ಪುಷ್ಪಗಿರಿ ವನ್ಯಧಾಮ ಜನವಸತಿ ಪ್ರದೇಶದಲ್ಲಿ ಕಾಡಾನೆ ಹಾವಳಿ


Team Udayavani, Feb 17, 2019, 3:54 AM IST

aane.jpg

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪುಷ್ಪಗಿರಿ ವನ್ಯಧಾಮದ ತಪ್ಪಲಿನ ಜನವಸತಿ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಅಧಿಕವಾಗಿದೆ. ನಾಡಿಗೆ ಇಳಿಯುತ್ತಿರುವ ಆನೆಗಳು ಬೆಳೆ ಹಾನಿಯ ಜತೆಗೆ ರಸ್ತೆಯಲ್ಲಿ ತೆರಳುವವರ ಮೇಲೆ ದಾಳಿಗೆ ಪ್ರಯತ್ನಿಸುತ್ತಿವೆ.

ಕೊಲ್ಲಮೊಗ್ರು, ಕಲ್ಮಕಾರು, ಹರಿಹರ, ಬಾಳುಗೋಡು, ಕಟ್ಟಗೋವಿಂದನಗರ ಮೊದಲಾದೆಡೆ ಒಂದು ವಾರದಿಂದ ನಿರಂತರವಾಗಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ. ಈ ಭಾಗದ ಹಲವು ಮಂದಿಯ ತೋಟಗಳಲ್ಲಿ ಫಸಲು ನೆಲಸಮವಾಗಿದೆ.

ಗುರುವಾರ ಸಂಜೆ ಹರಿಹರ ಪಳ್ಳತ್ತಡ್ಕ ಗ್ರಾಮದ ಗುಂಡಿಹಿತ್ಲು ನಿವಾಸಿ ವಿಶ್ವನಾಥ ಮುಂಡೋಡಿ ಅವರು ಸಂಜೆ 6 ಗಂಟೆಗೆ ವೇಳೆಗೆ ತನ್ನ ಪುತ್ರಿಯ ಜತೆ ಬೈಕಿನಲ್ಲಿ ಮನೆಯತ್ತ ತೆರಳುತ್ತಿದ್ದಾಗ ರಸ್ತೆ ಬದಿ ಆನೆ ಕಾಣಿಸಿಕೊಂಡು ಅಟ್ಟಿಸಿಕೊಂಡು ಬಂದಿತ್ತು. ಅದೃಷ್ಟವಶಾತ್‌ ಅವರಿಬ್ಬರು ಪಾರಾಗಿದ್ದರು.

ಈ ಪರಿಸರದಲ್ಲಿ ಕಾಡಾನೆಗಳು ಬೀಡುಬಿಟ್ಟಿದ್ದು, ಸತತ ನಾಲ್ಕು ದಿನಗಳಿಂದ ಪಳ್ಳತ್ತಡ್ಕ, ಗುಂಡಿಹಿತ್ಲು ಪರಿಸರದ ಕೃಷಿಕರ ತೋಟಗಳಿಗೆ ದಾಳಿ ಮಾಡಿ ಫಸಲು ನಷ್ಟ ಉಂಟು ಮಾಡುತ್ತಿವೆ. ಸಂಜೆಯಾಗುತ್ತಲೇ ತೋಟ ಹಾಗೂ ರಸ್ತೆ ಬದಿ ಕಾಣಿಸಿಕೊಳ್ಳುತ್ತಿರುವುದರಿಂದ ನಾಗರಿಕರು ಓಡಾಡಲು ಭಯ ಪಡುತ್ತಿದ್ದಾರೆ.

ಬಾಳುಗೋಡಿನ ಕೊತ್ನಡ್ಕ, ಉಪ್ಪುಕಳ, ಕಾಂತು ಕುಮೇರಿ ಭಾಗದಲ್ಲಿ ಕೂಡ ಹಾವಳಿ ಹೆಚ್ಚಿದ್ದು, ಕೊತ್ನಡ್ಕ ಪರಿಸರದ ನಿವಾಸಿಯೊಬ್ಬರು ಸಂಜೆ ವೇಳೆಗೆ ಮನೆಗೆ ಹಿಂದಿರುಗುವಾಗ ಆನೆ ಅಟ್ಟಿಸಿಕೊಂಡು ಬಂದ ಘಟನೆ 3 ದಿನಗಳ ಹಿಂದೆ ನಡೆದಿತ್ತು. ಕಾಂತುಕುಮೇರಿ ಪರಿಸರದಲ್ಲಿ ನಿತ್ಯವೂ ಆನೆಗಳು ಕಾಣಿಸಿಕೊಳ್ಳುತ್ತಿವೆ.

ಬೆಂಡೋಡಿಯ ಕೃಷಿಕ ಭವಾನಿಶಂಕರ ಪಿಂಡಿ ಮನೆಯವರ ತೋಟವನ್ನು ಆನೆಗಳು ಹಾಳುಗೆಡವಿವೆ. ಕಲ್ಮಕಾರು ಭಾಗದ ಗೂನಡ್ಕ, ಗುಳಿಕಾನ, ಬಾಳೆಬೈಲು, ಕಟ್ಟಗೋವಿಂದನಗರ ಮೊದಲಾದ ಕಡೆಗಳಲ್ಲಿ ಹಾವಳಿ ವಿಪರೀತವಾಗಿದೆ. ಫಸಲು ನಷ್ಟ ಆಗಿ ಅನುಭವಿಸುತ್ತಿರುವ ನೋವನ್ನು ಅರಣ್ಯ ಇಲಾಖೆ ಬಳಿ ತೋಡಿಕೊಂಡರೆ ವ್ಯತಿರಿಕ್ತವಾಗಿ ಉತ್ತರಿಸುತ್ತಾರೆ ಎಂದು ಕಟ್ಟಗೋವಿಂದನಗರದ ಕೃಷಿಕ ಪ್ರಕಾಶ್‌ ಭಟ್‌ ಹೇಳುತ್ತಾರೆ. ವರ್ಷದ ಬಹುತೇಕ ಅವಧಿಯಲ್ಲಿ ಕಾಡಾನೆ ಉಪಟಳ ಇಲ್ಲಿ ಕಂಡುಬರುತ್ತಿದ್ದು ರೈತರನ್ನು ಹೈರಾಣಾಗಿಸಿದೆ. ಕೆಲವು ದಿನಗಳಿಂದ ಹಾವಳಿ ವ್ಯಾಪಕವಾಗಿದ್ದು ಸಂಜೆಯ ಬಳಿಕ ಓಡಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ ಮಕ್ಕಳು ತೆರಳುವ ವೇಳೆ ರಸ್ತೆಬದಿ ಆನೆಗಳು ಪ್ರತ್ಯಕ್ಷಗೊಂಡು ಭೀತಿ ಹುಟ್ಟಿಸುತ್ತಿವೆ. 

ಇತರ ಪ್ರಾಣಿಗಳ ಉಪಟಳವೂ ಹೆಚ್ಚಿದೆ
ಜಿಂಕೆ, ಸಾರಂಗ, ಮುಳ್ಳುಹಂದಿ, ಕಾಡುಹಂದಿಗಳು, ಚಿರತೆ ಹಾವಳಿ ಕೂಡ ಈ ಭಾಗಗಳಲ್ಲಿ ಹೆಚ್ಚಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿಕರು ಏನೂ ಮಾಡಲಾಗದೆ ಕಂಗಾಲಾಗಿದ್ದು, ಸ್ಥಳೀಯ ಆರ್ಥಿಕತೆಯ ಸ್ಥಿತಿ ಹದೆಗೆಟ್ಟಿದೆ. ಅರಣ್ಯ ಇಲಾಖೆ ಕೆಲವೆಡೆ ಆನೆ ಕಂದಕ ನಿರ್ಮಿಸಿದ್ದರೂ ಪ್ರಯೋಜನವಾಗಿಲ್ಲ. ದೂರು ನೀಡಿದರೂ ಅರಣ್ಯ ಇಲಾಖೆ ಮೌನ ವಹಿಸಿದೆ ಎಂದು ಕೃಷಿಕರು ದೂರುತ್ತಿದ್ದಾರೆ.

ದೇವಸ್ಥಾನಕ್ಕೂ ಜನ ಬರುತ್ತಿಲ್ಲ
ಹರಿಹರ ಪಳ್ಳತ್ತಡ್ಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವವು ಫೆ.16ರಿಂದ ಆರಂಭಗೊಳ್ಳಲಿದೆ. ಆನೆ ಭೀತಿಯಿಂದಾಗಿ ನಾಗರಿಕರು ದೇವಸ್ಥಾನದ ಕಡೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬ್ರಹ್ಮಕಲಶೋತ್ಸವ ಸಂದರ್ಭದಲ್ಲಾದರೂ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಆನೆ ಹಿಂಬಾಲಿಸಿತ್ತು
ಸಂಜೆ ಮಗಳನ್ನು ಬೈಕಿನಲ್ಲಿ ಕುಳ್ಳಿರಿಸಿಕೊಂಡು ಮನೆ ಕಡೆ ತೆರಳುತ್ತಿದ್ದೆ. ಆನೆ ರಸ್ತೆ ಬದಿಯಲ್ಲಿ ಇತ್ತು. ನಮ್ಮನ್ನು ನೋಡಿ ಘೀಳಿಟ್ಟಿತು. ಭಯದಿಂದ ಓಡಿ ತಪ್ಪಿಸಿಕೊಂಡೆವು, ಪ್ರಾಣ ಉಳಿಯಿತು.
ವಿಶ್ವನಾಥ ಮುಂಡೋಡಿ, ಗುಂಡಿಹಿತ್ಲು ನಿವಾಸಿ

ತಂಡ ಕಳುಹಿಸುತ್ತೇವೆ
ಕಾಡಾನೆ ಹಾವಳಿ ತೀವ್ರವಾಗಿರುವ ಮಾಹಿತಿ ಇದೆ. ದೇವತಾ ಕಾರ್ಯ ಕೂಡ ಆ ಭಾಗದಲ್ಲಿ ನಡೆಯುತ್ತಿರುವುದರಿಂದ ರಾತ್ರಿ ಹೊತ್ತು ಆ ಭಾಗಕ್ಕೆ ವಿಶೇಷ ತಂಡವನ್ನು ಕಳುಹಿಸಿಕೊಡಲಾಗುವುದು. ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುವುದು.
ತ್ಯಾಗರಾಜ್‌, ಆರ್‌ಎಫ್ಓ ಸುಬ್ರಹ್ಮಣ್ಯ

ಬಾಲಕೃಷ್ಣ ಭೀಮಗುಳಿ​​​​​​​

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.