆ ಭಾವಪೂರ್ಣ ವಿದಾಯ ಹೇಳಿದರು. 

ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ಯೋಧ ಅಜಿತ್‌ ಕುಮಾರ್‌ ಆಜಾದ್‌ರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ಗಂಟೆಗೆ ಅವರ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿ ದಾಗ, ಅವರ ರೋದನ ಮುಗಿಲು ಮುಟ್ಟಿತ್ತು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಜಿತ್‌ ಅಗಲಿದ್ದಾರೆ.  

ಪಂಜಾಬ್‌ನ ಮೋಗಾದಲ್ಲಿ, ಸಿಆರ್‌ಪಿಎಫ್ ಚಾಲಕ ಜೈಮರ್‌ ಸಿಂಗ್‌ ಅವರ ಪಾರ್ಥಿವ ಶರೀರ ಬೆಳಗ್ಗೆ ಆಗಮಿಸಿತು. ಸಿಆರ್‌ಪಿಎಫ್ನಲ್ಲಿ ಚಾಲಕರಾಗಿದ್ದ ಅವರು, ಗುರುವಾರ ಉಗ್ರರ ದಾಳಿಗೆ ತುತ್ತಾದ ಬಸ್ಸನ್ನು ಚಾಲನೆ ಮಾಡಿದ್ದರು. ಮಧ್ಯಾಹ್ನ ಅವರ ಅಂತ್ಯಸಂಸ್ಕಾರ ನಡೆಯಿತು. ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ರಾಟಕ್‌ ಕುಮಾರ್‌ ಠಾಕೂರ್‌ ಹಾಗೂ ಸಿಆರ್‌ಪಿಎಫ್ ಮುಖ್ಯ ಪೇದೆ ಸಂಜಯ್‌ ಕುಮಾರ್‌ ಪಾರ್ಥಿವ ಶರೀರಗಳಿಗೆ ಅಂತಿಮ ನಮನ ಸಲ್ಲಿಸಿದರು. 

ಹೃದಯ ಸಮುದ್ರ ಕಲಕಿ… ಆಗ್ರಾದ ಕೆಹರಾಯಿ ಹಳ್ಳಿಯಲ್ಲಿ, ಕೌಶಲ್‌ ಕುಮಾರ್‌ ರಾವತ್‌ ಅವರ ಶರೀರ ಗ್ರಾಮ ತಲುಪುತ್ತಲೇ ಜನ ರೊಚ್ಚಿಗೆದ್ದು, ಪಾಕಿಸ್ಥಾನದ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ರಾವತ್‌ ತಂದೆ, ಗೀತಾ ರಾಮ್‌ ರಾವತ್‌ ಮಾತನಾಡಿ, ಪಾಕಿಸ್ಥಾನಕ್ಕೆ ಭಾರತ ತಕ್ಕ ಶಾಸ್ತಿ ಮಾಡಲೇಬೇಕೆಂದು ಆಗ್ರಹಿಸಿದರು. ಆಕ್ರೋಶ ಭರಿತರಾದ ಜನ ಉಗ್ರರ ಹುಟ್ಟಗಿಸಬೇಕೆಂದು ಘೋಷಣೆ ಕೂಗಿದರು. 

ಪಟ್ಟು ಹಿಡಿದ ಸಂಬಂಧಿ: ವಾರಾಣಸಿಯ ತೋಫಾಪುರ ಹಳ್ಳಿಯಲ್ಲಿ ರಮೇಶ್‌ ಯಾದವ್‌ ಅವರ ಪಾರ್ಥಿವ ಶರೀರ ಬೆಳಗ್ಗೆ 8:30ಕ್ಕೆ ಆಗಮಿಸಿತು. ದಾರಿ ಇಕ್ಕೆಲಗಳಲ್ಲಿ ನಿಂತಿದ್ದ ಹಳ್ಳಿ ಜನ ಕೈಯ್ಯಲ್ಲಿ ಭಾರತದ ತ್ರಿವರ್ಣ ಧ್ವಜ ಹಿಡಿದು “ರಮೇಶ್‌ ಯಾದವ್‌ ಅಮರ್‌ ರಹೇ’ ಎಂದು ಘೋಷಣೆ ಕೂಗುತ್ತಿದ್ದರು. ಇವರ ಅಂತ್ಯ ಸಂಸ್ಕಾರದ ವೇಳೆ ರಮೇಶ್‌ ಯಾದವ್‌ ಸಂಬಂಧಿಯೊಬ್ಬರು, ಹಳ್ಳಿಗೆ ಒಂದು ಪೆಟ್ರೋಲ್‌ ಪಂಪ್‌ ಹಾಗೂ ಟಾರ್‌ ರಸ್ತೆ ಮಾಡಿಸಬೇಕೆಂದು ಪಟ್ಟು ಹಿಡಿದರು. ಸಚಿವ ಅನಿಲ್‌ ರಾಜಭರ್‌ ಅವರು ಈ ಬಗ್ಗೆ ಆಶ್ವಾಸನೆ ನೀಡಿದ ನಂತರ ಅಂತ್ಯಸಂಸ್ಕಾರಕ್ಕೆ ಅನುವು ಮಾಡಿಕೊಡಲಾಯಿತು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.