ಪಾಕ್ ವಿರುದ್ಧ ವಿತ್ತ ವಾರ್
Team Udayavani, Feb 17, 2019, 12:30 AM IST
ಹೊಸದಿಲ್ಲಿ: ಯೋಧರ ಮೇಲಿನ ಉಗ್ರರ ದಾಳಿ ಬಳಿಕ ಪಾಕ್ ವಿರುದ್ಧ ಭಾಗಶಃ ಸಿಡಿದೆದ್ದಿರುವ ಭಾರತ, “ಆರ್ಥಿಕ ಸಮರ’ವನ್ನೇ ಘೋಷಿಸಿದೆ. ಕೇಂದ್ರವು ಈಗ ಆ ದೇಶದಿಂದ ಆಮದಾಗುವ ಎಲ್ಲ ಸರಕುಗಳ ಮೇಲಿನ ಸುಂಕವನ್ನು ಶೇ.200ರಷ್ಟು ಹೆಚ್ಚಳ ಮಾಡಿ ದೊಡ್ಡ ಆಘಾತವನ್ನೇ ನೀಡಿದೆ. ತತ್ಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. 2017-18ರಲ್ಲಿ ಪಾಕಿಸ್ಥಾನದಿಂದ 3,482 ಕೋಟಿ ರೂ. ಮೊತ್ತದ ಸರಕುಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.
ಎಫ್ಎಟಿಎಫ್ಗೂ ದಾಖಲೆ
ಜೈಶ್-ಎ-ಮೊಹಮ್ಮದ್ ಉಗ್ರ ಸಂಘ ಟನೆಯೊಂದಿಗೆ ಪಾಕಿಸ್ಥಾನ ಹೊಂದಿರುವ ಸಂಬಂಧಗಳ ದಾಖಲೆ ಗಳನ್ನು ಭಾರತವು ಪ್ಯಾರಿಸ್ನಲ್ಲಿರುವ ಆರ್ಥಿಕ ಕಾರ್ಯಸಾಧು ಪಡೆ (ಎಫ್ಎಟಿಎಫ್)ಗೆ ನೀಡಲಿದೆ. ಒಂದು ವೇಳೆ ಭಾರತದ ಈ ದಾಖಲೆಗಳನ್ನು ಒಪ್ಪಿ ಪಾಕ್ ಅನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿದಲ್ಲಿ ಐಎಂಎಫ್, ವಿಶ್ವಬ್ಯಾಂಕ್, ಏಷ್ಯಾ ಅಭಿವೃದ್ಧಿ ಬ್ಯಾಂಕ್ ಮತ್ತು ಐರೋಪ್ಯ ಒಕ್ಕೂಟದಿಂದ ಹಣ ಬರುವುದು ನಿಲ್ಲುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ